ಬುಧವಾರ, ಮೇ 1, 2024
ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ಮುಂದೆ ಶಬ್ದರಹಿತ ಕಾರ್ಯಾಚರಣೆ-ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ ಪ್ರಕಟ ಮಾಡದಂತೆ ಕೋರ್ಟ್‌ನಿಂದ ನಿರ್ಬಂಧಕಾಜ್ಞೆ ತಂದ ಕೆ.ಎಸ್‌. ಈಶ್ವರಪ್ಪ ಪುತ್ರ ಕೆ.ಇ .ಕಾಂತೇಶ್‌!-ದಾರಿ ತಪ್ಪಿದ್ದು ಮಹಿಳೆಯರಲ್ಲ, ನಿಮ್ಮ ಮಗ - ಪ್ರಕಾಶ್ ರೈ-ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!-ತೆಲಂಗಾಣದ ನಿಜಾಮಾಬಾದ್ ಕ್ಷೇತ್ರದ ಚುನಾವಣಾ AICC ಉಸ್ತುವಾರಿಯಾಗಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ನೇಮಕ-ಅನೈತಿಕ ಸಂಬಂಧ ಶಂಕೆ ಕಾರಿಗೆ ಬೆಂಕಿ ಹಚ್ಚಿ ವ್ಯಕ್ತಿಯ ಬರ್ಬರ ಕೊಲೆ!-Commercial LPG ಗ್ಯಾಸ್‌ ಸಿಲಿಂಡರ್‌ ದರದಲ್ಲಿ19 ರೂ. ಇಳಿಕೆ-ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸಿರಿಯಾ ರಾಯಭಾರ ಕಚೇರಿ ಮೇಲೆ ಇಸ್ರೇಲ್ ದಾಳಿ; ಇಬ್ಬರು ಜನರಲ್ ಸೇರಿ 11 ಮಂದಿ ಸಾವು.!

Twitter
Facebook
LinkedIn
WhatsApp
ಸಿರಿಯಾ ರಾಯಭಾರ ಕಚೇರಿ ಮೇಲೆ ಇಸ್ರೇಲ್ ದಾಳಿ; ಇಬ್ಬರು ಜನರಲ್ ಸೇರಿ 11 ಮಂದಿ ಸಾವು.!

ಡಮಾಸ್ಕಸ್‌: ಸಿರಿಯಾದ ರಾಜಧಾನಿಯಲ್ಲಿರುವ ಇರಾನಿನ ರಾಯಭಾರ (Iran Embassy) ಕಚೇರಿ ಮೇಲೆ ಇಸ್ರೇಲ್​ (Israel) ದಾಳಿ ಮಾಡಿದ್ದು, ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ದಾಳಿಯಲ್ಲಿ ಅನೆಕ್ಸ್ ಕಟ್ಟಡವನ್ನು ಹೊಡೆದುರುಳಿಸಿದ್ದರಿಂದ 8 ಮಂದಿ ಹತರಾಗಿದ್ದಾರೆ. ಸಿರಿಯಾದ ಅಧಿಕೃತ ಸುದ್ದಿ ಸಂಸ್ಥೆ SANA ಪ್ರಕಾರ, ಇಸ್ರೇಲಿ ದಾಳಿಯು ಡಮಾಸ್ಕಸ್‌ನ ಇರಾನ್ ಕಾನ್ಸುಲೇಟ್ ಕಟ್ಟಡವನ್ನು ಗುರಿಯಾಗಿಸಿಕೊಂಡಿದೆ. ರಾಯಭಾರ ಕಚೇರಿಯ ಪಕ್ಕದಲ್ಲಿರುವ ಕಟ್ಟಡ, ಅನೆಕ್ಸ್ ಅನ್ನು ನೆಲಸಮಗೊಳಿಸಲಾಗಿದೆ. ಬಾಂಬ್ ಸ್ಫೋಟದ ಸ್ಥಳವನ್ನು ಸುದ್ದಿ ಸಂಸ್ಥೆಗಳು ಖಚಿತಪಡಿಸಿವೆ.

ಅನೆಕ್ಸ್ ಕಟ್ಟಡವನ್ನು ಸಂಪೂರ್ಣವಾಗಿ ನಾಶಗೊಂಡಿದ್ದು, ರಾಯಭಾರಿಯು ಹಾನಿಗೊಳಗಾಗಲಿಲ್ಲ ಎಂದು ಇರಾನ್ ಮಾಧ್ಯಮಗಳು ವರದಿ ಮಾಡಿವೆ.

ಡಮಾಸ್ಕಸ್‌ನಲ್ಲಿರುವ ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್‌ನ ರಾಯಭಾರಿ ಹುಸೇನ್ ಅಕ್ಬರಿ ಮತ್ತು ಅವರ ಕುಟುಂಬಕ್ಕೆ ಇಸ್ರೇಲಿ ದಾಳಿಯಲ್ಲಿ ಯಾವುದೇ ಹಾನಿಯಾಗಿಲ್ಲ ಎಂದು ಇರಾನ್‌ನ ನೂರ್ ಸುದ್ದಿ ಸಂಸ್ಥೆ ಹೇಳಿದೆ.

ಆಕ್ರಮಿತ ಗೋಲನ್ ಹೈಟ್ಸ್‌ನ ದಿಕ್ಕಿನಿಂದ ಇಸ್ರೇಲಿ ವಿಮಾನಗಳು ಕಾನ್ಸುಲೇಟ್ ಕಟ್ಟಡವನ್ನು ಗುರಿಯಾಗಿಸಿಕೊಂಡಡು ದಾಳಿ ಮಾಡಿವೆ ಎಂದು ಸಿರಿಯನ್ ರಕ್ಷಣಾ ಸಚಿವಾಲಯ ತಿಳಿಸಿದೆ ಎಂದು ಬಿಬಿಸಿ ವರದಿ ಮಾಡಿದೆ. ಸಿರಿಯಾದ ವಾಯು ರಕ್ಷಣಾ ಪಡೆಗಳು ಅವರು ಉಡಾವಣೆ ಮಾಡಿದ ಕೆಲವು ಕ್ಷಿಪಣಿಗಳನ್ನು ಹೊಡೆದುರುಳಿಸಿದವು, ಆದರೆ ಇತರ ಕ್ಷಿಪಣಿಗಳು ಇಡೀ ಕಟ್ಟಡವನ್ನು ನಾಶಪಡಿಸಿದವು ಎಂದು ಸಚಿವಾಲಯ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ