ಗುರುವಾರ, ಮೇ 2, 2024
ಅಶ್ಲೀಲ ವಿಡಿಯೋ ಕೇಸ್ ಪ್ರಕರಣ ; ಪ್ರಜ್ವಲ್ ರೇವಣ್ಣ ಮೊದಲ ಪ್ರತಿಕ್ರಿಯೆ ಏನು..?-ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ-ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

IPL 2022 ಇಂದು ಆರ್‌ಸಿಬಿ-ಲಖನೌ ಎಲಿಮಿನೇಟರ್ ಪಂದ್ಯ!

Twitter
Facebook
LinkedIn
WhatsApp
IPL 2022 ಇಂದು ಆರ್‌ಸಿಬಿ-ಲಖನೌ ಎಲಿಮಿನೇಟರ್ ಪಂದ್ಯ!

ಕೋಲ್ಕತ್ತ (ಮೇ. 25): ನಿರ್ಣಾಯಕ ಹಂತದಲ್ಲಿ ಲಯಕ್ಕೆ ಮರಳಿರುವ ವಿರಾಟ್‌ ಕೊಹ್ಲಿ (Virat Kohli), ನಾಟಕೀಯ ರೀತಿಯಲ್ಲಿ ಸಿಕ್ಕ ಪ್ಲೇ-ಆಫ್‌ (Paly Off) ಪ್ರವೇಶ ರಾಯಲ್‌ ಚಾಲೆಂಜ​ರ್ಸ್ ಬೆಂಗಳೂರು (Royal Challengers Bangalore) ತಂಡದ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದ್ದು, ಬುಧವಾರ ಬಲಿಷ್ಠ ಲಖನೌ ಸೂಪರ್‌ಜೈಂಟ್ಸ್‌ (Lucknow Super Giants )ವಿರುದ್ಧದ ಎಲಿಮಿನೇಟರ್‌ (Eliminator ) ಪಂದ್ಯದಲ್ಲಿ ಫಾಫ್‌ ಡು ಪ್ಲೆಸಿಸ್ (Faf Du Plesis) ಪಡೆ ಗೆಲುವಿನ ನಿರೀಕ್ಷೆಯಲ್ಲಿದೆ.

ಸತತವಾಗಿ ವೈಫಲ್ಯ ಅನುಭವಿಸುತ್ತಿದ್ದ ವಿರಾಟ್‌, ಗುಜರಾತ್‌ ವಿರುದ್ಧದ ಪಂದ್ಯದಲ್ಲಿ 54 ಎಸೆತಗಳಲ್ಲಿ 73 ರನ್‌ ಗಳಿಸಿ ಲಯ ಕಂಡುಕೊಂಡರು. ಈ ಆವೃತ್ತಿಯಲ್ಲಿ ಅವರು ಬಾರಿಸಿದ ಕೇವಲ 2ನೇ ಅರ್ಧಶತಕ ಅದು. ಲೀಗ್‌ ಹಂತದ ಅಂತಿಮ ಪಂದ್ಯದಲ್ಲಿ ಗೆದ್ದರೂ ಆರ್‌ಸಿಬಿ ಪ್ಲೇ-ಆಫ್‌ ಭವಿಷ್ಯ ಮುಂಬೈ ಇಂಡಿಯನ್ಸ್‌ ಕೈಯಲ್ಲಿತ್ತು. ಡೆಲ್ಲಿ ವಿರುದ್ಧ ಮುಂಬೈ ಗೆದ್ದಿದ್ದರಿಂದ ಆರ್‌ಸಿಬಿ ಪ್ಲೇ-ಆಫ್‌ಗೆ ಪ್ರವೇಶ ಪಡೆದಿದ್ದು, ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳುವ ಉತ್ಸಾಹದಲ್ಲಿದೆ.

ಕೊಹ್ಲಿ ಜೊತೆ ಡು ಪ್ಲೆಸಿಸ್ ಸಹ ಉತ್ತಮ ಲಯದಲ್ಲಿದ್ದು, ಗ್ಲೆನ್‌ ಮ್ಯಾಕ್ಸ್‌ವೆಲ್‌, ದಿನೇಶ್‌ ಕಾರ್ತಿಕ್‌ ಮೇಲೂ ದೊಡ್ಡ ಜವಾಬ್ದಾರಿ ಇದೆ. ಬೌಲಿಂಗ್‌ನಲ್ಲಿ ಜೋಶ್‌ ಹೇಜಲ್‌ವುಡ್‌, ಹರ್ಷಲ್‌ ಪಟೇಲ್‌, ವಾನಿಂಡು ಹಸರಂಗ ತಂಡದ ಟ್ರಂಪ್‌ ಕಾರ್ಡ್ಸ್ ಎನಿಸಿದ್ದು, ಈ ಮೂವರು ಸೇರಿ ಒಟ್ಟು 57 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಶಾಬಾಜ್‌ ಅಹ್ಮದ್‌, ಮ್ಯಾಕ್ಸ್‌ವೆಲ್‌ ಎದುರಾಳಿಯ ರನ್‌ರೇಟ್‌ಗೆ ಕಡಿವಾಣ ಹಾಕಬೇಕಿದ್ದು, ನಿರ್ಣಾಯಕ ಪಂದ್ಯದಲ್ಲಿ ತಂಡ ಮೊಹಮದ್‌ ಸಿರಾಜ್‌ರನ್ನು ಕಣಕ್ಕಿಳಿಸುತ್ತದೆಯೋ ಅಥವಾ ಸಿದ್ಧಾಥ್‌ರ್‍ ಕೌಲ್‌ರನ್ನೇ ಮುಂದುವರಿಸುತ್ತೋ ಎನ್ನುವ ಕುತೂಹಲವಿದೆ.

ಆರ್‌ಸಿಬಿಯ ಸ್ಫೋಟಕ ಬ್ಯಾಟರ್‌ಗಳಿಗೆ ಲಖನೌದ ಯುವ ವೇಗಿಗಳಾದ ಆವೇಶ್‌ ಖಾನ್‌ ಮತ್ತು ಮೋಹ್ಸಿನ್‌ ಖಾನ್‌ ಸವಾಲೆಸೆಯಲಿದ್ದಾರೆ. ಇವರಿಬ್ಬರ ಜೊತೆ ಅನುಭವಿ ಜೇಸನ್‌ ಹೋಲ್ಡರ್‌ ಮತ್ತು ದುಷ್ಮಾಂತ ಚಮೀರ ಸಹ ಇದ್ದಾರೆ. ಆದರೆ ಇವರಿಬ್ಬರು ಸ್ಥಿರ ಪ್ರದರ್ಶನ ಕಾಯ್ದುಕೊಳ್ಳಲು ವಿಫಲವಾಗಿದ್ದು, ನಾಯಕ ಕೆ.ಎಲ್‌.ರಾಹುಲ್‌ರ ತಲೆಬಿಸಿ ಹೆಚ್ಚಿಸಿದೆ.

ರಾಹುಲ್‌, ಡಿ ಕಾಕ್‌ ಭೀತಿ: ಆರ್‌ಸಿಬಿಗೆ ಲಖನೌದ ಆರಂಭಿಕರಾದ ರಾಹುಲ್‌ ಮತ್ತು ಕ್ವಿಂಟನ್‌ ಡಿ ಕಾಕ್‌ರ ಭೀತಿ ಸಹಜವಾಗಿಯೇ ಕಾಡಲಿದೆ. ಈ ಇಬ್ಬರು ಸೇರಿ ಈ ಆವೃತ್ತಿಯಲ್ಲಿ 1039 ರನ್‌ ಕಲೆಹಾಕಿದ್ದು, ವೈಯಕ್ತಿಕವಾಗಿ ಅತಿಹೆಚ್ಚು ರನ್‌ ಗಳಿಸಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಕ್ರಮವಾಗಿ 2 ಮತ್ತು 3ನೇ ಸ್ಥಾನದಲ್ಲಿದ್ದಾರೆ. ಕೋಲ್ಕತಾ ವಿರುದ್ಧದ ಪಂದ್ಯದಲ್ಲಿ ಮೊದಲ ವಿಕೆಟ್‌ಗೆ 210 ರನ್‌ ಜೊತೆಯಾಟವಾಡಿ ದಾಖಲೆ ಬರೆದಿದ್ದ ಈ ಜೋಡಿಯನ್ನು ಆರಂಭದಲ್ಲೇ ಪೆವಿಲಿಯನ್‌ಗಟ್ಟದೆ ಇದ್ದರೆ ಆರ್‌ಸಿಬಿಗೆ ಅಪಾಯ ಕಟ್ಟಿಟ್ಟಬುತ್ತಿ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!

ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !! Twitter Facebook LinkedIn WhatsApp ಮಂಗಳೂರು:

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ