ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾರತ- ಪಾಕಿಸ್ತಾನ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದು!

Twitter
Facebook
LinkedIn
WhatsApp
ಭಾರತ- ಪಾಕಿಸ್ತಾನ ನಡುವಿನ ಮೊದಲ ಪಂದ್ಯ ಮಳೆಯಿಂದ ರದ್ದು!

ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದ ಮಹತ್ವದ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಮೂಲಕ ಅಭಿಮಾನಿಗಳಿಗೆ ತೀವ್ರ ನಿರಾಸೆ ಮೂಡಿಸಿದೆ.

ಲಂಕಾದ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಮಳೆಯಿಂದ ರದ್ದಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತ್ತು. ಭಾರತ 266 ರನ್ ಗಳಿಗೆ ಆಲೌಟ್ ಆಗಿತ್ತು. ಇದಾದ ಬಳಿಕ ಬಾಬರ್ ಅಜಂ ನಾಯಕತ್ವದ ಪಾಕಿಸ್ತಾನ ತಂಡ ಬ್ಯಾಟಿಂಗ್‌ಗೆ ಆರಂಭಿಸಬೇಕಿತ್ತು. ಆದರೆ ಮಳೆಯಿಂದಾಗಿ ಪಂದ್ಯವನ್ನು ನಿಲ್ಲಿಸಬೇಕಾಯಿತು. ಮಳೆ ನಿಲ್ಲದ ಸೂಚನೆಗಳು ಕಾಣಿಸಿದ್ದರಿಂದ ಪಂದ್ಯವನ್ನು ರದ್ದು ಮಾಡಲಾಗಿದೆ.

ಪಾಕಿಸ್ತಾನ ಸೂಪರ್-4 ತಲುಪಿದ ಮೊದಲ ತಂಡ
ಈ ಪಂದ್ಯ ರದ್ದಿನಿಂದಾಗಿ ಪಾಕಿಸ್ತಾನ ತಂಡಕ್ಕೆ ಹೆಚ್ಚಿನ ಲಾಭವಾಗಿದ್ದು ಸೂಪರ್-4 ತಲುಪಿದೆ. ಈ ಬಾರಿಯ ಏಷ್ಯಾಕಪ್‌ನಲ್ಲಿ ಸೂಪರ್-4 ತಲುಪಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾಕಿಸ್ತಾನ ಪಾತ್ರವಾಗಿದೆ. ತನ್ನ ಮೊದಲ ಪಂದ್ಯದಲ್ಲಿ ನೇಪಾಳವನ್ನು 238 ರನ್‌ಗಳಿಂದ ಸೋಲಿಸಿತ್ತು. ಏಷ್ಯಾ ಕಪ್‌ನ ಎ ಗುಂಪಿನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳಿದ್ದು ಮೂರನೇ ತಂಡವಾಗಿ ನೇಪಾಳವಿದೆ. ಗುಂಪಿನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ನೇಪಾಳವನ್ನು ಸೋಲಿಸಿತ್ತು. ಈಗ ಬಾಬರ್ ತಂಡದ ಎರಡನೇ ಪಂದ್ಯವು ಭಾರತದ ವಿರುದ್ಧವಾಗಿತ್ತು. ಅದು ಮಳೆಯಿಂದಾಗಿ ರದ್ದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ 1-1 ಅಂಕ ನೀಡಲಾಗಿದೆ. ಈ ಮೂಲಕ ಪಾಕಿಸ್ತಾನ 3 ಅಂಕಗಳೊಂದಿಗೆ ಸೂಪರ್-4 ತಲುಪಿದೆ.

ಈಗ ಭಾರತ ತಂಡ ಮುಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಿದೆ
ಇದೀಗ ಭಾರತ ತಂಡ ಏಷ್ಯಾಕಪ್‌ನಲ್ಲಿ ತನ್ನ ಎರಡನೇ ಪಂದ್ಯವನ್ನು ನೇಪಾಳದೊಂದಿಗೆ ಮಾತ್ರ ಆಡಬೇಕಾಗಿದೆ. ಈ ಪಂದ್ಯ ಸೆಪ್ಟೆಂಬರ್ 4 ರಂದು ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಗೆದ್ದರೆ ಭಾರತ ತಂಡ ಸೂಪರ್‌-4 ಹಂತಕ್ಕೂ ತಲುಪಲಿದೆ. ಸೋತರೆ ನೇಪಾಳ ಅರ್ಹತೆ ಪಡೆಯಲಿದೆ.

ಅರ್ಧಶತಕದ ಇನ್ನಿಂಗ್ಸ್‌ ಆಡಿದ ಇಶಾನ್ ಮತ್ತು ಪಾಂಡ್ಯ
ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಇದಾದ ಬಳಿಕ ತಂಡ 66 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತ್ತು. ನಾಯಕ ರೋಹಿತ್ ಶರ್ಮಾ (11), ವಿರಾಟ್ ಕೊಹ್ಲಿ (4), ಶುಭಮನ್ ಗಿಲ್ (10) ಮತ್ತು ಶ್ರೇಯಸ್ ಅಯ್ಯರ್ (14) ಅಗ್ಗವಾಗಿ ಔಟಾದರು. ಇದಾದ ನಂತರ ಇಶಾನ್ ಕಿಶನ್ ಸ್ಟಾರ್ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಜೊತೆಗೂಡಿ ಭಾರತದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರೂ 5ನೇ ವಿಕೆಟ್‌ಗೆ 138 ರನ್‌ಗಳ ದಾಖಲೆಯ ಜೊತೆಯಾಟ ನಡೆಸಿದರು.

ಇಶಾನ್ 81 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 82 ರನ್ ಗಳಿಸಿದರು. ಇವರಲ್ಲದೆ ಪಾಂಡ್ಯ 90 ಎಸೆತಗಳಲ್ಲಿ 87 ರನ್ ಗಳಿಸಿ ಇನ್ನಿಂಗ್ಸ್ ಆಡಿದರು. ಈ ಆಟಗಾರರು ಔಟಾಗುವ ಮುನ್ನ ಭಾರತದ ಸ್ಕೋರ್ 200 ದಾಟಿತ್ತು.

ಪಾಕ್ ಗೆ 267 ರನ್‌ಗಳ ಗುರಿ
ಇದು ಏಕದಿನದಲ್ಲಿ ಇಶಾನ್ ಕಿಶನ್ ಅವರ ಆರನೇ ಅರ್ಧಶತಕವಾಗಿದೆ. ಇದು ಸತತ ನಾಲ್ಕನೇ ಏಕದಿನದಲ್ಲಿ ಇಶಾನ್ ಅವರ ನಾಲ್ಕನೇ ಅರ್ಧಶತಕವಾಗಿದೆ. ಏಷ್ಯಾ ಕಪ್‌ಗೆ ಮುನ್ನ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಮೂರು ಪಂದ್ಯಗಳ ODI ಸರಣಿಯಲ್ಲಿ ಅವರು ಸತತ 3 ಅರ್ಧಶತಕಗಳನ್ನು ಗಳಿಸಿದರು. ಇದೀಗ ಪಾಕಿಸ್ತಾನದ ವಿರುದ್ಧ ಸತತ ನಾಲ್ಕನೇ ಅರ್ಧಶತಕ ಗಳಿಸಿದ್ದಾರೆ. ಇಶಾನ್ ಮತ್ತು ಪಾಂಡ್ಯ ಅವರ ಇನ್ನಿಂಗ್ಸ್‌ನಿಂದಾಗಿ ಭಾರತ ತಂಡ ಪಂದ್ಯದಲ್ಲಿ 266 ರನ್ ಗಳಿಸಿತು. ಪಾಕಿಸ್ತಾನದ ಬೌಲರ್‌ಗಳಲ್ಲಿ ವೇಗದ ಬೌಲರ್‌ಗಳಾದ ಶಾಹೀನ್ ಶಾ ಆಫ್ರಿದಿ ಮತ್ತು ಹ್ಯಾರಿಸ್ ರೌಫ್ ಅವರ ಮ್ಯಾಜಿಕ್ ಮಾತ್ರ ಕೆಲಸ ಮಾಡಿದೆ. ಅಫ್ರಿದಿ 31 ರನ್ ನೀಡಿ 4 ವಿಕೆಟ್ ಪಡೆದರೆ ಹ್ಯಾರಿಸ್ 53 ರನ್ ನೀಡಿ 3 ವಿಕೆಟ್ ಪಡೆದರು. ನಸೀಮ್ ಶಾ 3 ವಿಕೆಟ್ ಪಡೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist