ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗುಜರಾತ್‌ಗೆ ಅಪ್ಪಳಿಸಿದ ಚಂಡಮಾರುತ, ಧಾರಾಕಾರ ಮಳೆ!

Twitter
Facebook
LinkedIn
WhatsApp
bus a 620x349 2

ಹೊಸದಿಲ್ಲಿ/ಅಹ್ಮದಾಬಾದ್‌: ಬಹು ನಿರೀಕ್ಷಿತ ಬಿಪರ್‌ಜಾಯ್‌ ಚಂಡಮಾರುತ ಗುಜರಾತ್‌ ಕರಾವಳಿಗೆ ಗುರುವಾರ ಅಪ್ಪಳಿಸಿದೆ. ಪ್ರತೀ ಗಂಟೆಗೆ 125ರಿಂದ 150 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹತ್ತು ದಿನಗಳಿಂದ ಈಚೆಗೆ ಹವಾಮಾನ ಇಲಾಖೆ ಸೇರಿದಂತೆ ಹಲವು ಇಲಾಖೆಗಳು ಜತೆಗೂಡಿ ಸಂಭಾವ್ಯ ಹಾನಿಯನ್ನು ತಡೆಯುವ ಪ್ರಯತ್ನ ಮಾಡಿವೆ. ಸಂಜೆ 4.30ರಿಂದ ಶುರುವಾದ ಚಂಡಮಾರುತ ಅಪ್ಪಳಿಸುವ ಪ್ರಕ್ರಿಯೆ ಮಧ್ಯರಾತ್ರಿಯ ವರೆಗೆ ಮುಂದುವರಿದಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಸೌರಾಷ್ಟ್ರ, ಕಛ್‌ ಅನ್ನು ದಾಟಿ ಪಾಕಿಸ್ಥಾನದ ಸಿಂಧ್‌ ಪ್ರಾಂತದ ಕರಾವಳಿಯತ್ತ ಚಂಡಮಾರುತ ಸಾಗಿದೆ.

ಚಂಡಮಾರುತದ ಪ್ರಭಾವದಿಂದಾಗಿ ಈಗಾಗಲೇ ಗುಜರಾತ್‌ನ ಕಛ್‌, ದ್ವಾರಕ, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್‌, ಪೋರ್‌ಬಂದರ್‌, ಗಿರ್‌ಸೋಮನಾಥ ಜಿಲ್ಲೆಗಳಾದ್ಯಂತ ಸುರಿಯುತ್ತಿದ್ದ ಧಾರಾಕಾರ ಮಳೆ, ಗುರುವಾರದ ವೇಳೆಗೆ ಅದು ಮತ್ತಷ್ಟು ಬಿರುಸಾಗಿದೆ. 2021ರಲ್ಲಿ ತೌಕ್ತೇ ಚಂಡಮಾರುತದ ಬಳಿಕ ರಾಜ್ಯ ಎದುರಿಸುತ್ತಿರುವ ಅತ್ಯಂತ ದೊಡ್ಡ ಮಟ್ಟದ ಚಂಡಮಾರುತ ಇದಾಗಿದೆ.

ಒಂದು ಲಕ್ಷ ಮಂದಿ: ಕಛ್‌, ದ್ವಾರಕ, ಜಾಮ್‌ನಗರ, ಮೊರ್ಬಿ, ರಾಜ್‌ಕೋಟ್‌, ಪೋರ್‌ಬಂದರ್‌, ಗಿರ್‌ಸೋಮ ನಾಥ ಜಿಲ್ಲೆಗಳಿಂದ ಸರಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಮಂದಿಯನ್ನು ಆಯಾ ಜಿಲ್ಲೆಗಳಲ್ಲಿ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿರುವ ತಾತ್ಕಾಲಿಕ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ.

ಹಲವೆಡೆ ಹಾನಿ
ಗಾಳಿಯ ರಭಸ ತೀವ್ರಗೊಳ್ಳುತ್ತಿರುವಂತೆಯೇ ದ್ವಾರಕ, ಕಛ್‌, ಪೋರ್‌ಬಂದರ್‌ ಸೇರಿದಂತೆ ಹಲವೆಡೆ ಹಾನಿ ಸಂಭವಿಸಿದೆ. ಸದ್ಯಕ್ಕೆ ಯಾವುದೇ ಸಾವು ನೋವು ಉಂಟಾದ ಬಗ್ಗೆ ವರದಿಗಳು ಬಂದಿಲ್ಲ. ದ್ವಾರಕ ಜಿಲ್ಲೆಯಲ್ಲಿ ಮರ ಬಿದ್ದು ಮೂವರಿಗೆ ಗಾಯಗಳಾಗಿವೆ. ಗುಜರಾತ್‌ನ ಕರಾವಳಿ ಭಾಗದಲ್ಲಿ ವಿದ್ಯುತ್‌ ಕಂಬಗಳು, ಮರಗಳು ಉರುಳಿ ಬಿದ್ದಿವೆ. ಕಛ್‌ ಜಿಲ್ಲೆಯಲ್ಲಿ ಇರುವ ಜಖೌ, ಮಾಂಡವಿಯಲ್ಲಿ ಕೂಡ ಮಳೆ, ಗಾಳಿಯ ರಭಸಕ್ಕೆ ವಿದ್ಯುತ್‌ ಕಂಬಗಳು, ಮರಗಳು ಉರುಳಿ ಬಿದ್ದಿವೆ.

ರಕ್ಷಣ ಕಾರ್ಯಾಚರಣೆ
ಹಾನಿಗೆ ಗುರಿಯಾಗಿರುವ ಎಲ್ಲ ಜಿಲ್ಲೆಗಳಲ್ಲಿ ಗುಜರಾತ್‌ ಪೊಲೀಸ್‌ ಇಲಾಖೆ, ಭೂಸೇನೆ, ಎನ್‌ಡಿಆರ್‌ಎಫ್, ರಾಜ್ಯ ವಿಪತ್ತು ನಿರ್ವಹಣ ಪಡೆ, ಐಎಎಫ್, ಭಾರತೀಯ ನೌಕಾದಳಗಳು ವಿವಿಧ ರೀತಿಯಲ್ಲಿ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ನೆರವಾಗುತ್ತಿವೆ.

ಶಾಲೆಗಳಿಗೆ ರಜೆ
ಅಹ್ಮದಾಬಾದ್‌, ನವಸಾರಿ ಸೇರಿದಂತೆ ಧಾರಾಕಾರ ಮಳೆಯಾ ಗುತ್ತಿರುವ ಹಲವು ಜಿಲ್ಲೆಗಳಲ್ಲಿ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ 17ರ ವರೆಗೆ ರಜೆ ಘೋಷಿಸಲಾಗಿದೆ. ಗುಜರಾತ್‌ ತಾಂತ್ರಿಕ ವಿವಿಯ ಎಲ್ಲ ಕೋರ್ಸ್‌ಗಳ ಪರೀಕ್ಷೆಗಳನ್ನು ಪ್ರಾಕೃತಿಕ ವಿಪತ್ತಿನ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಸದ್ಯದ ಮಟ್ಟಿಗೆ ಜು.17ರ ಬಳಿಕ ಅವುಗಳನ್ನು ನಡೆಸಲು ವಿವಿಯ ಆಡಳಿತ ತೀರ್ಮಾನಿಸಿದೆ.

ದ್ವಾರಕಾಧೀಶ ದೇಗುಲ ಮುಚ್ಚಲು ನಿರ್ಧಾರ
ಚಂಡಮಾರುತದ ಪ್ರಭಾವದಿಂದಾಗಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ್ವಾರಕ ಜಿಲ್ಲೆಯಲ್ಲಿ ಇರುವ ದ್ವಾರಕಾಧೀಶ ದೇಗುಲವನ್ನು ಕೆಲವು ದಿನಗಳ ವರೆಗೆ ಮುಚ್ಚಲು ತೀರ್ಮಾನಿಸಲಾಗಿದೆ. ಭಾರತೀಯ ಪುರಾತತ್ವ ಇಲಾಖೆ (ಎಎಸ್‌ಐ) ಉಸ್ತುವಾರಿಯಲ್ಲಿ ಈ ದೇಗುಲ ಬರುತ್ತಿದೆ. ಅದರ ಇನ್ನೂ ಸಣ್ಣ ದೇಗುಲಗಳಿಗೆ ಕೂಡ ಸಾರ್ವಜನಿಕರ ಪ್ರವೇಶವನ್ನು ಮುನ್ನೆಚ್ಚರಿಕೆಯ ಕಾರಣದಿಂದ ನಿಷೇಧಿಸಲಾಗಿದೆ. ಚಂಡಮಾರುತವನ್ನು ತಡೆಯುವಂಥ ದೊಡ್ಡ ಗೋಡೆಯನ್ನು ನಿರ್ಮಾಣ ಮಾಡಲು ಸಾಧ್ಯವಿಲ್ಲ. ಆದರೆ ಭಕ್ತರ ಜೀವ ರಕ್ಷಣೆಯ ಬಗ್ಗೆ ಕ್ರಮ ಕೈಗೊಳ್ಳಲು ಸಾಧ್ಯ ಎಂದು ರಾಜ್‌ಕೋಟ್‌ ವಲಯದ ಎಎಸ್‌ಐ ಅಧಿಕಾರಿ ಹೇಳಿದ್ದಾರೆ.

ಬಿಪರ್‌ಜಾಯ್‌ ಹೆಸರು !
ಗುಜರಾತ್‌ಗೆ ಬಿಪರ್‌ಜಾಯ್‌ ಚಂಡಮಾರುತ ಅಪ್ಪಳಿಸಿದೆ. ಅದರ ಹೆಸರನ್ನೇ ಶಿಶುವಿಗೆ ಇರಿಸಿದ ಅಂಶ ಬೆಳಕಿಗೆ ಬಂದಿದೆ. ಈ ತಿಂಗಳ ಆರಂಭದಲ್ಲಿ ಚಂಡಮಾರುತ ಏಳಲಿದೆ ಎಂದು ಗೊತ್ತಾಗುತ್ತಿದ್ದಂತೆಯೇ ಆ ಶಿಶು ಜನಿಸಿತ್ತು. ಕಛ್‌ನ ಜಖೌನ ತಾತ್ಕಾಲಿಕ ನಿರಾಶ್ರಿತರ ಕುಟುಂಬಗಳನ್ನು ಸ್ಥಳಾಂತರಿಸುವ ವೇಳೆ ಈ ಅಚ್ಚರಿಯ ವಿಚಾರ ಜಗತ್ತಿಗೆ ಗೊತ್ತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist