ಬುಧವಾರ, ಮೇ 8, 2024
ಕೋವಿಶೀಲ್ಡ್‌ ಅಡ್ಡ ಪರಿಣಾಮ ಬಹಿರಂಗ ಆದ ಬೆನ್ನಲ್ಲೇ ಉತ್ಪಾದನೆ ಸ್ಥಗಿತಗೊಂಡಿದೆ ಎಂದ ಕಂಪೆನಿ..!-ಭಾರತೀಯ ಸಾಗರೋತ್ತರ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ರಾಜೀನಾಮೆ..!-ಶಾಕಿಂಗ್ ನ್ಯೂಸ್; ಚಿಕನ್‌ ಶವರ್ಮಾ ತಿಂದು 19 ವರ್ಷದ ಯುವಕ ಸಾವು..!-ಅನುಭವಿ ರಾಜಕಾರಣಿ ಕೆ.ವಸಂತ ಬಂಗೇರವರ ಬೆಳ್ತಂಗಡಿ ಕ್ಷೇತ್ರದಲ್ಲಿ ಸೋಲು ಗೆಲುವಿನ ರಾಜಕೀಯ ಪಯಣ ಹೇಗಿತ್ತು..!-ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ-ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!-ರೋಹಿಣಿ ಸಿಂಧೂರಿ ಮತ್ತು ರೂಪ ಮೌದ್ಗಿಲ್ ಗೆ ನ್ಯಾಯಾಲಯ ಮಹತ್ವದ ಸಲಹೆ ; ಏನದು?-ಕೋವಿಶೀಲ್ಡ್ ಲಸಿಕೆ ಹಿಂಪಡೆದ ತಯಾರಕ ಕಂಪನಿ ಆಸ್ಟ್ರಾಜೆನಿಕಾ..!-ಹೆಚ್ ಡಿ ರೇವಣ್ಣಗೆ ಮೇ 14 ರವರೆಗೆ ನ್ಯಾಯಾಂಗ ಬಂಧನ ಮುಂದೂಡಿಕೆ..!-ಮಂಗಳೂರು: 21 ವರ್ಷದ ಕಾಲೇಜು ವಿದ್ಯಾರ್ಥಿನಿ ನಾಪತ್ತೆ...!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

Twitter
Facebook
LinkedIn
WhatsApp
ಕಾರ್ಕಳ : ಮಕ್ಕಳ ಹೋಂ ವರ್ಕ್ ವಿಚಾರದಿಂದ ಆರಂಭವಾದ ಗಲಾಟೆ ; ಪೊಲೀಸ್ ಠಾಣೆ ಮೆಟ್ಟಿಲೇರಿದ ದಂಪತಿಗಳು...!

ಕಾರ್ಕಳ: ಮಕ್ಕಳ ಹೋಂವರ್ಕ್ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ಮಧ್ಯೆ ಜಗಳ ನಡೆದು ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದ ಘಟನೆ ಕಾರ್ಕಳದಲ್ಲಿ ಸಂಭವಿಸಿದೆ. ದುರ್ಗಾ ಗ್ರಾಮದ ಅಶೋಕ್ ಹಾಗೂ ಅವರ ಪತ್ನಿ ವಿನಂತಿ ಅವರ ಮಧ್ಯೆ ಜಗಳವಾಗಿದ್ದು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನ. 19ರ ರಾತ್ರಿ 11:30ರ ವೇಳೆ ವಿನಂತಿ ಅವರು ತಮ್ಮ ಮಕ್ಕಳಿಗೆ ಶಾಲೆಯಲ್ಲಿ ನೀಡಿದ ಮನೆಕೆಲಸವನ್ನು ಮಾಡುವಂತೆ ತಿಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಅವರ ಪತಿ ಅಶೋಕ್ ಅವರು ಅವಾಚ್ಯ ಶಬ್ದಗಳಿಂದ ಬೈಯ್ಯು ಗಾಂಧಿ ಮೈದಾನದಲ್ಲಿರುವ ತಮ್ಮ ಫ್ಲ್ಯಾಟಿನ ಕೀಯನ್ನು ಕೊಡುವಂತೆ ಒತ್ತಾಯಿಸಿರುತ್ತಾರೆ. ಆಗ ವಿನಂತಿ ಅವರು ಬೆಳಗ್ಗೆ ಹೋಗುವಂತೆ ತಿಳಿಸಿದಾಗ ಏಕಾಏಕಿ ಕೋಪಗೊಂಡಿರುವ ಅಶೋಕ್ ವಿನಂತಿ ಅವರ ಮೇಲೆ ಹಲ್ಲೆ ನಡೆಸಿರುತ್ತಾರೆ.

ನೀರಿನ ಬಾಟಲಿಯಲ್ಲಿ ಹಲ್ಲೆ ಅಶೋಕ್ ಅವರು ಹಲ್ಲೆ ನಡೆಸಿದ ಸಂದರ್ಭ ವಿನಂತಿ ಕಿರುಚಿಕೊಂಡಿದ್ದು ಈ ವೇಳೆ ಅಶೋಕ್ ನೀರಿನ ಪ್ಲಾಸ್ಟಿಕ್ ಬಾಟಲಿಯಿಂದ ಮುಖಕ್ಕೆ ಹಲ್ಲೆ ನಡೆಸಿರುತ್ತಾರೆ ಎಂದು ವಿನಂತಿಯವರು ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ