ಮಂಗಳವಾರ, ಡಿಸೆಂಬರ್ 5, 2023
ಅರ್ಜುನನ ಅಂತ್ಯಕ್ರಿಯೆ ವೇಳೆ ಪ್ರತಿಭಟನೆ: ಪೊಲೀಸರಿಂದ ಲಾಠಿ ಚಾರ್ಜ್!-ಬಿಜೆಪಿ ಮುಖಂಡ ಪೃಥ್ವಿಸಿಂಗ್​ಗೆ ಚಾಕು ಇರಿತ: ದೂರು ದಾಖಲು!-ಕಾಲೇಜು ಕಟ್ಟಡದ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು!-ಕರ್ನಾಟಕ ಹೈಕೋರ್ಟ್ ಕಲಾಪದಲ್ಲಿ ವಿಡಿಯೋ ಕಾನ್ಫರೆನ್ಸ್ ಆ್ಯಪ್​ನಲ್ಲಿ ಅಶ್ಲೀಲ ದೃಶ್ಯ ಅಪ್​ಲೋಡ್..!-ಆಹಾರ ಧಾನ್ಯಗಳ ಮೂಟೆಯಡಿ ಸಿಲುಕಿ ಐವರು ಕಾರ್ಮಿಕರ ಸಾವು-ಸಿಐಡಿಯಲ್ಲಿ ಪ್ರಮುಖ ಪಾತ್ರ ನಿರ್ವಹಿಸಿರುವ ಫ್ರೆಡ್ರಿಕ್ಸ್ ಖ್ಯಾತಿಯ ನಟ ದಿನೇಶ್ ಫಡ್ನಿಸ್ ಹೃದಯಾಘಾತದಿಂದ ನಿಧನ.!-ನಾಯಿ ಬೊಗಳಿದಕ್ಕೆ ಗಲಾಟೆ; ಆ್ಯಸಿಡ್​ ಎರಚಿದ ದಂಪತಿ!-ಮರಕ್ಕೆ ಬಸ್ ಡಿಕ್ಕಿ 14 ಜನ ಸಾವು, 20 ಮಂದಿ ಗಾಯ-ಮುಂಬೈ ದಾಳಿಯ ಉಗ್ರನಿಗೆ ಪಾಕ್‌ ಜೈಲಿನಲ್ಲೇ ವಿಷ ಪ್ರಾಶನ..!-ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ, ಹುಳಿ ಹಿಂಡಿದ ಸಿಎಂ ಇಬ್ರಾಹಿಂ.! ಇಬ್ಭಾಗ ಆಗುತ್ತಾ ಜೆಡಿಎಸ್?

Twitter
Facebook
LinkedIn
WhatsApp
ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ, ಹುಳಿ ಹಿಂಡಿದ ಸಿಎಂ ಇಬ್ರಾಹಿಂ.! ಇಬ್ಭಾಗ ಆಗುತ್ತಾ ಜೆಡಿಎಸ್?

ಬೆಂಗಳೂರು: ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದಕ್ಕೆ ಅಸಮಾಧಾನಗೊಂಡಿದ್ದ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಇದೀಗ ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದಾರೆ. 

ಜೆಡಿಎಸ್ ಕರ್ನಾಟಕ ಚಿಂತನ ಮಂಥನ ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ, ಜೆಡಿಎಸ್ ಪಕ್ಷಕ್ಕೆ ನಾನು ರಾಜ್ಯಾಧ್ಯಕ್ಷ. ನನ್ನನ್ನು ತೆಗೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಪಕ್ಷ ಒಂದು ಕುಟುಂಬದ ಸ್ವತ್ತಲ್ಲ ಎಂದರು. ಜಾತ್ಯತೀತತೆ ಜೆಡಿಎಸ್ ಪಕ್ಷದ್ದ ಸಿದ್ಧಾಂತವಾಗಿದೆ. ಆದರೆ ಬಿಜೆಪಿಯ ಸಿದ್ಧಾಂತವೇ ಬೇರೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಎನ್​ಡಿಎ ಮೈತ್ರಿಕೂಟವನ್ನು ಸೋಲಿಸಲು ನಾವು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತೇವೆ ಎಂದು ಇಬ್ರಾಹಿಂ ಹೇಳಿದ್ದಾರೆ.

ಕುಮಾರಸ್ವಾಮಿ ಶಾಸಕರಾಗಿರುವುದಕ್ಕೆ ಅಮಿಶ್ ಶಾ ಕರೆದಿದ್ದಾರೆ. ಆದರೆ ಚನ್ನಪಟ್ಟಣ ಕ್ಷೇತ್ರದಲ್ಲಿ ಹೆಚ್ ಡಿ ಕುಮಾರಸ್ವಾಮಿ ಗೆದ್ದಿದ್ದು ಯಾರಿಂದ. ಅಲ್ಲಿ ಮುಸ್ಲಿಮರು ಮತ ಹಾಕದಿದ್ದರೆ ನೀವು ಸೋತು ಮನೆ ಸೇರುತ್ತಿದ್ದರು. ಹೀಗಾಗಿ ಈಗಲೂ ಬಿಜೆಪಿ ಜೊತೆ ಹೋಗದೆ ಕೋರ್ ಕಮಿಟಿ ಮಾಡಿ ಸಾಧಕ ಭಾದಕಗಳ ಬಗ್ಗೆ ಚರ್ಚೆ ಮಾಡುತ್ತೇವೆ. ನಾವು ಮೈತ್ರಿ ಮಾಡಿಕೊಂಡರೆ ನಾಲ್ಕು ಸೀಟು ಸಿಗುತ್ತದೆ. ನಾವು ಶಕ್ತಿ ಪ್ರದರ್ಶನ ಮಾಡಬಹುದಿತ್ತು. ನಾನು ಕೋರ್ ಕಮಿಟಿ ರಚನೆ ಮಾಡಿ ರಾಜ್ಯ ಪ್ರವಾಸ ಮಾಡುತ್ತೇನೆ ಎಂದರು.

ಇಂದು ಬೆಂಗಳೂರಿನಲ್ಲಿ ನಡೆದ ಚಿತನ-ಮಂಥನ ಸಭೆಯ ಪೋಸ್ಟರ್‌ನಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಫೋಟೋ ಕಾಣೆಯಾಗಿತ್ತು. ಇನ್ನು ಸಭೆಯಲ್ಲಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ವಜಾಗೊಳಿಸುವಂತೆ ಮುಖಂಡರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಇಬ್ರಾಹಿಂ ಪಕ್ಷ ತೊರೆಯಲು ಮುಂದಾಗಿದ್ದು, ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ವಿವರಿಸಿವೆ.

ಅಕ್ರಮ ಹಣ ಪತ್ತೆ ಪ್ರಕರಣ ಸಿಬಿಐಗೆ ವಹಿಸಲಿ: ಅಶ್ವಥ್ ನಾರಾಯಣ್

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಎಡವಟ್ಟುಗಳ ಸರ್ಕಾರ. ಆಡಳಿತ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ರಾಜ್ಯದ ಮಾಜಿ ಸಚಿವ ಡಾ. ಸಿ.ಎನ್ ಅಶ್ವಥ್ ನಾರಾಯಣ್ (Ashwath Narayan) ಅವರು ಟೀಕಿಸಿದರು.

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬಿಜೆಪಿ (BJP) ವತಿಯಿಂದ ಇಂದು ನಡೆದ ಬೃಹತ್ ಪ್ರತಿಭಟನೆಯ ಸಂದರ್ಭದಲ್ಲಿ ಅವರು ಮಾತನಾಡಿ, ಐಟಿ ದಾಳಿ ಸಂಬಂಧ ಸಿಬಿಐ (CBI) ತನಿಖೆ ಮಾಡಿ ಹಣದ ಮೂಲವನ್ನು ಪತ್ತೆ ಮಾಡಬೇಕು ಎಂದು ಆಗ್ರಹಿಸಿದರು. ನಾಚಿಕೆ ಇಲ್ಲದ ಸರ್ಕಾರ ಇದು. ಪ್ರತಿಯೊಂದು ವಿಚಾರದಲ್ಲೂ ನಾಡಿಗೇ ಸಂಕಷ್ಟ ತಂದಿಟ್ಟ ಕಾಂಗ್ರೆಸ್ (Congress Govt) ಸರ್ಕಾರ ಇದಾಗಿದೆ. ಈ ಸರ್ಕಾರ ತೊಲಗುವುದನ್ನೇ ಜನ ಬಯಸುತ್ತಿದ್ದಾರೆ ಎಂದು ತಿಳಿಸಿದರು. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವ ಸಂಪುಟದ ರಾಜೀನಾಮೆಗೆ ಅವರು ಆಗ್ರಹಿಸಿದರು.

ಸಾಕಷ್ಟು ಆಡಳಿತ ಅನುಭವ, ಪರಿಣತಿ ಇದ್ದರೂ, ಭಾರೀ ಬಹುಮತ ಸಿಕ್ಕಿದರೂ ಜನಾಶೀರ್ವಾದಕ್ಕೆ ತಕ್ಕ ಗೌರವವನ್ನು ನೀಡಿಲ್ಲ. ನಾಮಕಾವಾಸ್ತೆಗೆ ಕೆಲವು ಭಾಗ್ಯಗಳನ್ನು ತೋರಿಸಿ ಲೂಟಿ ಸರ್ಕಾರವನ್ನು ಕೊಟ್ಟಿದ್ದಾರೆ ಎಂದು ಆರೋಪಿಸಿದರು.

ರಾಜ್ಯವನ್ನು ಲೂಟಿ ಮಾಡಲು ಮತ್ತು ಸ್ವಾರ್ಥದಾಹ ಹಿಂಗಿಸಲು ಈ ಸರ್ಕಾರ ಮುಂದಾಗಿದೆ. ಏನೇ ಆಪಾದನೆಗೂ ಅದು ಜಗ್ಗುತ್ತಿಲ್ಲ. ಭಂಡತನದ ಉತ್ತರವನ್ನು ನೀಡುತ್ತಿದ್ದಾರೆ. ಗುತ್ತಿಗೆದಾರರು, ಬಿಲ್ಡರ್‍ಗಳಿಂದ ಹಣ ಲೂಟಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಮಿತಿ ಮೀರಿದೆ ಎಂದು ಆಕ್ಷೇಪಿಸಿದರು.

ಈ ಪ್ರತಿಭಟನೆಯಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಮುಖಂಡರಾದ ಭಾಸ್ಕರ ರಾವ್, ನೆ.ಲ.ನರೇಂದ್ರ ಬಾಬು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಜಿಲ್ಲಾ ಅಧ್ಯಕ್ಷ ಮಂಜುನಾಥ ಜಿ, ನಾರಾಯಣ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ