ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಪು: ಲೈಟ್ ಹೌಸ್ ಆಸುಪಾಸಿನಲ್ಲಿ ಸಮುದ್ರಕ್ಕೆ ಇಳಿಯಲು ನಿಷೇಧ

Twitter
Facebook
LinkedIn
WhatsApp
santu 1723 kaupligt

ಕಾಪು, : ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ.

ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು ಪ್ರಯತ್ನಿಸುತ್ತಿರುವುದರಿಂದ ಆ ಪ್ರದೇಶಕ್ಕೆ ಹೋಗುವುದನ್ನೇ ನಿರ್ಬಂಧಿಸಿ ಹಗ್ಗ ಕಟ್ಟಿ ಎಚ್ಚರಿಕೆ ಫಲಕ ಅಳವಡಿಸಲಾಗಿದೆ.

ಈಗಾಗಲೇ ಸಮುದ್ರ ಎರಡು ಅಡಿಯಷ್ಟು ಆಳದವರೆಗಿನ ಮರಳನ್ನು ತನ್ನ ಒಡಲಿಗೆ ಎಳೆದುಕೊಂಡಿದ್ದು ಲೈಟ್ ಹೌಸ್ ಮತ್ತು ಸಮುದ್ರದ ನಡುವೆ ಒಂದೂವರೆ ಅಡಿಯಷ್ಟು ಆಳಕ್ಕೆ ಇಳಿದಿದೆ. ಇದರಿಂದಾಗಿ ಲೈಟ್‌ಹೌಸ್ ಹೋಗುವ ದಾರಿ ಬಂದ್ ಆಗಿದೆ. ಕಳೆದ ೩-೪ ದಿನಗಳಿಂದ ಲೈಟ್ ಹೌಸ್‌ಗೂ ಬೀಗ ಜಡಿಯಲಾಗಿದ್ದು, ಪ್ರವಾಸಿಗರಿಗೆ ಒಳಗೆ ಪ್ರವೇಶಿಸಲು ಅವಕಾಶ ನಿರಾಕರಿಸಲಾಗಿದೆ.

ಬೈಂದೂರು: ಒತ್ತಿನಣೆಯಲ್ಲಿ ಮತ್ತೆ ಗುಡ್ಡಕುಸಿತ ಆರಂಭ-ವಾಹನ ಸವಾರದಲ್ಲಿ ಆತಂಕ

ಬೈಂದೂರು, : ಶಿರೂರು ಹೆದ್ದಾರಿಯ ನಡುವಿನ ಒತ್ತಿನಣೆಯಲ್ಲಿ ಮತ್ತೆ ಗುಡ್ಡಕುಸಿತ ಆರಂಭವಾಗಿದೆ. ಕಳೆದ ಮೂರುನಾಲ್ಕು ದಿನಗಳಿಂದ ಗುಡ್ಡ ಅಲ್ಲಲ್ಲಿ ಕುಸಿಯುತ್ತಿದ್ದು ರವಿವಾರವೂ ಕೂಡಾ ಗುಡ್ಡ ಕುಸಿತವಾಗಿದೆ. ರವಿವಾರ ರಾತ್ರಿ ಮತ್ತೆ ಕುಸಿತವಾಗಿದ್ದು ಸೋಮವಾರ ಬೆಳಿಗ್ಗೆ ರಸ್ತೆಗೆ ಜಾರಿರುವ ಮಣ್ಣನ್ನು ತೆರವುಗೊಳಿಸಲಾಯಿತು.

ಈ ಭಾಗದಲ್ಲಿ ಮತ್ತೆ ಕೂಡಾ ಗುಡ್ಡ ಕುಸಿಯುವ ಸಾಧ್ಯತೆಗಳಿವೆ. ಮೇಲ್ವಾಗ ಮತ್ತಷ್ಟು ಕುಸಿಯುವ ಸಾಧ್ಯತೆಗಳು ದಟ್ಟವಾಗಿದೆ. ಅರಣ್ಯ ಇಲಾಖೆಯ ವ್ಯಾಪ್ತಿಯ ಸ್ಥಳವಾಗಿರುವುದರಿಂದ ಕುಸಿಯಲ್ಪಡುವ ಪ್ರದೇಶವನ್ನು ತೆರವು ಮಾಡಲು ಸಮಸ್ಯೆಯಾಗುತ್ತದೆ. ಹಾಗಾಗಿ ಕೆಳಭಾಗದಲ್ಲಿ ಕಾಂಕ್ರೆಟಿನ ಬಂಡ್‍ಗಳನ್ನು ಇಟ್ಟು ಕುಸಿದ ಮಣ್ಣು ರಸ್ತೆಗೆ ಅಪ್ಪಳಿಸದಂತೆ ಸುರಕ್ಷಿತ ಕ್ರಮಗಳ ಕೈಗೊಳ್ಳಲಾಗುತ್ತಿದೆ. ಆದರೂ ಕೂಡ ಮೇಲ್ಭಾಗದ ಅಪಾಯದ ಮುನ್ಸೂಚನೆ ನೀಡುತ್ತಿದ್ದು ಅಪಾಯ ಕಟ್ಟಿಟ್ಟ ಬುತ್ತಿ.

ಒತ್ತಿನಣೆಯ ಗುಡ್ಡದಲ್ಲಿ ಸಂಪೂರ್ಣ ಮಣ್ಣು ತಗೆದು ನಡುವೆ ರಸ್ತೆ ನಿರ್ಮಿಸಿದ ಪರಿಣಾಮ ಇವತ್ತಿಗೂ ಮಳೆಗಾಲದಲ್ಲಿ ಗುಡ್ಡ ಕುಸಿದು ಸಂಚಾರಕ್ಕೆ ಸಮಸ್ಯೆಯಾಗುವುದನ್ನು ತಡೆಗಟ್ಟಲು ಆಗಿಲ್ಲ. ಅವೈಜ್ಞಾನಿಕವಾಗಿ ಮಣ್ಣು ತಗೆದಿರುವುದರಿಂದ ಜೇಡಿ ಮಣ್ಣು ಮಳೆಗೆ ಕುಸಿಯುತ್ತಿದೆ. ತೀವ್ರ ಕುಸಿಯುವ ಪ್ರದೇಶಕ್ಕೆ ಕಾಂಕ್ರಿಟ್ ಹೊದಿಕೆ ಮಾಡಿದರೂ ಕೂಡಾ ಅದು ಒಡೆದು ಹೋಗಿದೆ. ಈ ಕಾಂಕ್ರಿಟ್ ಪದರಗಳು ಸಂಪೂರ್ಣವಾಗಿ ಜಖುಂಗೊಂಡಿದ್ದು ಮತ್ತೆ ಮಳೆ ಜೋರಾದರೆ ಜೇಡಿಮಣ್ಣು ನೀರಿನೊಂದಿಗೆ ರಸ್ತೆಗೆ ಅಪ್ಪಳಿಸಲಿದೆ. ಇದು ವರ್ಷದ ಎಂಟು ತಿಂಗಳು ನೀರು ಒಸರುವ ಸ್ಥಳವಾದ್ದರಿಂದ ಮಣ್ಣು ಕುಸಿತ ನಿಯಂತ್ರಿಸುವುದು ಕೂಡಾ ಕಷ್ಟಸಾಧ್ಯ.
ಈಗಾಗಲೇ ಅಲ್ಲಲ್ಲಿ ಕಾಂಕ್ರಿಟ್ ತಡೆಯನ್ನು ಒಡೆದು ಮಣ್ಣು ಕುಸಿಯುತ್ತಿದ್ದು, ಮರಳು ಚೀಲಗಳನ್ನು ಅಡ್ಡ ಇಡಲಾಗಿದೆ. ಆದರೆ ಇದರಿಂದ ನಿಯಂತ್ರಣ ಕಷ್ಟಸಾಧ್ಯ. ಮಳೆಯ ತೀವ್ರತೆ ಹೆಚ್ಚಾದರೆ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿಯುವ ಸಾಧ್ಯತೆಗಳು ಇವೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist