ಸೋಮವಾರ, ಮೇ 20, 2024
ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕತ್ರೀನಾ ಕೈಫ್ ಫೊಟೋ ಡೀಪ್ ಫೇಕ್ ; ಅಶ್ಲೀಲವಾಗಿ ಜಾಲತಾಣದಲ್ಲಿ ವೈರಲ್..!

Twitter
Facebook
LinkedIn
WhatsApp

ಮುಂಬಯಿ: ಕಳೆದ ಕೆಲ ದಿನಗಳಿಂದ ಸಿನಿಮಾರಂಗದಲ್ಲಿ ಸದ್ದು ಮಾಡುತ್ತಿರುವ ಡೀಪ್‌ ಫೇಕ್‌ ವಿಡಿಯೋದಿಂದ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅಸಮಾಧಾನಗೊಂಡಿದ್ದಾರೆ. ಇಂಥ ಹೇಯ ಕೃತ್ಯದಿಂದ ಕುಗ್ಗಿಹೋಗಿರುವ ರಶ್ಮಿಕಾ ಅವರ ಬೆಂಬಲಕ್ಕೆ ಸಿನಿಮಾರಂಗ ನಿಂತಿದೆ.

ಬ್ರಿಟಿಷ್‌ – ಇಂಡಿಯನ್‌ ಸೋಶಿಯಲ್‌ ಮೀಡಿಯಾ ತಾರೆ ಝಾರ ಪಟೇಲ್‌ ಅವರ ವಿಡಿಯೋಗೆ ರಶ್ಮಿಕಾ ಅವರ ಮುಖವನ್ನು ಜೋಡಿಸಿ ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಮಾಡಲಾಗಿತ್ತು. ಈ ಕುರಿತು ಕಾನೂನು ಕ್ರಮ ಕೈಗೊಳ್ಳಬೇಕೆಂದು ಹಲವು ಕಲಾವಿದರು ರಶ್ಮಿಕಾ ಪರ ಬೆಂಬಲಕ್ಕೆ ನಿಂತಿದ್ದಾರೆ.

ಈ ಸುದ್ದಿ ಸದ್ದಿನಲ್ಲಿರುವಾಗಲೇ ಇದೀಗ ಮತ್ತೊಬ ನಟಿ ಎಐ ತಂತ್ರಜ್ಞಾನದ ದುರುಪಯೋಗದ ಬಲೆಯಲ್ಲಿ ಸಿಲುಕಿದ್ದಾರೆ. ಬಿಟೌನ್‌ ಬ್ಯೂಟಿ ಕತ್ರಿನಾ ಕೈಫ್‌ ಅವರ ಸಿನಿಮಾದ ಫೋಟೋವೊಂದನ್ನು ಮಾರ್ಫಿಂಗ್‌ ಮಾಡಿ ವೈರಲ್‌ ಮಾಡಲಾಗಿದೆ.

ಸಲ್ಮಾನ್‌ ಖಾನ್‌ ಅವರ ʼಟೈಗರ್-3‌ʼ ಸಿನಿಮಾದಲ್ಲಿ ನಟಿ ಕತ್ರಿನಾ ಕೈಫ್‌ ಅವರು ಟವೆಲ್ ಹಾಕಿಕೊಂಡು ಪೈಟ್‌ ಮಾಡುವ ದೃಶ್ಯವೊಂದಿದೆ. ಈ ದೃಶ್ಯವನ್ನು ಟ್ರೇಲರ್‌ ನಲ್ಲಿ ತೋರಿಸಲಾಗಿದೆ. ಈ ದೃಶ್ಯದ ಸ್ಕ್ರೀನ್‌ ಶಾಟ್‌ ನ್ನು ಬಳಸಿಕೊಂಡು ಅದನ್ನು ಡೀಪ್‌ ಫೇಕ್‌ ಫೋಟೋವನ್ನಾಗಿ ಮಾರ್ಫ್‌ ಮಾಡಲಾಗಿದೆ. ಪೋಟೋವನ್ನು ಎಐ ತಂತ್ರಜ್ಞಾನದ ಮೂಲಕ ಆಶ್ಲೀಲ ರೀತಿ ಮಾರ್ಫಿಂಗ್ ಮಾಡಿ ವೈರಲ್‌ ಮಾಡಲಾಗಿದೆ. ಆ ಬಳಿಕ ಸೋಶಿಯಲ್‌ ಮೀಡಿಯಾದಿಂದ ಆ ಫೋಟೋವನ್ನು ಡಿಲೀಟ್‌ ಮಾಡಲಾಗಿದೆ.

ಸದ್ಯ ಈ ಬಗ್ಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡೀಪ್‌ ಫೇಕ್‌ ಬಳಸಿ ತಂತ್ರಜ್ಞಾನವನ್ನು ದುರುಪಯೋಗ ಮಾಡಿಕೊಳ್ಳುತ್ತಿರುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ