ಕೋಲಾರ (ಡಿ.08): ಹೆತ್ತ ತಾಯಿಯೇ ತನ್ನ ಇಬ್ಬರು ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿದ ಹೃದಯ ವಿದ್ರಾವಕ ಘಟನೆ ಮುಳಬಾಗಿಲಿನ ಅಂಜನಾದ್ರಿ ಬೆಟ್ಟದ ತಪ್ಪಲಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಆಂಧ್ರ ಪ್ರದೇಶದ ರಾಮಸಮುದ್ರದ ನಿವಾಸಿ ಜ್ಯೋತಿ ಎಂಬುವರು ತನ್ನ ಮಕ್ಕಳಾದ ಉದಯಶ್ರೀ (8) ಹಾಗೂ ಅಕ್ಷರ(6) ಮಕ್ಕಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ನಂತರ ತಾನೂ ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆಯಲ್ಲಿ ಆರು ವರ್ಷದ ಹೆಣ್ಣು ಮಗು ಮೃತಪಟ್ಟಿದೆ.
ಮತ್ತೊಂದು ಮಗು ಹಾಗೂ ತಾಯಿ ಸುಟ್ಟಗಾಯಗಳಿಂದ ಸಾವು, ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದು, ಮುಳಬಾಗಿಲು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆತ್ತಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಸಾಗಿಸಲಾಗಿದೆ.
ಗಂಡ ಬಿಟ್ಟು ಹೋಗಿರೋದಕ್ಕೆ ಮನನೊಂದು ಜ್ಯೋತಿ ಗಂಡನಿಲ್ಲದೇ ಜೀವನ ಸಾಗಿಸೋದಕ್ಕೆ ಕಷ್ಟವಾಗುತ್ತೆ ಎಂದು ನಿರ್ಧರಿಸಿ, ಮೊದಲು ಮಕ್ಕಳನ್ನು ಸಾಯಿಸಿ ನಂತರ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಇಬ್ಬರು ಮಕ್ಕಳೊಂದಿಗೆ ಇಲ್ಲಿಗೆ ಆಗಮಿಸಿದ್ದಳು ಎನ್ನಲಾಗಿದೆ. ಸ್ಥಳಕ್ಕೆ ಮುಳಬಾಗಿಲು ನಗರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
ಅತಿಯಾದ ಮೊಬೈಲ್ ಬಳಕೆಯಿಂದ ಮಕ್ಕಳಲ್ಲಿ ಮತ್ತು ಯುವಜನರಲ್ಲಿ ಪರಿಣಾಮ ಬೀರುತ್ತಿದೆ ಹಲವು ಸಮಸ್ಯೆಗಳು..!