ಬುಧವಾರ, ಮಾರ್ಚ್ 12, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

Twitter
Facebook
LinkedIn
WhatsApp
ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!

ಚೆನ್ನೈ: ಮಿಚಾಂಗ್ ಚಂಡಮಾರುತ (Cyclone Michaung) ರೌದ್ರರೂಪ ತಾಳಿದೆ. ಪರಿಣಾಮ ತಮಿಳುನಾಡು (Tamilnadu), ಆಂಧ್ರದಲ್ಲಿ (Andhra Pradesh) ಭಾರೀ ಮಳೆಯಾಗಿದೆ. ಕಳೆದ 80 ವರ್ಷಗಳಲ್ಲಿ ಕಂಡು ಕೇಳರಿಯದ ಭಾರೀ ಬಿರುಗಾಳಿ ಸಹಿತ ಮಳೆಗೆ ಚೆನ್ನೈ ನಗರವಂತೂ ಪ್ರವಾಹ ಕಾರಣ ಹೆಚ್ಚು ಕಡಿಮೆ ಸ್ತಂಭಿಸಿದೆ. ಬಿಟ್ಟುಬಿಡದೇ ಸುರಿತಿರೋ ಮಳೆಯ (Rain) ಪರಿಣಾಮ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ.

ಚೆನ್ನೈನಲ್ಲಿ 5 ಮಂದಿ ಬಲಿಯಾಗಿದ್ದು, ನೀರುಪಾಲಾಗುತ್ತಿದ್ದ 20ಕ್ಕೂ ಹೆಚ್ಚು ಜನರನ್ನು ರಕ್ಷಣಾ ಪಡೆಗಳು ಕಾಪಾಡಿವೆ. ನಗರದ 14 ರೈಲ್ವೇ ಸಬ್‍ವೇಗಳು ಬಂದ್ ಆಗಿವೆ. ರೈಲು-ವಿಮಾನ-ರಸ್ತೆ ಸಂಚಾರದಲ್ಲಿ ತೀವ್ರ ವ್ಯತ್ಯಯವಾಗಿವೆ. ಚೆನ್ನೈ ಏರ್ ಪೋರ್ಟ್‍ನಲ್ಲಿ ನೀರು ಆವರಿಸಿದೆ. ಪ್ರಮುಖ ರಸ್ತೆಗಳು ಜಲಮಯವಾಗಿವೆ. ಚೆನ್ನೈ ಸಾರಿಗೆ ಬಸ್‍ಗಳು ಸಹ ರಸ್ತೆಗೆ ಇಳಿದಿಲ್ಲ. ಮನೆಗಳಿಗೂ ನೀರು ನುಗ್ಗಿದೆ. ವಾಹನಗಳು ನೀರಲ್ಲಿ ಮುಳುಗಿವೆ. ಕೋರ್ಟ್-ಕಚೇರಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯುತ್, ನೀರು ಸರಬರಾಜು ವ್ಯವಸ್ಥೆ ಅಸ್ಥವ್ಯಸ್ತವಾಗಿದೆ. ಸಾಧ್ಯವಾದಷ್ಟು ಜನ ಮನೆಗೆ ಸೀಮಿತ ಆಗಬೇಕು ಎಂದು ಸರ್ಕಾರ ಕೋರಿದೆ.

ಕಾಂಚಿಪುರಂ, ಚೆಂಗಲ್‍ಪಟ್ಟು, ತಿರುವಳ್ಳುವರ್ ಜಿಲ್ಲೆಗಳಲ್ಲೂ ವ್ಯಾಪಕ ಮಳೆ ಆಗುತ್ತಿದೆ. ಆಂಧ್ರದ ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆ ಆಗುತ್ತಿದೆ. ತಿರುಮಲದಲ್ಲಿ ಮಳೆ ಕಾರಣ ಭಕ್ತರು ಪರದಾಡಿದರು. ಇಂದು ಮಧ್ಯಾಹ್ನ 12 ಗಂಟೆಗೆ ಮಿಚೌಂಗ್ ಚಂಡಮಾರುತ ನಿಜಾಂಪಟ್ಟಣಂ ಬಳಿ ತೀರ ದಾಟಲಿದೆ. ನಂತರ ಕೋಸ್ತಾ ಆಂಧ್ರ ತೀರಕ್ಕೆ ಸಮನಾಂತವಾರವಾಗಿ ಚಲಿಸಲಿದೆ.

ಸದ್ಯ ಚೆನ್ನೈನಿಂದ 90 ಕಿಲೋಮೀಟರ್ ದೂರದಲ್ಲಿ ಚಲಿಸುತ್ತಿದೆ. 90ರಿಂದ 100 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಸಮುದ್ರ ಪ್ರಕುಬ್ಧಗೊಂಡಿದೆ. ಚೆನ್ನೈ ತಲುಪಬೇಕಿದ್ದ 27ಕ್ಕೂ ಹೆಚ್ಚು ವಿಮಾನಗಳು ಬೆಂಗಳೂರು ಸೇರಿವೆ. ಕರ್ನಾಟಕದಿಂದ ತಮಿಳುನಾಡಿಗೆ ತೆರಳುವ ರೈಲು ಸೇವೆ ಕೂಡ ಬಂದ್ ಆಗಿದೆ.

Cyclone Michaung- ನೆಲ್ಲೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಬಾಲಕ ದುರ್ಮರಣ

ಅಮರಾವತಿ: ಮಿಚೌಂಗ್ ಚಂಡಮಾರುತ (Cyclone Michaung) ಭಾರೀ ಅನಾಹುತ ಸೃಷ್ಟಿಸುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು ಹಾಗೂ ಒಡಿಶಾ ತೀರ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿದೆ.

ಆಂಧ್ರದ ನೆಲ್ಲೂರು (Nelluru Andhra Pradesh) ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆ ಬಾಲಕನೊಬ್ಬನನ್ನು ಬಲಿ ಪಡೆದಿದೆ. ಬಿರುಗಾಳಿಯ ತೀವ್ರತೆಗೆ ಗುಡಿಸಲು ಕುಸಿದು ಬಾಲಕ ಬಲಿ ಆಗಿದ್ದಾನೆ. ಸದ್ಯ ನೆಲ್ಲೂರಿಗೆ ಆಗ್ನೇಯ ದಿನನಲ್ಲಿ 440 ಕಿಲೋಮೀಟರ್ ದೂರದಲ್ಲಿ ಚಂಡಮಾರುತ ಕೇಂದ್ರೀಕೃತವಾಗಿದೆ. ವಾಯುವ್ಯ ದಿಕ್ಕಿನತ್ತ ಪಯಣಿಸುತ್ತಿರುವ ಈ ಚಂಡಮಾರುತ ಡಿಸೆಂಬರ್ 5 ರಂದು ನೆಲ್ಲೂರು-ಮಚಲಿಪಟ್ಟಣಂ ನಡುವೆ ತೀರ ದಾಟಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

ಸಂಜೆ ದೆಹಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ (Narendra Modi), ಮಿಚೌಂಗ್ ಚಂಡಮಾರುತ ಎದುರಿಸಲು ಎಲ್ಲಾ ಸನ್ನದ್ಧತೆ ನಡೆಸಲಾಗಿದೆ. ತೀರ ಪ್ರದೇಶದ ರಾಜ್ಯಗಳ ಜೊತೆ ಸತತವಾಗಿ ಸಂಪರ್ಕದಲ್ಲಿದ್ದೇವೆ. ಬಿಜೆಪಿ ಕಾರ್ಯಕರ್ತರು ನೆರವಿಗೆ ಧಾವಿಸಬೇಕು ಎಂದು ಕರೆ ನೀಡಿದ್ದಾರೆ. 

ತಮಿಳುನಾಡಿನ (Thamilnadu) ಚೆನೈ, ತಿರುವಳ್ಳೂರ್, ಕಾಂಚೀಪುರಂ ಹಾಗೂ ಚೆನ್ನಗಲ್ ಪಟ್ಟು ಈ ನಾಲ್ಕು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋೀಷಿಸಲಾಗಿದೆ. ಅಲ್ಲದೆ ತಮಿಳುನಾಡು ಸರ್ಕಾರ ಇಂದು ನಾಲ್ಕು ಜಿಲ್ಲೆಗಳ ಶಾಲಾ ಕಾಲೇಜು, ಸರ್ಕಾರಿ ಕಛೇರಿ ಸೇರಿದಂತೆ ಸಾರ್ವಜನಿಕ ಕಚೇರಿಗಳಿಗೆ ರಜೆ ಘೋಷಣೆ ಮಾಡಿದೆ.

ಅರಬ್ಬಿ ಸಮುದ್ರ ಮೂಲಕ 310 ಕಿಲೋ ಮೀಟರ್ ವೇಗದಲ್ಲಿ ತಮಿಳುನಾಡಿನ ಚೆನೈ ಗೆ ಎಂಟ್ರಿ ಕೊಡಲಿರೋ ಚಂಡಮಾರುತವು ಬೇ ಆಫ್ ಬೆಂಗಾಲ್ ಸೌಥ್ ರೀಜನ್ ಮೂಲಕ ಹಾದು ಹೊಗಲಿದೆ. ಚಂಡಮಾರುತದ ಎಫೆಕ್ಟ್ ನಿಂದ ರಾಜ್ಯದ ದಕ್ಷಿಣ ಒಳನಾಡು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist