Rain Alert : ಕೊಡಗಿನಲ್ಲಿ ತಂಪೆರೆದ ಮಳೆರಾಯ ; ಮುಂದಿನ 3 ದಿನಗಳ ಕಾಲ ಕೆಲವೆಡೆ ಮಳೆ ಮುನ್ಸೂಚನೆ..!
ಕೊಡಗು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಮಳೆಯಾಗಿದ್ದು (Karnataka Rain), ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣ ಹವೆ ಇತ್ತು. ಅಲ್ಲದೆ, ಮುಂದಿನ ಎರಡು ದಿನಗಳ ಕಾಲ ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ. ಮಡಿಕೇರಿ ತಾಲೂಕಿನ ಚೈಯ್ಯಂಡಾಣೆ, ಕುಂಜಿಲಗೇರಿ, ಬೆಳ್ಳುಮಾಡು ವ್ಯಾಪ್ತಿಯಲ್ಲಿ ವರ್ಷದ ಮೊದಲ ಮಳೆಯಾಗಿದ್ದು, ಬರದಿಂದ ಕಂಗೆಟ್ಟಿದ್ದ ರೈತರಲ್ಲಿ ಮಂದಹಾಸ ಮೂಡಿದೆ.
ಮುಂದಿನ 24 ಗಂಟೆಗಳಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಬಹಳಷ್ಟಿದೆ. ಕರಾವಳಿಯಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 48 ಗಂಟೆಗಳಲ್ಲಿಯೂ ಇದು ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದಾಗ್ಯೂ, ಗುಡುಗು, ಭಾರೀ ಮಳೆ ಇಲ್ಲ ಎಂದು ವರದಿಯಲ್ಲಿ ತಿಳಿಸಿದೆ.
ಭಾನುವಾರ ಬೀದರ್, ಚಿಕ್ಕಮಗಳೂರಿನಲ್ಲಿ ಮಳೆ : ಭಾನುವಾರ ಬೀದರ್ ಜಿಲ್ಲೆಯ ವಿವಿಧ ಕಡೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಿದೆ. ಬೀದರ್ ಮಾತ್ರವಲ್ಲದೆ ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳಲ್ಲಿ ಕೂಡ ಮಳೆ ಸುರಿದಿದೆ.
ಬೀದರ್ ನಗರದಲ್ಲಿ ಭಾನುವಾರ 62 ಮಿ.ಮೀ ಮಳೆಯಾಗಿದೆ. ಬಿಸಿಲ ಬೇಗೆಗೆ ಕಾದು ಕೆಂಡದಂತಾಗಿದ್ದ ಭೂಮಿಗೆ ಮಳೆ ತಂಪೆರದಿದೆ. ಮಲಚಾಪುರ 45 ಮಿ.ಮೀ, ಆನದೂರು 37 ಮಿ.ಮೀ, ಬೀದರ್ ದಕ್ಷಿಣ 36.5 ಮಿ.ಮೀ, ಬಾಗಧಾಳ 34.5 ಮಿ.ಮೀ, ಮೀಂಕೆರಾ 25.5 ಮಿ.ಮೀ, ಔರಾದ 21 ಮಿ.ಮೀ, ಕಪಾಲಪುರದಲ್ಲಿ 24 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ಕೆಲವು ದಿನಗಳಲ್ಲೆ ಬೆಂಗಳೂರಿನಲ್ಲೂ ಮಳೆ? ಹವಾಮಾನ ಇಲಾಖೆ ವರದಿಗಳ ಪ್ರಕಾರ ಮಾರ್ಚ್ ಅಂತ್ಯದ ವೇಳೆಗೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ ಮೊದಲನೇ ವಾರ ಅಥವಾ ಎರಡನೇ ವಾರದ ವೇಳೆಗೆ ಬೆಂಗಳೂರಿನಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಬೀದರ್ ನಗರದಲ್ಲಿ ಭಾನುವಾರ 62 ಮಿ.ಮೀ ಮಳೆಯಾಗಿದೆ. ಬಿಸಿಲ ಬೇಗೆಗೆ ಕಾದು ಕೆಂಡದಂತಾಗಿದ್ದ ಭೂಮಿಗೆ ಮಳೆ ತಂಪೆರದಿದೆ. ಮಲಚಾಪುರ 45 ಮಿ.ಮೀ, ಆನದೂರು 37 ಮಿ.ಮೀ, ಬೀದರ್ ದಕ್ಷಿಣ 36.5 ಮಿ.ಮೀ, ಬಾಗಧಾಳ 34.5 ಮಿ.ಮೀ, ಮೀಂಕೆರಾ 25.5 ಮಿ.ಮೀ, ಔರಾದ 21 ಮಿ.ಮೀ, ಕಪಾಲಪುರದಲ್ಲಿ 24 ಮಿ.ಮೀ ಮಳೆಯಾಗಿದೆ ಎಂದು ವರದಿಯಾಗಿದೆ.
ತಾಪಮಾನ ಮುನ್ಸೂಚನೆ
ಕರಾವಳಿಯ ಬಾಗಲಕೋಟೆ, ಹಾವೇರಿ, ಕೊಪ್ಪಳ, ದಾವಣಗೆರೆ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 20ರ ಬೆಳಗ್ಗೆ ವರೆಗೆ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಗರಿಷ್ಠ ಉಷ್ಣಾಂಶ 35 ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಬಹಳಷ್ಟಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.