ಸೋಮವಾರ, ಫೆಬ್ರವರಿ 3, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

6 ಟ್ರಂಕ್ ಗಳೊಂದಿಗೆ ಬೆಂಗಳೂರಿಂದ ತಮಿಳುನಾಡಿಗೆ ದಿ.ಜಯಲಲಿತಾರವರ ಆಭರಣ ಮತ್ತು ವಸ್ತುಗಳು ಹಸ್ತಾಂತರ; ಕೋರ್ಟ್ ಹೇಳಿರೋದೇನು?

Twitter
Facebook
LinkedIn
WhatsApp
6 ಟ್ರಂಕ್ ಗಳೊಂದಿಗೆ ಬೆಂಗಳೂರಿಂದ ತಮಿಳುನಾಡಿಗೆ ದಿ.ಜಯಲಲಿತಾರವರ ಆಭರಣ ಮತ್ತು ವಸ್ತುಗಳು ಹಸ್ತಾಂತರ; ಕೋರ್ಟ್ ಹೇಳಿರೋದೇನು?

ಬೆಂಗಳೂರು, ಫೆ.20: ಅಂತೂ ಇಂತೂ ಬೆಂಗಳೂರಿನ ಕೋರ್ಟ್ ಕಸ್ಟಡಿಯಲ್ಲಿದ್ದ ದಿವಂಗತ ಜಯಲಲಿತಾರ (J. Jayalalithaa) ಆಭರಣಗಳು ತಮಿಳುನಾಡಿಗೆ (Tamil Nadu) ಮರಳಲು ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನ ವಿಶೇಷ ಕೋರ್ಟ್ 6 ಟ್ರಂಕ್ ಗಳೊಂದಿಗೆ ಬೆಂಗಳೂರಿಗೆ ಬರುವಂತೆ ತಮಿಳುನಾಡಿನ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಅಷ್ಟಕ್ಕೂ ತಮಿಳುನಾಡಿಗೆ ಮರಳಲಿರುವ ಜಯಲಲಿತಾರ ವಸ್ತುಗಳು ಯಾವುವು? ಕೋರ್ಟ್ ಹೇಳಿರೋದೇನು? ಡಿಟೈಲ್ಸ್ ಇಲ್ಲಿದೆ.

 

ಕರ್ನಾಟಕದ ಮೇಲುಕೋಟೆಯಲ್ಲಿ ಜನಿಸಿದ್ದ ತಮಿಳುನಾಡು ಸಿಎಂ ಜಯಲಲಿತಾ ಅವರು ಆದಾಯ ಮೀರಿದ‌ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿ ಬೆಂಗಳೂರಿನ ಜೈಲಿನಲ್ಲಿದ್ರು. ವಿಚಾರಣೆ ಬೆಂಗಳೂರಿನಲ್ಲಿ ನಡೆದಿದ್ದರಿಂದ ಜಯಲಲಿತಾರಿಂದ ವಶಕ್ಕೆ ಪಡೆದಿದ್ದ ಆಭರಣ, ಸೀರೆ ಮತ್ತಿತರ ವಸ್ತುಗಳೂ ಬೆಂಗಳೂರಿನ ಕೋರ್ಟ್ ಸುಪರ್ದಿಯಲ್ಲೇ ಇದ್ದವು.‌ ಇದೀಗ ಈ ಆಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂತಿರುಗಿಸಲು ಕೋರ್ಟ್ ನಿರ್ಧರಿಸಿದೆ. ದಿವಂಗತ ಜಯಲಲಿತಾ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಜಪ್ತಿಯಾಗಿದ್ದ ಜಯಲಲಿತಾರ ಒಡವೆ ಹಿಂತಿರುಗಿಸಲು ದಿನಾಂಕ‌ ನಿಗದಿಪಡಿಸಿರುವ ಕೋರ್ಟ್ ಮಾರ್ಚ್ 6 ಮತ್ತು 7 ರಂದು ತಮಿಳುನಾಡು ಸರ್ಕಾರಕ್ಕೆ‌ ಒಡವೆ ಹಸ್ತಾಂತರ ಮಾಡಲು ತೀರ್ಮಾನಿಸಿದೆ

 ಒಡವೆ ಸ್ವೀಕರಿಸಲು ತಮಿಳುನಾಡು ಸರ್ಕಾರದಿಂದ ಇಬ್ಬರು ಅಧಿಕಾರಿಗಳ ನೇಮಕವಾಗಿದೆ. ತಮಿಳುನಾಡು ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ, ಐಜಿಪಿ ವಿಜಿಲೆನ್ಸ್ ಹಾಜರಿರಬೇಕು ಎಂದು ವಿಶೇಷ ನ್ಯಾಯಾಧೀಶ ಮೋಹನ್ ಸೂಚನೆ ನೀಡಿದ್ದಾರೆ.‌ ಒಡವೆ ಮತ್ತಿತರ ಜಯಲಲಿತಾರ ವಸ್ತುಗಳನ್ನು ಒಯ್ಯಲು 6 ಟ್ರಂಕ್ ಗಳನ್ನು ತರಬೇಕು ವಿಡಿಯೋಗ್ರಾಫರ್, ಫೋಟೋಗ್ರಾಫರ್ ಕರೆತರಲು ಸೂಚನೆ ನೀಡಿದೆ. ಒಡವೆ ಹಸ್ತಾಂತರದ‌‌ ಎರಡೂ ದಿನಗಳು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ ನೀಡಿದೆ.

6 ಟ್ರಂಕ್ ಗಳಲ್ಲಿ ಜಯಲಲಿತಾರ ವಸ್ತುಗಳು

7040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಚಪ್ಪಲಿಗಳು, 11344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿ.ವಿ. ಸೆಟ್ , 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೆಕಾರ್ಡರ್, 1040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್​ಗಳನ್ನು ತೆಗೆದುಕೊಂಡು ಹೋಗಲು 6 ಟ್ರಂಕ್​ಗಳು ತಮಿಳುನಾಡಿನಿಂದ ಬೆಂಗಳೂರಿಗೆ ಬರಲಿವೆ.

ಹೀಗೆ 6 ದೊಡ್ಡ ಟ್ರಂಕ್ ಗಳಲ್ಲಿ ಜಯಲಲಿತಾರ ಅಮೂಲ್ಯ ವಸ್ತುಗಳನ್ನು ಬೆಂಗಳೂರಿನ ಕೋರ್ಟ್ ತಮಿಳುನಾಡಿಗೆ ಮರಳಿಸಲಿದೆ. ವ್ಯಾಜ್ಯ ಶುಲ್ಕವಾಗಿ ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ 5 ಕೋಟಿ ರೂಪಾಯಿ ಪಾವತಿಸಬೇಕೆಂದು ಕೋರ್ಟ್ ಸೂಚನೆ ನೀಡಿದೆ. ಒಟ್ಟಿನಲ್ಲಿ ದಶಕಗಳ ಕಾಲ ಬೆಂಗಳೂರಿನ ಕೋರ್ಟ್ ಸುಪರ್ದಿನಲ್ಲಿದ್ದ ಜಯಲಲಿತಾರ ದುಬಾರಿ ಒಡವೆ, ವಸ್ತುಗಳು ತಮಿಳುನಾಡು ಸರ್ಕಾರ ಸೇರಲಿದ್ದು,‌ ಒಡವೆಗಳ ವಿಲೇವಾರಿಯ ಬಗ್ಗೆ ಅಲ್ಲಿನ ಸರ್ಕಾರವೇ ತೀರ್ಮಾನಿಸಬೇಕಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist