ಶನಿವಾರ, ಮಾರ್ಚ್ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Ind vs WI ಇಂದು ಭಾರತ vs ವೆಸ್ಟ್‌ ಇಂಡೀಸ್ ಮೊದಲ ಏಕದಿನ ಫೈಟ್

Twitter
Facebook
LinkedIn
WhatsApp
Ind vs WI ಇಂದು ಭಾರತ vs ವೆಸ್ಟ್‌ ಇಂಡೀಸ್ ಮೊದಲ ಏಕದಿನ ಫೈಟ್

ಟ್ರಿನಿಡಾಡ್(ಜು.22)‌: ಇತ್ತೀಚೆಗಷ್ಟೇ ಐರ್ಲೆಂಡ್‌ ಹಾಗೂ ಇಂಗ್ಲೆಂಡ್‌ ಪ್ರವಾಸದಲ್ಲಿ ಯಶಸ್ಸು ಕಂಡಿದ್ದ ಭಾರತ ಕ್ರಿಕೆಟ್‌ ತಂಡ ಮತ್ತೊಂದು ವಿದೇಶಿ ಸರಣಿಗೆ ಸಜ್ಜಾಗಿದ್ದು, ಶುಕ್ರವಾರದಿಂದ ವೆಸ್ಟ್‌ಇಂಡೀಸ್‌ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಣಕ್ಕಿಳಿಯಲಿದೆ. ಸರಣಿಯ ಎಲ್ಲಾ ಪಂದ್ಯಗಳಿಗೆ ಪೋರ್ಚ್‌ ಆಫ್‌ ಸ್ಪೇನ್‌ನ ಕ್ವೀನ್ಸ್‌ ಪಾರ್ಕ್ ಓವಲ್‌ ಕ್ರೀಡಾಂಗಣ ಆತಿಥ್ಯ ವಹಿಸಲಿದೆ. ಇದೇ ವರ್ಷ ಫೆಬ್ರವರಿಯಲ್ಲಿ ವಿಂಡೀಸ್‌ ತಂಡ ಭಾರತಕ್ಕೆ ಪ್ರವಾಸ ಕೈಗೊಂಡಿದ್ದಾಗ ಆತಿಥೇಯರು ತಲಾ 3 ಪಂದ್ಯಗಳ ಏಕದಿನ, ಟಿ20 ಸರಣಿಯಲ್ಲಿ ವೈಟ್‌ವಾಶ್‌ ಸಾಧನೆ ಮಾಡಿದ್ದರು. ಈಗ ಅವರದೇ ನೆಲದಲ್ಲಿ ಸರಣಿ ಆಡುತ್ತಿದ್ದು, ಗೆಲುವಿನ ಹುಮ್ಮಸ್ಸಿನ ನಡುವೆಯೂ ಹಲವು ಸವಾಲುಗಳು ತಂಡದಲ್ಲಿವೆ. ಖಾಯಂ ನಾಯಕ ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ, ಜಸ್‌ಪ್ರೀತ್‌ ಬುಮ್ರಾ, ರಿಷಭ್‌ ಪಂತ್‌, ಮೊಹಮದ್‌ ಶಮಿ ಸೇರಿದಂತೆ ಪ್ರಮುಖರು ಈ ಸರಣಿಗೆ ಗೈರಾಗಲಿದ್ದು, ಹಿರಿಯ ಬ್ಯಾಟರ್‌ ಶಿಖರ್‌ ಧವನ್‌ ನಾಯಕತ್ವ ವಹಿಸಲಿದ್ದಾರೆ.

Ind vs WI ಇಂದು ಭಾರತ vs ವೆಸ್ಟ್‌ ಇಂಡೀಸ್ ಮೊದಲ ಏಕದಿನ ಫೈಟ್

2023ರ ಏಕದಿನ ವಿಶ್ವಕಪ್‌ಗೂ ಮುನ್ನ ಬಲಿಷ್ಠ ತಂಡ ಕಟ್ಟಿಕೊಳ್ಳಲು ಎದುರು ನೋಡುತ್ತಿರುವ ಭಾರತ, ಯುವ ತಾರೆಗಳಿಗೆ ಮತ್ತೊಂದು ಅವಕಾಶ ನೀಡಿದೆ. ಶಿಖರ್ ಧವನ್‌ ಜೊತೆ ಶುಭ್‌ಮನ್‌ ಗಿಲ್‌ ಇನ್ನಿಂಗ್ಸ್‌ ಆರಂಭಿಸಿದರೆ, ಇಶಾನ್‌ ಕಿಶನ್‌ ಮತ್ತು ಋುತುರಾಜ್‌ ಗಾಯಕ್ವಾಡ್‌ ಹೊರಗುಳಿಬಹುದು. ಅತ್ಯುತ್ತಮ ಲಯದಲ್ಲಿರುವ ದೀಪಕ್‌ ಹೂಡಾ, ಸೂರ್ಯಕುಮಾರ್‌ ಮೇಲೆ ಹೆಚ್ಚಿನ ಜವಾಬ್ದಾರಿ ಇದೆ. ಮತ್ತೊಂದು ಸ್ಥಾನಕ್ಕಾಗಿ ಶ್ರೇಯಸ್‌ ಅಯ್ಯರ್‌ ಮತ್ತು ಸಂಜು ಸ್ಯಾಮ್ಸನ್‌ ನಡುವೆ ಪೈಪೋಟಿ ಇದೆ. ಹಾರ್ದಿಕ್‌ ಪಾಂಡ್ಯ ಅನುಪಸ್ಥಿತಿಯಲ್ಲಿ ಶಾರ್ದೂಲ್‌ ಠಾಕೂರ್‌ ವೇಗಿ ಆಲ್ರೌಂಡರ್‌ ಸ್ಥಾನವನ್ನು ತುಂಬಲಿದ್ದಾರೆ. ರವೀಂದ್ರ ಜಡೇಜಾ ಜೊತೆ ಯಜುವೇಂದ್ರ ಚಹಲ್‌ ಸ್ಪಿನ್‌ ಬೌಲಿಂಗನ್ನು ಮುನ್ನಡೆಲಿದ್ದಾರೆ. ಅಶ್‌ರ್‍ದೀಪ್‌ ಸಿಂಗ್‌ ಏಕದಿನ ತಂಡಕ್ಕೆ ಪಾದಾರ್ಪಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ. ಕನ್ನಡಿಗ ಪ್ರಸಿದ್ಧ್ ಕೃಷ್ಣ ಜೊತೆ ಮೊಹಮದ್‌ ಸಿರಾಜ್‌ ವೇಗದ ಬೌಲರ್‌ಗಳ ಸ್ಥಾನ ತುಂಬಲಿದ್ದಾರೆ.

ವಿಂಡೀಸ್‌ಗೆ ಪೂರನ್‌, ಹೋಲ್ಡರ್‌ ಬಲ: ಇತ್ತೀಚೆಗಷ್ಟೇ ತವರಿನಲ್ಲೇ ಬಾಂಗ್ಲಾದೇಶ ಎದುರು ಏಕದಿನ ಸರಣಿಯಲ್ಲಿ 0-3 ವೈಟ್‌ವಾಶ್‌ ಮುಖಭಂಗಕ್ಕೊಳಗಾಗಿದ್ದ ವಿಂಡೀಸ್‌ ಆ ಆಘಾತದಿಂದ ಹೊರಬರಲು ಕಾತರಿಸುತ್ತಿದೆ. ತಾರಾ ಆಲ್ರೌಂಡರ್‌ ಜೇಸನ್‌ ಹೋಲ್ಡರ್‌ ತಂಡಕ್ಕೆ ಮರಳಿದ್ದು, ಮಹತ್ವದ ಸರಣಿಯಲ್ಲಿ ತಂಡಕ್ಕೆ ಬಲ ಒದಗಿಸಿದೆ. ನಾಯಕ ನಿಕೋಲಸ್‌ ಪೂರನ್‌ ಯಶಸ್ಸು ದೊರಕಿಸಿಕೊಡುವ ಜೊತೆಗೆ ವೈಯಕ್ತಿಕವಾಗಿಯೂ ಲಯಕ್ಕೆ ಮರಳಲು ಕಾಯುತ್ತಿದ್ದಾರೆ.

Ind vs WI ಇಂದು ಭಾರತ vs ವೆಸ್ಟ್‌ ಇಂಡೀಸ್ ಮೊದಲ ಏಕದಿನ ಫೈಟ್

ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಒಟ್ಟು 136 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಈ ಪೈಕಿ ಟೀಂ ಇಂಡಿಯಾ ಕೊಂಚ ಮೇಲುಗೈ ಸಾಧಿಸಿದೆ. 136 ಪಂದ್ಯಗಳ ಪೈಕಿ ಭಾರತ ಕ್ರಿಕೆಟ್ ತಂಡವು 67 ಪಂದ್ಯಗಳಲ್ಲಿ ಗೆಲುವು ದಾಖಲಿಸಿದ್ದರೇ, ವೆಸ್ಟ್ ಇಂಡೀಸ್ ತಂಡವು 63 ಪಂದ್ಯಗಳಲ್ಲಿ ಗೆಲುವಿನ ನಗೆ ಬೀರಿದೆ. ಇನ್ನು ಎರಡು ಪಂದ್ಯ ಟೈ ಆದರೆ, 4 ಪಂದ್ಯಗಳಲ್ಲಿ ಫಲಿತಾಂಶ ಹೊರಬಿದ್ದಿರಲಿಲ್ಲ.
ಸಂಭವನೀಯ ಆಟಗಾರರ ಪಟ್ಟಿ

ಭಾರತ: ಶಿಖರ್ ಧವನ್‌(ನಾಯಕ), ಶುಭ್‌ಮನ್‌ ಗಿಲ್‌, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್‌, ಶ್ರೇಯಸ್ ಅಯ್ಯರ್‌/ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್‌, ಯುಜುವೇಂದ್ರ ಚಹಲ್‌, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್‌, ಅಶ್‌ರ್‍ದೀಪ್ ಸಿಂಗ್‌/ಆವೇಶ್ ಖಾನ್‌.

ವಿಂಡೀಸ್‌: ಶಾಹಿ ಹೋಪ್‌, ಬ್ರೂಕ್ಸ್‌, ಕಾರ್ಟಿ, ಪೂರನ್‌(ನಾಯಕ), ಕಿಂಗ್‌, ಪೋವೆಲ್‌, ಹೋಲ್ಡರ್‌, ಕೀಮೊ ಪಾಲ್‌, ಅಕೇಲ್‌ ಹೊಸೈನ್‌, ಗುಡಕೇಶ್‌ ಮೊಟೀ, ಸೀಲ್ಸ್‌.

ಸ್ಥಳ: ಕ್ವೀನ್ಸ್‌ ಪಾರ್ಕ್ ಓವಲ್‌ 
ಪಂದ್ಯ: ಸಂಜೆ 7ಕ್ಕೆ
ನೇರ ಪ್ರಸಾರ: ಡಿಡಿ ಸ್ಪೋರ್ಟ್ಸ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist