ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Jharkhand: ಅತ್ಯಾಚಾರ ಯತ್ನ, ಒಲ್ಲೆ ಎಂದಿದ್ದಕ್ಕೆ ಕೋಪಗೊಂಡು ಮಹಿಳೆ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹತ್ಯೆ

Twitter
Facebook
LinkedIn
WhatsApp
768 512 17440094 thumbnail 3x2 don

ಅತ್ಯಾಚಾರ ಯತ್ನ ಸಫಲವಾಗಿಲ್ಲ ಎಂದು ಮಹಿಳೆಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿತ್ತು. ಇದೀಗ ಘಟನೆ ನಡೆದು ಒಂದು ತಿಂಗಳ ಬಳಿಕ ಮಹಿಳೆಯು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಜನವರಿ 7 ರಂದು ಹಜಾರಿಬಾಗ್​ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆಯು ಶೇ.70ರಷ್ಟು ಸುಟ್ಟುಹೋಗಿದ್ದಳು. ಅತ್ಯಾಚಾರ ಯತ್ನವನ್ನು ವಿರೋಧಿಸಿದ್ದಕ್ಕಾಗಿ ನಾಲ್ವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು. ಈ ಆರೋಪಿಗಳಲ್ಲಿ ಮೂವರು ಆಕೆಯ ಸಂಬಂಧಿಕರು ಎನ್ನುವ ಮಾಹಿತಿ ಲಭ್ಯವಾಗಿದೆ. ಮಹಿಳೆಯನ್ನು ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (RIMS) ಚಿಕಿತ್ಸೆ ನೀಡಲಾಗುತ್ತಿತ್ತು.

ತನಿಖೆ ಮುಂದುವರಿದಿದ್ದು, ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಎಸ್​ಪಿ ತಿಳಿಸಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಆರೋಪಿಗಳಲ್ಲದೆ, ಘಟನೆಯಲ್ಲಿ ಸಂತ್ರಸ್ತೆಯ ಪತಿಯ ಪಾತ್ರದ ಬಗ್ಗೆಯೂ ತನಿಖೆ ನಡೆಸುತ್ತಿದ್ದೇವೆ. ಮಹಿಳೆ ಮತ್ತು ಆಕೆಯ ಪತಿ ನೀಡಿರುವ ಹೇಳಿಕೆಗಳಲ್ಲಿ ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ನಾಲ್ವರು ಆರೋಪಿಗಳಲ್ಲಿ ಮೂವರು ಸಂಬಂಧಿಕರು ಸಹ ಸೇರಿದ್ದಾರೆ ಎಂದು ಎಸ್‌ಪಿ ಹೇಳಿದರು, ಸಹಾಯಕ್ಕಾಗಿ ಕೂಗಿದಾಗ ನೆರೆಹೊರೆಯವರು ತನ್ನನ್ನು ರಕ್ಷಿಸಿದರು ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಳು. ಆದರೆ ಪತಿ ತನ್ನನ್ನು ರಕ್ಷಿಸಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಪತಿಗೆ ಈಗಾಗಲೇ ಮದುವೆಯಾಗಿದ್ದು, ಸಂತ್ರಸ್ತೆ ಆತನ ನಾಲ್ಕನೇ ಪತ್ನಿ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಅಪರಾಧದಲ್ಲಿ ಭಾಗಿಯಾಗಿರುವ ನಾಲ್ವರು ಆರೋಪಿಗಳಲ್ಲಿ ಒಬ್ಬ ಮಹಿಳೆ ಮತ್ತು ಅವಳು ಸಂತ್ರಸ್ತೆಯ ಸೊಸೆಯಾಗಿರುವುದರಿಂದ ಅತ್ಯಾಚಾರಕ್ಕೆ ಯತ್ನಿಸಿದ ಮಹಿಳೆಯ ಆರೋಪದ ಮೇಲೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಅತ್ತಿಗೆಯ ಪುತ್ರರೂ ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಆರೋಪಿ ವಿರುದ್ಧ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಪೊಲೀಸ್ ಪ್ರಕರಣದ ತನಿಖೆ ನಡೆಸುತ್ತಿರುವ ಉಪವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಅನುಜ್ ಓರಾನ್ ಮಾತನಾಡಿ, ಎಫ್‌ಐಆರ್‌ನಲ್ಲಿ ಸಂತ್ರಸ್ತೆ ಮಾಡಿರುವ ಆರೋಪಗಳು ನಮ್ಮ ಪ್ರಾಥಮಿಕ ತನಿಖೆಗೆ ಹೊಂದಿಕೆಯಾಗುವುದಿಲ್ಲ.

ಆರೋಪಿಗಳ ವಿರುದ್ಧ ನಮಗೆ ಇದುವರೆಗೆ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಎಫ್‌ಎಸ್‌ಎಲ್ (ವಿಧಿ ವಿಜ್ಞಾನ ಪ್ರಯೋಗಾಲಯ) ವರದಿಗಾಗಿ ಕಾಯುತ್ತಿದ್ದೇವೆ ಎಂದರು. ಇದೇ ವೇಳೆ ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರು ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ