ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

Twitter
Facebook
LinkedIn
WhatsApp
KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯಕ್ಕಿಂದು ವೃಶ್ಚಿಕ ಲಗ್ನದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಾಗಿನ ಅರ್ಪಿಸಿದ್ದಾರೆ. ಇದಕ್ಕೂ ಮುನ್ನ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆ ತಾಲ್ಲೂಕಿನ ಬಿದಿರಳ್ಳಿಯಲ್ಲಿರುವ ಕಬಿನಿ ಜಲಾಶಕ್ಕೂ ಬಾಗಿನ ಕೊಟ್ಟಿದ್ದಾರೆ.

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

8 ತಿಂಗಳ ಅವಧಿಯಲ್ಲೇ ಬೊಮ್ಮಾಯಿ ಅವರು 2ನೇ ಬಾರಿಗೆ ಬಾಗಿನ ಅರ್ಪಿಸಿದ್ದಾರೆ. ಕೆಆರ್‌ಎಸ್ ಜಲಾಶಯ ಸಾಮಾನ್ಯವಾಗಿ ಆಗಸ್ಟ್ ನಲ್ಲಿ ಭರ್ತಿಯಾಗುತ್ತಿದ್ದರಿಂದ ಒಂದು ವರ್ಷ ಕಾಯಬೇಕಿತ್ತು. ಆದರೆ ಈ ಬಾರಿ ಮೂರು ತಿಂಗಳ ಮುಂಚೆಯೇ ಭರ್ತಿಯಾಗಿದ್ದು, 8 ತಿಂಗಳಲ್ಲೇ 2 ಬಾರಿ ಬಾಗಿನ ಅರ್ಪಿಸುವ ಅವಕಾಶ ಒದಗಿಬಂದಿದೆ. 

ಸಿಎಂ ಆಗಮನದ ಹಿನ್ನೆಲೆಯಲ್ಲಿ ಹೂವು, ತಳಿರು ತೋರಣಗಳಿಂದ ಅಲಂಕರಿಸಿ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯದ ಹೊರಾಂಗಣವನ್ನು ಮದುವಣಗಿತ್ತಿಯಂತೆ ಸಿಂಗರಿಸಲಾಗಿತ್ತು. ವೃಶ್ಚಿಕ ಶುಭಲಗ್ನದಲ್ಲಿ ಸೀರೆ, ಬೆಲ್ಲ, ಅಕ್ಕಿ, ನವ ಧಾನ್ಯಗಳನ್ನು ಸಮರ್ಪಿಸುವ ಮೂಲಕ ಸಿಎಂ ಬಾಗಿನಕೊಟ್ಟರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಎಸ್.ಟಿ.ಸೋಮಶೇಖರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

ಈ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 6 ಬಾರಿ ಬಾಗಿನ ಬಿಟ್ಟು ಅತಿ ಹೆಚ್ಚು ಬಾರಿ ಬಾಗಿನ ಅರ್ಪಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಅತ್ಯಂತ ಕಡಿಮೆ ಅವಧಿಯಲ್ಲೇ 2 ಬಾರಿ ಬಾಗಿನ ಅರ್ಪಿಸಿದ ಹೆಗ್ಗಳಿಕೆಗೆ ಸಿಎಂ ಬೊಮ್ಮಾಯಿ ಪಾತ್ರರಾಗಿದ್ದಾರೆ.

KRS, ಕಬಿನಿ ಜಲಾಶಯಕ್ಕೆ ಬಾಗಿನ – ದಾಖಲೆ ಬರೆದ ಸಿಎಂ ಬೊಮ್ಮಾಯಿ

124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ ತುಂಬಿರುವುದರಿಂದ ಹಳೆ ಮೈಸೂರು ಭಾಗದ ಜನರಲ್ಲಿ ಸಂತಸ ಮನೆ ಮಾಡಿದೆ. ಹಾಗೆಯೇ 2,284 ಗರಿಷ್ಠಮಟ್ಟ ಹೊಂದಿರುವ ಕಬಿನಿ ಜಲಾಶಯ ತುಂಬಿರುವುದೂ ಜನರಲ್ಲಿ ಸಂತಹ ಹೆಚ್ಚಿಸಿದೆ. ಅದರೆ ಜಲಾನಯನ ಪ್ರದೇಶದಲ್ಲಿರುವ ಜನರಿಗೆ ಪ್ರವಾಹದ ಭೀತಿ ಉಂಟುಮಾಡಿದೆ. 

ಕೆಆರ್‌ಎಸ್ ಜಲಾಶಯ ಕಳೆದ ವರ್ಷ ಅಕ್ಟೋಬರ್ ತಿಂಗಳ ಕೊನೆಯ ವಾರದಲ್ಲಿ ಭರ್ತಿಯಾಗಿತ್ತು. ಆದರೆ ಈ ಬಾರಿ ಜುಲೈ ತಿಂಗಳ 2ನೇ ವಾರದಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್‌ನ ಇತಿಹಾಸದಲ್ಲೇ ಜುಲೈ ತಿಂಗಳಲ್ಲಿ 6ನೇ ಬಾರಿಗೆ ಭರ್ತಿಯಾಗಿದೆ. ಈ ಹಿಂದೆ 1980, 2006, 2007, 2009, 2018ರಲ್ಲಿ ಭರ್ತಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist