ಕಡಬ: ಕಾಡಾನೆ ದಾಳಿಯಿಂದ ದನ ಬಲಿ!
ಕಡಬ ಡಿಸೆಂಬರ್ 06: ಕಾಡಾನೆ ದಾಳಿಗೆ ದನವೊಂದು ಗಾಯಗೊಂಡು ಸಾವನಪ್ಪಿದ ಘಟನೆ ಕಡಬ ತಾಲೂಕು ಕೊಣಾಜೆಯ ಸಿ.ಆರ್.ಸಿ. ತಮಿಳು ಕಾಲೋನಿ ಬಳಿ ನಡೆದಿದೆ. ಕೊಣಾಜೆ ದೊಡ್ಡಮನೆಯ ಅಶೋಕ ಎಂಬವರಿಗೆ ಸೇರಿದ ದನವನ್ನು ಮಂಗಳವಾರ ಮೇಯಲು ಬಿಟ್ಟಿದ್ದು, ಸಂಜೆ ಮನೆಯವರು ಹುಡುಕಾಡಿದಾಗ ದನ ಸಿಕ್ಕಿರಲಿಲ್ಲ.
ಬುಧವಾರ ಬೆಳಿಗ್ಗೆ ಮತ್ತೆ ಹುಡುಕಾಟ ಮುಂದುವರಿಸಿದಾಗ ದನ ತೋಟದಲ್ಲಿ ಗಾಯಗೊಂಡು ಸತ್ತು ಬಿದ್ದಿರುವುದು ಕಂಡುಬoದಿದೆ.
ತೋಟದಲ್ಲಿ ನೀರಾವರಿ ಪೈಪ್ ಗಳು ಹಾನಿಯಾಗಿದ್ದು, ರಾತ್ರಿ ವೇಳೆ ಆನೆ ಬಂದಿರುವ ಬಗ್ಗೆಯೂ ಸ್ಥಳೀಯರು ಸಂಶಯ ವ್ಯಕ್ತಪಡಿಸಿದ್ದಾರೆ. ಸ್ವಷ್ಟ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.
ಬೆಳ್ತಂಗಡಿ – ಎರಡು ದನದ ಕರುಗಳನ್ನು ತಿಂದು ಹಾಕಿದ ಚಿರತೆ
ಬೆಳ್ತಂಗಡಿ : ಚಿರತೆಯೊಂದು ದನದ ಕೊಟ್ಟಿಗೆಗೆ ದಾಳಿ ಮಾಡಿ ಎರಡು ಕರುಗಳನ್ನು ಸಾಯಿಸಿದ ಘಟನೆ ಮುಂಡೂರು ಗ್ರಾಮದಲ್ಲಿ ನಡೆದಿದೆ.
ಮಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ ಕೊಂದು ಅನಂತರ ತೋಟಕ್ಕೆ ಎಳೆದೊಯ್ದು ತಿಂದು ಹಾಕಿರುವುದು ಕಂಡುಬಂದಿದೆ. ಒಂದೂವರೆ ತಿಂಗಳ ಹಿಂದೆ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.