ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಜೈಲು ಪಾಲಾದ ಸೋನು ಗೌಡ ; ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ..!

Twitter
Facebook
LinkedIn
WhatsApp
ಜೈಲು ಪಾಲಾದ ಸೋನು ಗೌಡ ; ನ್ಯಾಯಾಂಗ ಬಂಧನ ವಿಧಿಸಿದ ನ್ಯಾಯಾಲಯ..!

ಬೆಂಗಳೂರು: ರಾಯಚೂರು ಮೂಲದ ಬಡ ಕುಟುಂಬಕ್ಕೆ ಸೇರಿದ ಏಳು ವರ್ಷದ ಬಾಲಕಿಯನ್ನು ಅಕ್ರಮವಾಗಿ ದತ್ತು (Illegal Adoption) ಪಡೆದ ಅರೋಪದಲ್ಲಿ ಬಂಧನಕ್ಕೆ ಒಳಗಾದ ಬಿಗ್‌ ಬಾಸ್‌ ಖ್ಯಾತಿಯ (Bigg Boss fame) ರೀಲ್ಸ್‌ ರಾಣಿ ಸೋನು ಶ್ರೀನಿವಾಸ ಗೌಡಳನ್ನು (Sonu Srinivas Gowda) ಕೋರ್ಟ್‌ 14 ದಿನಗಳ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ. ಈ ಮೂಲಕ ತನ್ನ ವಿಭಿನ್ನ ವರ್ತನೆ ಮತ್ತು ವಿವಾದಗಳಿಂದಲೇ ಗಮನ ಸೆಳೆದ ಸುಂದರಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾಳೆ (Parappana Agrahara Jail)

ಕಳೆದ ಶುಕ್ರವಾರ ಆಕೆಯನ್ನು ಪೊಲೀಸರು ಬಂಧಿಸಿದಾಗ ಕೋರ್ಟ್‌ ನಾಲ್ಕು ದಿನಗಳ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿತ್ತು. ಪೊಲೀಸ್‌ ಕಸ್ಟಡಿ ಅವಧಿ ಸೋಮವಾರಕ್ಕೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ಕೋರ್ಟ್‌ಗೆ ಹಾಜರುಪಡಿಸಲಾಯಿತು. ಆಕೆಗೆ ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್‌ ಆದೇಶ ನೀಡಿದೆ.

ಸೋಷಿಯಲ್‌ ಮೀಡಿಯಾ ಸ್ಟಾರ್‌ ಆಗಿರುವ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ರಾಯಚೂರಿನ ಮುದ್ದಪ್ಪ ಮತ್ತು ರಾಜೇಶ್ವರಿ ದಂಪತಿಯ ಏಳು ವರ್ಷದ ಮಗುವಿನ ಜತೆ ಮುದ್ದಾಟವಾಡುತ್ತಾ, ರೀಲ್ಸ್‌ ಮಾಡುತ್ತಿದ್ದ ಸೋನು ಬಳಿಕ ಮಗುವನ್ನು ತನಗೇ ಕೊಡಬೇಕು ಎಂದು ಹಠ ಹಿಡಿದಿದ್ದಳಂತೆ. 10 ಲಕ್ಷ ರೂ. ಆಮಿಷವನ್ನೂ ಒಡ್ಡಿದ್ದಳಂತೆ. ಆದರೆ ಮನೆಯವರು ಕೊಟ್ಟಿರಲಿಲ್ಲ.

ಆದರೆ, ಕಳೆದ ಮಾ. 1ರಂದು ರಾಯಚೂರಿನ ಮಗುವಿನ ಮನೆಗೆ ಹೋಗಿದ್ದ ಸೋನು ಗೌಡ ಮಲಗಿದ್ದ ಮಗುವನ್ನು ಎತ್ತಿಕೊಂಡು ಬಂದಿದ್ದಳೆನ್ನಲಾಗಿದೆ. ಮಗಳು 15 ದಿನ ನನ್ನ ಬಳಿ ಇರಲಿ. ಬಳಿಕ ಕರೆದುಕೊಂಡು ಬರುತ್ತೇನೆ ಎಂದಿದ್ದಳಂತೆ ಸೋನು. ಅಪ್ಪ ಅಮ್ಮ ಬೇಕು ಎಂದಾಗ ಕರೆದುಕೊಂಡು ಬರುತ್ತೇನೆ. ಮಗಳನ್ನು ನೋಡಬೇಕು ಎನಿಸಿದರೆ ನೀವೂ ಬನ್ನಿ ಎಂದಿದ್ದರು ಹೆತ್ತವರು.

ಮಗುವನ್ನು ಬೆಂಗಳೂರಿಗೆ ಕರೆದುಕೊಂಡು ಬಂದ ಬಳಿಕ, ನಾನು ಮಗುವನ್ನು ದತ್ತು ತೆಗೆದುಕೊಂಡಿದ್ದೇನೆ ಎಂದು ಸೋನು ಗೌಡ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೊಂಡಿದ್ದಳು. ಆದರೆ, ಅವಿವಾಹಿತೆಯಾಗಿರುವ ಆಕೆ ಹೇಗೆ ದತ್ತು ಪಡೆದುಕೊಂಡಳು. ಅದಕ್ಕೆ ಸಂಬಂಧಿಸಿದ ನಿಬಂಧನೆಗಳನ್ನು ಪಾಲನೆ ಮಾಡಲಾಗಿದೆಯಾ ಎಂಬ ಬಗ್ಗೆ ವಿಚಾರಿಸಿದಾಗ ಯಾವುದೇ ಕ್ರಮಗಳ ಪಾಲನೆ ಆಗಿಲ್ಲದಿರುವುದು ಪತ್ತೆಯಾಗಿತ್ತು. ಆಗ ಮಕ್ಕಳ ಕಲ್ಯಾಣ ಸಮಿತಿ ದೂರು ನೀಡಿ ಪ್ರಕರಣ ಬೆಳಕಿಗೆ ಬಂದಿತ್ತು. ಜತೆಗೆ ಮಗುವನ್ನು ದತ್ತು ಪಡೆದ ಬಗ್ಗೆ ಸಾಮಾಜಿಕವಾಗಿ ಹೇಳಿಕೊಳ್ಳುವಂತಿಲ್ಲ ಎಂಬ ನಿಯಮದ ಉಲ್ಲಂಘನೆಯಾಗಿದೆ ಎನ್ನುವುದು ಸಾಬೀತಾಗಿತ್ತು.

ಹೆತ್ತವರು ಹೇಳುವುದೇನು?

ʼʼಪ್ರೀತಿಯಿಂದ ಕರೆದುಕೊಂಡು ಹೋಗುತ್ತೇನೆ ಎಂದಾಗ ಕಳುಹಿಸಿಕೊಟ್ಟಿದ್ದೇವೆ. ಆಕೆಯನ್ನು ಚೆನ್ನಾಗಿ ಓದಿಸಿ ಅವಳ ಕಾಲ ಮೇಲೆ ಅವಳು ನಿಲ್ಲುವಂತೆ ಮಾಡುತ್ತೇನೆ ಎಂದ ಕಾರಣಕ್ಕೆ ಮಗಳನ್ನು ಕಳುಹಿಸಿ ಕೊಡಲು ಮನೆಯವೆರಲ್ಲ ಸಮ್ಮತಿ ಸೂಚಿಸಿದ್ದರು. ಅದು ಬಿಟ್ಟು ಹಣದ ಆಮಿಷ ತೋರಿಸಿಲ್ಲ ಎನ್ನುವುದು ಬಾಲಕಿಯ ಹೆತ್ತವರ ಹೇಳಿಕೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ