ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಡಗು ಅರೆ ಭಾಷೆ ಗೌಡ ಸಂಘದಿಂದ ಪೊನ್ನನ್ನ ನೇತೃತ್ವದಲ್ಲಿ ಕಂದಾಯ ಸಚಿವರ ಭೇಟಿ

Twitter
Facebook
LinkedIn
WhatsApp
ಕೊಡಗು ಅರೆ ಭಾಷೆ ಗೌಡ ಸಂಘದಿಂದ ಪೊನ್ನನ್ನ ನೇತೃತ್ವದಲ್ಲಿ ಕಂದಾಯ ಸಚಿವರ ಭೇಟಿ

ಮಡಿಕೇರಿ:ಕೊಡಗು ಅರೆಭಾಷೆ ಗೌಡ ಸಂಘದ ಪ್ರಮುಖರು ಇಂದು ವಿರಾಜಪೇಟೆ ಶಾಸಕ ಹಾಗು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ರವರನ್ನು ಬೆಂಗಳೂರಿನ ಕಚೇರಿಯಲ್ಲಿ ಭೇಟಿ

ಗೌಡ ಸಂಘದ ಹಲವು ಬೇಡಿಕೆಗಳಿಗೆ ಸ್ಪಂದಿಸಿದ ಸಚಿವರು ಹಾಗೂ ಶಾಸಕರು.

ಈ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಕೆ ಪಿ ಸಿ ಸಿ ಸದಸ್ಯರಾದ ಬೇಕಲ್ ರಮಾನಾಥ್ ಕರಿಕೆ, ಗೌಡ ಒಕ್ಕೂಟ ಅಧ್ಯಕ್ಷರು ಸೂರ್ತಲೆ ಸೋಮಣ್ಣ, ಸಂಘದ ಅಧ್ಯಕ್ಷರು ಪೇರಿಯನ ಆನಂದ,

ಪ್ರಮುಖರಾದ ಪೈಕೇರ ಮನೋಹರ್, ಕುಯ್ಯಮುಡಿ ಮನೋಜ್, ಕೆದಂಬಾಡಿ ಋಷಿ ಚೆಟ್ಟಿಮಾನಿ, ತೇನನ ರಾಜೇಶ್, ಹುದೇರಿ ರಾಜೇಂದ್ರ, ಕೊಲ್ಯದ ಗಿರೀಶ್, ಸುರೇಶ್, ಭೀಷ್ಮ ಮಾದಪ್ಪ, ಮೋಹನ್ ದಾಸ್, ಅಂಬೇಕಲ್ ನವೀನ್, ದಂಬೆಕೋಡಿ ಆನಂದ,
ನಂಗಾರ್ ನಾಣಯ್ಯ , ಪಾಣತ್ತಲೆ ಪಳಂಗಪ್ಪ, ಕೊಡಗನ ತೀರ್ಥ, ದೇವಂಗೋಡಿ ಹರ್ಷ, ಸೂರಜ್ ಹೊಸೂರು, ಅಮೆ ಸೀತಾರಾಮ್, ರವಿರಾಜ್ ಹೊಸೂರು, ಗಣಪಯ್ಯ ಗುಂಡಿಮಜಲು, ಸಂದೀಪ್ ಮುತ್ತಪ್ಪ ಮತ್ತಿತ್ತರು ಉಪಸ್ಥಿತರಿದ್ದರು.

ಆಕ್ಷೇಪಾರ್ಹ ಟ್ವಿಟ್ಟರ್ ಪೋಸ್ಟ್ ತೆಗೆಯಲು ಕೇಂದ್ರ ಸೂಚನೆ; ಎಕ್ಸ್ ಕಾರ್ಪ್ ಮೇಲ್ಮನವಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ

ಬೆಂಗಳೂರು: ಆಕ್ಷೇಪಾರ್ಹ ಟ್ವಿಟ್ಟರ್ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರದ ಸೂಚನೆಯ ಹಿನ್ನೆಲೆಯಲ್ಲಿ ಆ ಸೂಚನೆಯನ್ನು ಪ್ರಶ್ನಿಸಿದ್ದ ಎಕ್ಸ್​ ಕಾರ್ಪ್(ಟ್ವಿಟ್ಟರ್) ಮೇಲ್ಮನವಿ ವಿಚಾರಣೆ ಹೈಕೋರ್ಟ್​ನಲ್ಲಿ ಇಂದು ನಡೆದಿದೆ. ಆಕ್ಷೇಪಾರ್ಹ ಪೋಸ್ಟ್​ ತೆಗೆಯುವ ಆದೇಶದ ಮರುಪರಿಶೀಲನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿಲ್ಲ. ಈ ಬಗ್ಗೆ ಹೈಕೋರ್ಟ್‌ಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಹೇಳಿಕೆ ನೀಡಿದ್ದು, ಆದೇಶ ಮರುಪರಿಶೀಲಿಸಲು ಯಾವುದೇ ಕಾರಣಗಳಿಲ್ಲವೆಂದು ಹೇಳಿದೆ. ಎಕ್ಸ್​ ಕಾರ್ಪ್(ಟ್ವಿಟ್ಟರ್) ಮೇಲ್ಮನವಿ ವಿಚಾರಣೆಗೆ ಹೈಕೋರ್ಟ್​ ಅಂಗೀಕರಿಸಿದ್ದು, ವಿಭಾಗೀಯ ಪೀಠದಿಂದ ಮುಂದಿನ ವಿಚಾರಣೆ ನವೆಂಬರ್‌ 9ಕ್ಕೆ ನಡೆಯಲಿದೆ.

ಆಕ್ಷೇಪಾರ್ಹ ಟ್ವಿಟ್ಟರ್ ಪೋಸ್ಟ್ ತೆಗೆಯಲು ಕೇಂದ್ರ ಸರ್ಕಾರ ಸೂಚಿಸಿತ್ತು. ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯಡಿ ಕ್ರಮ ಕೈಗೊಳ್ಳುವುದಾಗಿ ಟ್ವಿಟ್ಟರ್​ ಸಂಸ್ಥೆಗೆ ಎಚ್ಚರಿಕೆ ನೀಡಿತ್ತು. ಕೇಂದ್ರ ಸರ್ಕಾರದ ನೋಟಿಸ್ ಪ್ರಶ್ನಿಸಿದ್ದ ಎಕ್ಸ್ ಕಾರ್ಪ್(ಟ್ವಿಟರ್) ಸಂಸ್ಥೆಯ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಬಳಿಕ, ವಿಭಾಗೀಯ ಪೀಠಕ್ಕೆ ಎಕ್ಸ್ ಕಾರ್ಪ್ ಸಂಸ್ಥೆ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್​ ನ್ಯಾಯಮೂರ್ತಿ ಜಿ. ನರೇಂದರ್ ಮತ್ತು ನ್ಯಾಯಮೂರ್ತಿ ವಿಜಯಕುಮಾರ್ ಎ. ಪಾಟೀಲ್ ಅವರ ವಿಭಾಗೀಯ ಪೀಠವು ಬಳಕೆದಾರರ ಖಾತೆಗಳನ್ನು ನಿರ್ಬಂಧಿಸಲು ಎಕ್ಸ್ ಕಾರ್ಪ್ (ಹಿಂದೆ ಟ್ವಿಟರ್) ಗೆ ನಿರ್ದೇಶಿಸುವ ಮೂಲಕ ರವಾನಿಸಲಾದ ನಿರ್ಬಂಧಿಸುವ ಆದೇಶಗಳನ್ನು ಮರುಪರಿಶೀಲಿಸಬೇಕೆ ಎಂದು ಸೆಪ್ಟೆಂಬರ್ 20ರಂದು ಕೇಂದ್ರವನ್ನು ಮೌಖಿಕವಾಗಿ ಕೇಳಿತ್ತು. ಎಕ್ಸ್​​ ಕಾರ್ಪ್​​ನಿಂದ (ಟ್ವಿಟರ್) ಆಕ್ಷೇಪಾರ್ಹ ಟ್ವೀಟ್​ಗಳನ್ನು ತೆಗೆದಿರುವುದಕ್ಕೆ ಸಂಬಂಧಿಸಿದಂತೆ ಸಕಾರಣ ನೀಡಿಲ್ಲ. ಈ ಸಂಬಂಧ ಪರಿಶೀಲನೆ ನಡೆಸಬೇಕು ಎಂಬ ಅರ್ಜಿದಾರರ ಮನವಿ ಸಂಬಂಧ ನಿಲುವು ತಿಳಿಸುವಂತೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿತ್ತು.

ಕೆಲವು ವೈಯಕ್ತಿಕ ಖಾತೆಗಳನ್ನು ರದ್ದು ಮಾಡಿದ್ದ ಸಚಿವಾಲಯದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪು ಕುರಿತು ಎಕ್ಸ್ ಕಾರ್ಪ್ ದ್ವಿಸದಸ್ಯ ಪೀಠದಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಈ ವಿಚಾರಣೆ ವೇಳೆ ಅರ್ಜಿದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ಸಜ್ಜನ್​ ಪೂವಯ್ಯ, ಕೆಲವು ಟ್ವಿಟ್ಟರ್ ಖಾತೆಗಳಿಗೆ ನಿರ್ಬಂಧ ಹೇರಿರುವ ಕುರಿತು ಕಾರಣ ನೀಡಬೇಕು ಎಂಬ ನಿಯಮವಿದ್ದರೂ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಸೂಕ್ತ ಕಾರಣಗಳನ್ನು ನೀಡಿಲ್ಲ. ಹೀಗಾಗಿ, ಖಾತೆಗಳನ್ನು ಸ್ಥಗಿತಗೊಳಿಸಿರುವ ಆದೇಶವನ್ನು ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚನೆ ನೀಡಬೇಕು ಎಂದು ಕೋರಿದ್ದರು.

ಈ ಹಿಂದೆ ಕೆಲವು ವೈಯಕ್ತಿಕ ಟ್ವಿಟ್ಟರ್ ಖಾತೆಗಳನ್ನು ನಿರ್ಬಂಧಿಸಿದ್ದ ಕೇಂದ್ರ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ (ಟ್ವಿಟ್ಟರ್) ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದ ಏಕಸದಸ್ಯ ಪೀಠ ಅರ್ಜಿ ವಜಾಗೊಳಿಸಿ 50 ಲಕ್ಷ ರೂ.ಗಳ ದಂಡ ವಿಧಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಎಕ್ಸ್ ಕಾರ್ಪ್ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿಯ ಕುರಿತು ಈ ಹಿಂದೆ ವಿಚಾರಣೆ ನಡೆಸಿದ ದ್ವಿಸದಸ್ಯ ಪೀಠ, 50 ಲಕ್ಷ ರೂ.ಗಳ ದಂಡದ ಆದೇಶಕ್ಕೆ ತಡೆ ನೀಡಿತ್ತು. ಎಕ್ಸ್​ ಕಾರ್ಪ್ ತನ್ನ ನಂಬಿಕೆಯನ್ನು ಉಳಿಸಿಕೊಳ್ಳುವುದಕ್ಕಾಗಿ ದಂಡದ ಒಟ್ಟು ಮೊತ್ತದಲ್ಲಿ ಶೇ. 50ರಷ್ಟು ಅಂದರೆ 25 ಲಕ್ಷ ರೂ. ಹಣವನ್ನು 1 ವಾರದೊಳಗೆ ಪಾವತಿಸಲು ನಿರ್ದೇಶನ ನೀಡಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ