ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ, ವೈದ್ಯರೇ ದಂಧೆಗೆ ಸಾಥ್!

Twitter
Facebook
LinkedIn
WhatsApp
ಬೆಂಗಳೂರಿನಲ್ಲಿ ಹೆಣ್ಣು ಭ್ರೂಣ ಲಿಂಗ ಪತ್ತೆ ಮಾಡುತ್ತಿದ್ದ ಜಾಲ ಪತ್ತೆ, ವೈದ್ಯರೇ ದಂಧೆಗೆ ಸಾಥ್!

ಬೆಂಗಳೂರು(ಅ.25): ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಬೆಂಗಳೂರಿನ (Bengaluru) ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿದ್ದು, ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನ್‌ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್‌ಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು. ಈ ದಂಧೆಯಲ್ಲಿ ವೈದ್ಯರು ಸಹ ಇದ್ದು, 15 ರಿಂದ 20 ಸಾವಿರ ರೂಪಾಯಿ ಪಡೆದುಕೊಂಡು ಈ ದಂಧೆಗೆ ಸಾಥ್ ನೀಡುತ್ತಿದ್ದರು.

ಇತ್ತೀಚೆಗೆ ಹೆಣ್ಣು ಭ್ರೂಣ ಪತ್ತೆ ದಂಧೆ ಬಗ್ಗೆ ಬಾತ್ಮೀದಾರರಿಂದ ಮಾಹಿತಿ ಪಡೆದ ಇನ್‌ಸ್ಪೆಕ್ಟರ್‌ ಎಂ.ಪ್ರಶಾಂತ್ ಅವರು, ಕೂಡಲೇ ಪಿಎಸ್‌ಐ ಮಂಜುನಾಥ್‌, ಬೈಯಪ್ಪನಹಳ್ಳಿ ಠಾಣೆ ಪಿಎಸ್‌ಐ ಮಂಜುನಾಥ್, ಎಎಸ್‌ಐಗಳಾದ ಗೋವಿಂದರಾಜು, ನಾಗಯ್ಯ ಒಳಗೊಂಡ ತಂಡ ರಚಿಸಿಕೊಂಡು ದಂಧೆಕೋರರ ಬೆನ್ನುಹತ್ತಿದ್ದಾಗ ಆರೋಪಿಗಳು ಖಾಕಿ ಬಲೆಗೆ ಬಿದ್ದಿದ್ದಾರೆ.

ಆರೋಪಿಗಳು ಸೆರೆ ಸಿಕ್ಕಿದ್ದೇಗೆ?

ಇತ್ತೀಚೆಗೆ ಹಳೇ ಮದ್ರಾಸ್‌ ರಸ್ತೆ ಕಡೆಯಿಂದ ಗರ್ಭಿಣಿಯನ್ನು ಪರೀಕ್ಷೆಗೆ ಕರೆದೊಯ್ಯಲು ವೀರೇಶ್ ತಂಡ ಬರುವ ಖಚಿತ ಮಾಹಿತಿ ಪಿಐ ಪ್ರಶಾಂತ್ ತಂಡಕ್ಕೆ ಸಿಕ್ಕಿದೆ. ತಕ್ಷಣವೇ ಕಾರ್ಯಾಚರಣೆಗಿಳಿದ ಪೊಲೀಸರು, ಹಳೇ ಮದ್ರಾಸ್‌ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಅಲ್ಲಿಗೆ ಬಂದ ದಂಧೆಕೋರರು, ಪೊಲೀಸರನ್ನು ಕಂಡು ಭೀತಿಯಿಂದ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಅನುಮಾನಗೊಂಡ ಪೊಲೀಸರು, ಕೂಡಲೇ ಆ ಕಾರನ್ನು ಬೈಕ್‌ಗಳಲ್ಲಿ ಸ್ಪಲ್ಪದೂರ ಬೆನ್ನಹತ್ತಿ ಹೋಗಿ ತಡೆದಿದ್ದಾರೆ. ಬಳಿಕ ಕಾರಿನಲ್ಲಿದ್ದ ಶಿವಲಿಂಗೇಗೌಡ, ನಯನ್ ಹಾಗೂ ಗರ್ಭಿಣಿಯನ್ನು ಠಾಣೆ ಕರೆತಂದು ವಿಚಾರಿಸಿದಾಗ ಸತ್ಯ ಬಯಲಿಗೆ ಬಂದಿದೆ.

ಬಳಿಕ ಈ ಆರೋಪಿಗಳ ಮಾಹಿತಿ ಆಧರಿಸಿ ಮಂಡ್ಯ-ಪಾಂಡಪುರ ರಸ್ತೆಯಲ್ಲಿದ್ದ ಅಲೆಮನೆ ಮೇಲೆ ಪೊಲೀಸರು ಕ್ಷಿಪ್ರ ದಾಳಿ ನಡೆಸಿದಾಗ ಇನ್ನುಳಿದ್ದಿಬ್ಬರು ಸೆರೆಯಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇನ್ನು ದಂಧೆಕೋರರ ಅಡ್ಡೆಯಾದ ಪಾಂಡಪುರ ರಸ್ತೆಯ ಅಲೆಮನೆ ಮೇಲೆ ದಾಳಿ ನಡೆಸಿದಾಗ ಐದಕ್ಕೂ ಹೆಚ್ಚಿನ ಗರ್ಭೀಣಿಯರು ಪತ್ತೆಯಾಗಿದ್ದಾರೆ. ಆ ಮಹಿಳೆಯರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದು ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಈ ಹೆಣ್ಣು ಭ್ರೂಣ ಲಿಂಗ ಪತ್ತೆ ದಂಧೆಗೆ ಕೆಲ ವೈದ್ಯರು ಸಹ ಸಾಥ್ ಕೊಟ್ಟಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕೃತ್ಯ ಬೆಳಕಿಗೆ ಬಂದ ನಂತರ ನಾಪತ್ತೆಯಾಗಿರುವ ದಂಧೆಕೋರ ವೀರೇಶ್‌ನ ಚಿಕ್ಕಪ್ಪ ಡಾ। ಮಲ್ಲಿಕಾರ್ಜುನ್ ಸೇರಿದಂತೆ ಕೆಲವು ವೈದ್ಯರಿಗೆ ಹುಡುಕಾಟ ನಡೆದಿದೆ. ಇನ್ನು ಕಳೆದ ವರ್ಷದ ಸಹ ಇದೇ ರೀತಿಯ ಪ್ರಕರಣದಲ್ಲಿ ಡಾ। ಮಲ್ಲಿಕಾರ್ಜುನ್ ಬಂಧಿತನಾಗಿದ್ದ. ಬಳಿಕ ಜಾಮೀನು ಪಡೆದು ಹೊರಬಂದು ಮತ್ತೆ ಆತ ಚಾಳಿ ಮುಂದುವರೆಸಿದ್ದ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ