ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಚಾಕುವಿನಿಂದ ಇರಿದು ಕೊಂದ!
ಬಾಗಲಕೋಟೆ, ಸೆ.19: ಕೇವಲ ಎಗ್ ರೈಸ್ ಜೊತೆ ಚಿಕನ್ ಕಬಾಬ್ ಕೊಡಲಿಲ್ಲ ಎಂಬ ಕಾರಣಕ್ಕೆ ಅಮಾಯಕನ ಕೊಲೆ ಮಾಡಲಾಗಿರುವ ಘಟನೆ ಬಾಗಲಕೋಟೆ (Bagalkote) ಜಿಲ್ಲೆಯ ಹುನಗುಂದ ತಾಲ್ಲೂಕಿನ ಅಮೀನಗಢ ಪಟ್ಟಣದಲ್ಲಿ ನಡೆದಿದೆ. ಗೈಬುಸಾಬ್ ಮುಲ್ಲಾ(29)ಮೃತ ರ್ದುದೈವಿ. 22 ವರ್ಷದ ಮುಸ್ತಫಾ ಜಂಗಿ ಎಂಬ ಆರೋಪಿ ಕೊಲೆ ಮಾಡಿದ್ದಾನೆ. ಹೌದು, ಅಮೀನಗಢ ಪಟ್ಟಣದ ಬಸ್ ನಿಲ್ದಾಣದ ಬಳಿ ಎಗ್ ರೈಸ್ ಅಂಗಡಿ ಮುಂದೆ ನಿನ್ನೆ(ಸೆ.18) ರಾತ್ರಿ ಗಾಂಜಾ ನಶೆಯಲ್ಲಿ ಬಂದಿದ್ದ ಮುಸ್ತಫಾ ಮೊದಲು ಎಗ್ ರೈಸ್ ಕೇಳಿ ತಿನ್ನುತ್ತಾ ಚಿಕನ್ ಕಬಾನ್ ಕೇಳಿದ್ದಾನೆ. ಆವಾಗ ಗೈಬುಸಾಬ್ ಖಾಲಿಯಾಗಿದೆ ಅಂದಿದಷ್ಟೇ ಅವಾಚ್ಯ ಶಬ್ದದಿಂದ ನಿಂದನೆ ಮಾಡಿದ್ದಾನೆ.
ಬಳಿಕ ಮಾತಿಗೆ ಮಾತು ಬೆಳೆದು, ಇಬ್ಬರ ನಡುವೆ ಜಗಳ ನಡೆದಿದೆ. ಆಗ ಅಕ್ಕಪಕ್ಕದವರು ಬಿಡಿಸಿದ್ದಾರೆ. ಮನೆಗೆ ಹೋಗಿ ಸಹೋದರರ ಕರೆತಂದ ಮುಸ್ತಫಾ, ಮತ್ತೆ ಗೈಬುಸಾಬ್ ಹಾಗೂ ಅಳಿಯ ಹಮೀದ್ ಜೊತೆ ಜಗಳ ಶುರು ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಕುತ್ತಿಗೆಗೆ ಚಾಕು ಇರಿದು ಕೊಲೆ ಮಾಡಿದ್ದಾನೆ. ಗೈಬುಸಾಬ್ನನ್ನು ಕಳೆದುಕೊಂಡ ಕುಟುಂಬಸ್ಥರು, ಸ್ಥಳೀಯರು ಮುಸ್ತಫಾಗೆ ಕಠಿಣ ಶಿಕ್ಷೆಯಾಗಬೇಕು. ಜೊತೆಗೆ ಪಟ್ಟಣದಲ್ಲಿ ನಡೆಯುತ್ತಿರುವ ಗಾಂಜಾ ಹಾವಳಿ ತಡೆಗಟ್ಟಬೇಕು ಅಂತಿದ್ದಾರೆ.
ಇನ್ನು ಮೃತ ಗೈಬುಸಾಬ್ ಎಸ್.ಡಿ.ಪಿ.ಐ ಕಾರ್ಯಕರ್ತ ಕೂಡ ಆಗಿದ್ದಾನೆ. ಮೂಲತಃ ರಬಕವಿ ಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದ ನಿವಾಸಿ. ಆದರೆ, ಪತ್ನಿಯ ತವರುಮನೆ ಅಮೀನಗಢ ಪಟ್ಟಣದಲ್ಲಿ ಅಳಿಯ ಹಮೀದ್ ಜೊತೆ ಎಗ್ ರೈಸ್ ವ್ಯವಹಾರ ಮಾಡುತ್ತಿದ್ದ. ಪತ್ನಿ ನಾಲ್ಕು ಜನ ಹೆಣ್ಣು ಮಕ್ಕಳಿದ್ದಾರೆ. ಅಂತಹ ವ್ಯಕ್ತಿಯನ್ನು ಈ ಪಾಪಿ ಮುಸ್ತಫಾ ಕೊಲೆ ಮಾಡಿದ್ದು, ಪತ್ನಿ-ಮಕ್ಕಳು ಅನಾಥರಾಗಿದ್ದಾರೆ.
ಗಾಂಜಾಗೆ ಅಡಿಕ್ಟ್ ಆಗಿದ್ದ ಆರೋಪಿ ಮುಸ್ತಫಾ
ಮುಸ್ತಫಾ ಜಂಗಿ ಗಾಂಜಾಗೆ ಅಡಿಕ್ಟ್ ಆಗಿದ್ದ. ಜೊತೆಗೆ ಈ ಹಿಂದೆ 2012 ರಲ್ಲಿ ಬೈಕ್ ಕಳ್ಳತನದಲ್ಲಿ ಬಂಧಿತನಾಗಿದ್ದ. ನಂತರ ಉಡುಪಿಯಲ್ಲಿ ಡ್ರಗ್ ಸೇವನೆ ಕೇಸಲ್ಲಿ ಸಿಲುಕಿ ಹಾಕಿಕೊಂಡಿದ್ದ. ಗಾಂಜಾ ನಶೆಯಲ್ಲಿಯೇ ಸದಾ ತೇಲಾಡುತ್ತಿದ್ದ ಇತ. ಒಬ್ಬ ಬಡ ಎಗ್ ರೈಸ್ ವ್ಯಾಪಾರಿಯನ್ನು ಬಲಿ ಪಡೆದಿದ್ದಾನೆ. ಸುದ್ದಿ ತಿಳಿದು ಸ್ಥಳಕ್ಕೆ ಅಮೀನಗಢ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಪಾಪಿಯನ್ನು ಬೆಳಿಗ್ಗೆ ಆಗುವಷ್ಟರಲ್ಲೇ ಪೊಲೀಸರು ಬಂಧಿಸಿದ್ದಾರೆ.
ಘಟನೆಗೆ ಚಿಕನ್ ವಿಚಾರದಲ್ಲಿ ಶುರುವಾದ ಜಗಳ ಒಂದೇ ಕಾರಣನಾ? ಅಥವಾ ಬೇರೆ ಏನಾದರೂ ಇದೆಯಾ ಎಂದು ತನಿಖೆ ನಡೆಸಿದ್ದಾರೆ. ಜೊತೆಗೆ ಗಾಂಜಾ ಬಗ್ಗೆಯೂ ಕಠಿಣ ಕ್ರಮ ಕೈಗೊಳ್ಳೋದಾಗಿ ಪೊಲೀಸರು ಹೇಳಿದ್ದು, ಒಟ್ಟಿನಲ್ಲಿ ಕೇವಲ ಚಿಕನ್ ಕಬಾಬ್ ಗೋಸ್ಕರ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಇದಕ್ಕೆ ಪಟ್ಟಣದಲ್ಲಿನ ಗಾಂಜಾ ಹಾವಳಿಯೇ ಮುಖ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಪೊಲೀಸರು ಗಾಂಜಾ ಹಾವಳಿಗೆ ಕಡಿವಾಣ ಹಾಕಬೇಕಿದೆ.
ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ; ಬಾಯ್ ಫ್ರೆಂಡ್ ಟಾರ್ಚರ್ಗೆ ಬೇಸತ್ತು ಸಾವೀಗೀಡಾದಳಾ ಯುವತಿ?
ಬೀದರ್, ಸೆ.19: ಬಾಯ್ ಫ್ರೆಂಡ್ ಟಾರ್ಚರ್ಗೆ ಬೆಸತ್ತು ಪಿಯುಸಿ (PUC) ಓದುತ್ತಿದ್ದ ಬಾಲಕಿಯೋರ್ವಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇನ್ನು ಬಾಲಕಿ ಆತ್ಮಹತ್ಯೆ ಮಾಡಿಕೊಂಡ ವಾರದ ಬಳಿಕ ವಿಚಾರ ಬೆಳೆಕಿಗೆ ಬಂದಿದೆ. ಈ ಕುರಿತಾಗಿ ಆತ್ಮಹತ್ಯೆಗೆ ಪ್ರಚೋಧನೆ ಕೊಟ್ಟ ಯುವಕನ ಮೇಲೆ ದೂರು ಕೊಡಲು ಹೋದರೆ, ಪೊಲೀಸರು ದೂರು ತೆಗೆದುಕೊಳ್ಳುತ್ತಿಲ್ಲವಂತೆ. ಹೌದು, 2023 ಅಗಷ್ಟ್ 17 ರಂದು ಬೀದರ್ ಜಿಲ್ಲೆಯ ಚಿಟಗುಪ್ಪಾ ಬೆಮಳಖೇಡ ಗ್ರಾಮದ ತನ್ನ ಮನೆಯಲ್ಲಿಯೇ ಪ್ರಿಯಾಂಕಾ(17) ಆತ್ಮಹತ್ಯೆಗೆ ಶರನಾಗಿದ್ದಳು.
ಹೀಗೆ ತನ್ನ ಮಗಳ ಪೋಟೋ ಹಿಡಿದುಕೊಂಡು ಅಳುತ್ತಾ ಕುಳಿತಿರುವ ಈ ತಾಯಿಯ ಹೆಸರು ಗಂಗಮ್ಮ, ತನ್ನ ಮಗಳ ಸಾವಿನ ನ್ಯಾಯಕ್ಕಾಗಿ ಎಸ್ಪಿ ಕಛೇರಿಗೆ ಓಡಾಡುತ್ತಿದ್ದಾಳೆ. ಇನ್ನು ತನ್ನ ಮಗಳ ಸಾವಿಗೆ ಇದೆ ಗ್ರಾಮದ ಅಂಬ್ರೇಷ್ ಎಂಬಾತ ಕಾರಣವಂತೆ. ಹೌದು, ಕಳೆದೊಂದು ವರ್ಷದಿಂದ ಇವರಿಬ್ಬರು ಪ್ರೀತಿಸುತ್ತಿದ್ದರು, ಅದೇ ಪ್ರೀತಿಯ ಸಲುಗೆಯಿಂದ ಇಬ್ಬರು ಪೋಟೋ ತೆಗೆಸಿಕೊಂಡಿದ್ದಾರೆ. ಕೆಲವು ವಿಡಿಯೋಗಳನ್ನು ಕೂಡ ಆ ಯುವಕ ಮಾಡಿಕೊಂಡು ತನ್ನ ಮೊಬೈಲ್ನಲ್ಲಿ ಇಟ್ಟುಕೊಂಡಿದ್ದಾರೆ.
ನಂತರ ಪ್ರೀಯಾಂಕಾಳಿಗೆ ಹಣ ಕೊಂಡುವಂತೆ ಹೆದರಿಸಲು ಶುರುಮಾಡಿದ್ದಾನೆ. ಹಣ ಕೊಡದೆ ಹೋದರೆ, ನಾನು ನೀನು ಮಾತನಾಡಿರುವ ಆಡಿಯೋ, ವಿಡಿಯೋ ಹಾಗೂ ಪೋಟೋಗಳನ್ನು ವಾಟ್ಸಪ್, ಪೇಸ್ ಬುಕ್ನಲ್ಲಿ ಅಫ್ ಲೋಡ್ ಮಾಡಿ ನಿನ್ನ ಮಾನ ಕಳೆಯುವೆ ಎಂದು ಹೆದರಿಸಲು ಶುರು ಮಾಡಿದ್ದಾನೆ. ಅವನ ಕಿರುಕುಳಕ್ಕೆ ಹೆದರಿ ಸರಿ ಸುಮಾರು 30 ಸಾವಿರದ ವರೆಗೆ ಹಣವನ್ನು ಪೋನ್ ಪೇ ಮಾಡಿದ್ದಾಳೆ. ಕೇಳಿದಾಗೊಮ್ಮ ಹಣ ಕೊಡಲು ಶುರುಮಾಡಿದ ಪ್ರಿಯಾಂಕಾಗೆ ಹಣ ಕೊಡುತ್ತಾಳೆಂದು ತಿಳಿದ ಅಂಬ್ರೇಷ್ ಪದೇ ಪದೇ ಹಣ ಕೊಡುವಂತೆ ಪೀಡಿಸಲು ಶುರುಮಾಡಿದ್ದಾನೆ.
ಇದಕ್ಕೆ ಬೇಸತ್ತು ಹಣ ಕೊಡಲಾಗದೇ ಹೋದರೆ, ಎಲ್ಲಿ ನಾನು ಅವನ ಜೊತೆಗೆ ಮಾತನಾಡಿದ ಆಡಿಯೋ ಹಾಗೂ ಜೊತೆಗೆ ಇದ್ದ ಪೋಟೋವನ್ನು ಫೇಸ್ಬುಕ್ಗೆ ಅಪ್ಲೋಡ್ ಮಾಡುತ್ತಾನೊ ಎಂದು ತಿಳಿದು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನನ್ನ ಮಗಳಿಗೆ ನ್ಯಾಯ ಬೇಕು, ನ್ಯಾಯಕೊಡಿಸಿ ಎಂದು ತಾಯಿ ಗಂಗಮ್ಮ ಪೊಲೀಸರಿಗೆ ಮನವಿ ಮಾಡುತ್ತಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡಿರುವ ಪ್ರಿಯಾಂಕಾ ಏಕೈಕ ಪುತ್ರಿಯಾಗಿದ್ದು, ಮನೆಯಲ್ಲಿ ಚನ್ನಾಗಿಯೇ ಬೆಳೆಸಿದ್ದರು. ಆದರೆ, ಇದೆ ಊರಿನ ಅಂಬ್ರೇಷ್ ಅನ್ನೋ ಯುವಕ ತಂಗಿ ಎನ್ನುತ್ತಲೇ ಪ್ರೀಯಾಂಕಾ ಜೊತೆಗೆ ಮಾತನಾಡುತ್ತಿದ್ದ. ಆದರೆ, ಪೋನ್ನಲ್ಲಿ ಮಾತ್ರ ಇಬ್ಬರು ಪ್ರೇಮಿಗಳ ಹಾಗೇ ಮಾತನಾಡುತ್ತಿದ್ದರು. ಇದ್ಯಾವ ವಿಚಾರವೂ ಕೂಡ ಮನೆಯವರಿಗೆ ಗೊತ್ತಾಗಿರಲಿಲ್ಲ. ಆದರೆ, ಅಂಬ್ರೇಷ್ ಮಾತ್ರ ಈಕೆಯ ಜೊತೆಗೆ ಇರುವ ಪೋಟೋ ಹಾಗೂ ಆಡಿಯೋವನ್ನ ಇಟ್ಟುಕೊಂಡು ಹಣಕ್ಕಾಗಿ ಬ್ಲ್ಯಾಕ್ ಮೇಲ್ ಮಾಡಲು ಶುರುಮಾಡಿದ್ದ. ಇದರಿಂದ ಪ್ರಿಯಾಂಕಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಆತ್ಮಹತ್ಯೆ ಮಾಡಿಕೊಂಡು ವಾರದ ಬಳಿಕೆ ಆಕೆಯ ಪೋನ್ ಚೇಕ್ ಮಾಡಿದಾಗ ಪ್ರಿಯಾಂಕಾ ಅಂಬ್ರೇಷಗೆ ಹಣ ಹಾಕಿರುವ ಮಾಹಿತಿ ಸಿಕ್ಕಿದೆ. ಜೊತೆಗೆ ಕೆಲವು ಪೋಟೋಗಳು ಕೂಡ ಸಿಕ್ಕಿದ್ದು, ಇನ್ನೂ ಆತನ ಜೊತೆಗೆ ಮಾತನಾಡಿರುವ ಆಡೀಯೋ ಕೂಡ ಸಿಕ್ಕದೆ. ಹೀಗಾಗಿ ವಾರದ ಬಳಿಕ ಮಗಳ ಸಾವಿಗೆ ಕಾರಣರಾದ ಅಂಬ್ರೇಷ್ ಮೇಲೆ ಕೇಸ್ ಕೊಡಲು ಹೋದರೆ ಪೊಲೀಸರು ಕೇಸ್ ತೆಗೆದುಕೊಳ್ಳುತ್ತಿಲ್ಲ. ಆತ್ಮಹತ್ಯೆ ಮಾಡಿಕೊಂಡ ದಿನ ನಮಗೆ ಕಂಪ್ಲೇಟ್ ಕೊಡಬಹುದಿತ್ತು. ಆದರೆ, ವಾರದ ಬಳಿಕ ನಾವು ಕಂಪ್ಲೇಟ್ ತೆಗೆದಕೊಳ್ಳುವುದಿಲ್ಲ ಎಂದು ಪೊಲೀಸರು ಹೇಳುತ್ತಿರುವುದು ಈ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
ಒಬ್ಬ ಯುವಕನ ಹಣದ ದಾಹಕ್ಕೆ ಬದುಕಿ ಬಾಳಬೇಕಾಗಿದ್ದ ಯುವತಿಯೊಬ್ಬಳು ಸಾವೀಗೀಡಾಗಿದ್ದಾಳೆ. ಆದರೆ, ಈ ಕುಟುಂಬಕ್ಕೆ ನ್ಯಾಯ ಕೊಡಿಸಬೇಕಾದ ಪೊಲೀಸರು ನಿರ್ಲಕ್ಷ್ಯ ವಹಿಸುತ್ತಿದ್ದು ಹೆಣ್ಣು ಹೆತ್ತವರ ದುಃಖ ಹೆಚ್ಚಿಸುವಂತೆ ಮಾಡಿದೆ. ಇದ್ದಕ್ಕಿದ್ದಂತೆ ಅನುಮಾನಾಸ್ಪದ ರೀತಿಯಲ್ಲಿ ಸಾವಿಗೀಡಾಗಿದ್ದು, ಈ ಸಾವಿನ ಮರ್ಮವನ್ನು ಪೊಲೀಸರು ತನಿಖೆ ಮೂಲಕ ಬಯಲಿಗೆ ತರಬೇಕಿದೆ.