ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಜತೆ ಬೆಡ್‌ರೂಮ್‌ ಸೀನ್‌ ಇರುತ್ತದೆ ಎಂದು ಭಾವಿಸಿದ್ದೆ ; ಕೀಳುಮಟ್ಟದ ಹೇಳಿಕೆ ನೀಡಿದ ಖಳನಟ..!

Twitter
Facebook
LinkedIn
WhatsApp
ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಜತೆ ಬೆಡ್‌ರೂಮ್‌ ಸೀನ್‌ ಇರುತ್ತದೆ ಎಂದು ಭಾವಿಸಿದ್ದೆ ; ಕೀಳುಮಟ್ಟದ ಹೇಳಿಕೆ ನೀಡಿದ ಖಳನಟ..!

ಚೆನ್ನೈ: ತಮಿಳು ನಟ ಮನ್ಸೂರ್‌ ಅಲಿ ಖಾನ್‌ ಅವರು ನಟಿ ತ್ರಿಶಾ ಕೃಷ್ಣನ್‌ ಅವರ ಕುರಿತು ಕೀಳುಮಟ್ಟದ ಹೇಳಿಕೆ ನೀಡುವ ಮೂಲಕ ವಿವಾದದ ಕೇಂದ್ರ ಬಿದ್ದು ಆಗಿದ್ದಾರೆ. “ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಜತೆ ಅತ್ಯಾಚಾರದ ದೃಶ್ಯ ಮಾಡಬೇಕಿತ್ತು” ಎಂದು ಮನ್ಸೂರ್‌ ಅಲಿ ಖಾನ್‌ (Mansoor Ali Khan) ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಲೇ ನಟನಿಗೆ ಗಣ್ಯರಿಂದ ಹಿಡಿದು ಸಾಮಾನ್ಯರವರೆಗೆ ಚಾಟಿ ಬೀಸಿದ್ದಾರೆ. ತ್ರಿಶಾ ಕೃಷ್ಣನ್‌ (Trisha Krishnan) ಕೂಡ ಈ ಕುರಿತು ಪ್ರತಿಕ್ರಿಯಿಸಿದ್ದು, “ಇನ್ನೆಂದೂ ಮನ್ಸೂರ್‌ ಅಲಿ ಖಾನ್‌ ಜತೆ ನಟಿಸುವುದಿಲ್ಲ” ಎಂದು ಘೋಷಿಸಿದ್ದಾರೆ.

ಮನ್ಸೂರ್‌ ಅಲಿ ಖಾನ್‌ ಹೇಳಿದ್ದೇನು?

“ನಾನು ಲಿಯೋ ಸಿನಿಮಾದಲ್ಲಿ ತ್ರಿಶಾ ಅವರ ಜತೆ ನಟಿಸುತ್ತೇನೆ ಎಂದಾಗ ಖುಷಿಯಾಯಿತು. ಬೇರೆ ನಟಿಯರ ಜತೆ ಇದ್ದಂತೆ ತ್ರಿಶಾ ಅವರ ಜತೆಗೂ ಒಂದು ಬೆಡ್‌ರೂಮ್‌ ಸೀನ್‌ ಇರುತ್ತದೆ ಎಂದು ಭಾವಿಸಿದ್ದೆ. ನಾನು ತುಂಬ ರೇಪ್ ದೃಶ್ಯಗಳಲ್ಲಿ ನಟಿಸಿರುವ ಕಾರಣ ಇದೆಲ್ಲ ನನಗೆ ಏನೂ ಅನಿಸುವುದಿಲ್ಲ. ಆದರೆ, ಸಿನಿಮಾ ತಂಡದವರು ಕಾಶ್ಮೀರದಲ್ಲಿ ಶೂಟಿಂಗ್‌ ಮಾಡುವ ವೇಳೆ ನನಗೆ ತ್ರಿಶಾ ಅವರನ್ನು ತೋರಿಸಲೇ ಇಲ್ಲ” ಎಂದು ಹೇಳಿದ್ದರು. ಇದು ಈಗ ಭಾರಿ ವಿವಾದಕ್ಕೆ ಕಾರಣವಾಗಿದೆ.

ತಿರುಗೇಟು ಕೊಟ್ಟ ತ್ರಿಶಾ ಕೃಷ್ಣನ್‌

ಮನ್ಸೂರ್‌ ಅಲಿ ಖಾನ್‌ ವಿರುದ್ಧ ತ್ರಿಶಾ ಕೃಷ್ಣನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಮನ್ಸೂರ್‌ ಅಲಿ ಖಾನ್‌ ಅವರು ಇತ್ತೀಚೆಗೆ ನನ್ನ ಬಗ್ಗೆ ಅಸಭ್ಯವಾಗಿ ಮಾತನಾಡಿದ ವಿಡಿಯೊ ನೋಡಿದೆ. ಇಂತಹ ಕೀಳು ಅಭಿರುಚಿಯ, ಸ್ತ್ರೀದ್ವೇಷದಿಂದ ಕೂಡಿರುವ, ತುಚ್ಚ ಹೇಳಿಕೆಯನ್ನು ನಾನು ಖಂಡಿಸುತ್ತೇನೆ. ನಾನು ಇಂತಹ ವ್ಯಕ್ತಿಯ ಜತೆ ಇದುವರೆಗೆ ತೆರೆ ಹಂಚಿಕೊಂಡಿಲ್ಲ ಎಂಬುದೇ ಸಮಾಧಾನದ ಸಂಗತಿ. ಅಷ್ಟೇ ಅಲ್ಲ, ನಾನು ಸಿನಿಮಾ ಕ್ಷೇತ್ರದಲ್ಲಿ ಇರುವವರೆಗೆ ಈ ವ್ಯಕ್ತಿಯ ಜತೆ ನಟಿಸುವುದಿಲ್ಲ. ಇಂತಹ ವ್ಯಕ್ತಿಗಳು ಮನುಕುಲಕ್ಕೇ ಕೆಟ್ಟ ಹೆಸರು ತರುತ್ತಾರೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಖಾನ್‌ ಹೇಳಿಕೆ ಖಂಡಿಸಿದ ಗಣ್ಯರು

ಮನ್ಸೂರ್‌ ಅಲಿ ಖಾನ್‌ ಹೇಳಿಕೆಗೆ ಗಣ್ಯರು ಭಾರಿ ಖಂಡನೆ ವ್ಯಕ್ತಪಡಿಸಿದ್ದಾರೆ. ಗಾಯಕಿ ಚಿನ್ಮಯಿ ಶ್ರೀಪಾದ, ನಿರ್ದೇಶಕ ಲೋಕೇಶ್‌ ಕನಕರಾಜ್‌ ಸೇರಿ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅದರಲ್ಲೂ, ನಟಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್‌ ಅವರು ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ. “ಮಹಿಳಾ ಆಯೋಗದ ಸದಸ್ಯೆಯಾಗಿ ಮನ್ಸೂರ್‌ ಅಲಿ ಖಾನ್‌ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಆಯೋಗದ ಹಿರಿಯರ ಜತೆಗೂ ಮಾತನಾಡಿದ್ದೇನೆ. ಕ್ರಮ ತೆಗೆದುಕೊಳ್ಳಲಾಗುವುದು” ಎಂದಿದ್ದಾರೆ.

ವಿವಾದ ಭುಗಲೇಳುತ್ತಲೇ ಮನ್ಸೂರ್‌ ಅಲಿ ಖಾನ್‌ ಸ್ಪಷ್ಟನೆ ನೀಡಿದ್ದಾರೆ. “ನಾನು ನಟಿಯರನ್ನು ಗೌರವಿಸುತ್ತೇನೆ. ನನ್ನ ಮಗಳು ತ್ರಿಶಾ ಅವರ ದೊಡ್ಡ ಅಭಿಮಾನಿ. ನಾನು ಉದ್ದೇಶಪೂರ್ವಕವಾಗಿ ನೋವುಂಟು ಮಾಡಬೇಕು ಎಂದು ಹಾಗೆ ಹೇಳಿಲ್ಲ. ತಮಾಷೆಯಾಗಿ ಮಾತನಾಡುವಾಗ ಹಾಗೆ ಹೇಳಿದೆ” ಎಂದಿದ್ದಾರೆ. ಇನ್ನು ತ್ರಿಶಾ ಅಭಿಮಾನಿಗಳಂತೂ ಮನ್ಸೂರ್‌ ಅಲಿ ಖಾನ್‌ ಕ್ಷಮೆ ಕೇಳಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ