ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುಂದಾಪುರ: ಸಮುದ್ರಪಾಲಾಗಿದ್ದ ಯುವಕನ ಮೃತದೇಹ ಪತ್ತೆ

Twitter
Facebook
LinkedIn
WhatsApp
48 2

ಕುಂದಾಪುರ: ತ್ರಾಸಿ ಬೀಚ್‌ನಲ್ಲಿ ಮಂಗಳವಾರ ಸಮುದ್ರಕ್ಕೆ ಬೆನ್ನು ಹಾಕಿ ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಸಮುದ್ರದ ಅಲೆ ಅಪ್ಪಳಿಸಿ, ಕಾಲು ಜಾರಿ ಸಮುದ್ರಕ್ಕೆ ಬಿದ್ದು, ನಾಪತ್ತೆಯಾಗಿದ್ದ ಗದಗ ಮೂಲದ ಫೀರ್‌ ಸಾಬ್‌ ನದಾಪ್‌ (21) ಅವರ ಮೃತದೇಹ ಗುಜ್ಜಾಡಿ ಗ್ರಾಮದ ಕಂಚಗೋಡು ಸಮೀಪದ ಸನ್ಯಾಸಿಬಲೆ ಎಂಬಲ್ಲಿ ಬುಧವಾರ ಪತ್ತೆಯಾಗಿದೆ.

ಫೀರ್‌ ಸಾಬ್‌ ಅವರ ಪತ್ತೆಗಾಗಿ ಮಂಗಳವಾರ ಮಧ್ಯಾಹ್ನದಿಂದ ರಾತ್ರಿಯವರೆಗೂ ಗಂಗೊಳ್ಳಿ ಪೊಲೀಸರು, ಅಗ್ನಿಶಾಮಕ ದಳ, ಆ್ಯಂಬುಲೆನ್ಸ್‌ ಕಾರ್ಯಕರ್ತರು, ಸ್ಥಳೀಯರು ಹುಡುಕಾಟ ನಡೆಸಿದರೂ, ಯಾವುದೇ ಸುಳಿವು ಸಿಕ್ಕಿರಲಿಲ್ಲ. ಬುಧವಾರ ಬೆಳಗ್ಗೆ ಘಟನೆ ನಡೆದ ಸ್ಥಳದಿಂದ ಸುಮಾರು 2-3 ಕಿ.ಮೀ. ದೂರದ ಸನ್ಯಾಸಿಬಲೆ ಎಂಬಲ್ಲಿನ ದಡದಲ್ಲಿ ಮೃತದೇಹ ಸಿಕ್ಕಿದೆ. ಗಂಗೊಳ್ಳಿ ಎಸ್‌ಐ ಹರೀಶ್‌ ಹಾಗೂ ಸಿಬಂದಿ ಸ್ಥಳಕ್ಕೆ ಭೇಟಿ ನೀಡಿದರು.

ಫೀರ್‌ ಸಾಬ್‌ 2 ತಿಂಗಳ ಹಿಂದೆ ಗಾರೆ ಕೆಲಸಕ್ಕಾಗಿ ಉಡುಪಿಗೆ ಬಂದಿದ್ದು, ಕಾಪುವಿನ ಮುದರಂಗಡಿಯಲ್ಲಿ ನೆಲೆಸಿದ್ದರು. ಮಂಗಳವಾರ ಸಿರಾಜ್‌ ಅವರ ಲಾರಿಯಲ್ಲಿ ಸಿದ್ದಪ್ಪ ಜತೆ ಊರಿಗೆ ತೆರಳಿದ್ದರು. ದಾರಿ ಮಧ್ಯೆ ತ್ರಾಸಿ- ಮರವಂತೆ ಬೀಚ್‌ನಲ್ಲಿ ನಿಲ್ಲಿಸಿ, ಅಲ್ಲಿನ ಕಡಲನ್ನು ವೀಕ್ಷಣೆ ಮಾಡಿ, ಮೊಬೈಲ್‌ನಲ್ಲಿ ಸೆಲ್ಫಿ ತೆಗೆದುಕೊಳ್ಳುವಾಗ ಈ ಅವಘಡ ಸಂಭವಿಸಿದೆ.
ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ ಎಸ್‌ಐ ವಿನಯ ಎಂ ಕೊರ್ಲಹಳ್ಳಿ ಅವರು ಯುವಕನ ಮೃತದೇಹವನ್ನು ಅವರ ಹುಟ್ಟೂರು ಗದಗಕ್ಕೆ ಕೊಂಡೊಯ್ಯಲು ನೆರವಾದರು.

ನಿರ್ಲಕ್ಷ್ಯ ವಹಿಸಬೇಡಿ
ತ್ರಾಸಿ- ಮರವಂತೆಯಲ್ಲಿ ಕಡಲ ತೀರದ ಸಂರಕ್ಷಣೆಗಾಗಿ ಅಳವಡಿಸಲಾದ ಕಲ್ಲು ಬಂಡೆ (ತಡೆಗೋಡೆ) ಮಳೆಯಿಂದಾಗಿ ಪಾಚಿಗಟ್ಟಿ ಜಾರುತ್ತಿದೆ. ಈ ಕಲ್ಲು ಬಂಡೆಗೆ ಇಳಿಯುವುದು, ಅಲೆಗಳು ಅಪ್ಪಳಿಸುವ ತೀರದವರೆಗೂ ಹೋಗಿ, ಸೆಲ್ಫಿ ತೆಗೆಸಿಕೊಳ್ಳುವುದು ಸಹ ಅಪಾಯಕಾರಿಯಾಗಿದೆ. ಇದಲ್ಲದೆ ಇಲ್ಲಿನ ಕಡಲ ಕಿನಾರೆ ಹೆಚ್ಚು ಆಳವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬೀಚ್‌ಗೆ ಇಳಿದು ನೀರಲ್ಲಿ ಆಟವಾಡುವುದನ್ನು ನಿಷೇಧಿಸಿದ್ದರೂ, ಪ್ರವಾಸಿಗರು ನಿರ್ಲಕ್ಷé ವಹಿಸುತ್ತಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಪ್ರವಾಸಿಗರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಬೆಂಗಳೂರಿನಲ್ಲಿ ಹಾಡಹಗಲೇ ಹೋಟೆಲ್ ಕ್ಯಾಶಿಯರ್​ ಕೊಲೆ: ಹೌಸ್​ಕೀಪರ್​​ ಬಂಧನ​​

ಬೆಂಗಳೂರು, ಜುಲೈ 20: ಹಾಡಹಗಲೇ ಪ್ರತಿಷ್ಠಿತ ಹೋಟೆಲ್​​ ಕ್ಯಾಶಿಯರ್ (cashier)​​ ನನ್ನು ಕೊಲೆ ಮಾಡಿ ಪರಾರಿ ಆಗಿರುವಂತಹ ಘಟನೆ ಜೀವನ್ ಭೀಮಾ ನಗರದ ಮುರುಗೇಶ್ ಪಾಳ್ಯದ ಹೋಟೆಲ್​ನಲ್ಲಿ ನಡೆದಿದೆ. ಸಿಟಡೆಲ್​ ಹೋಟೆಲ್​ನ ಸುಭಾಷ್​ ಮೃತ ಕ್ಯಾಶಿಯರ್​​.​​ ಅದೇ ಹೋಟೆಲ್​ನಲ್ಲಿ ಹೌಸ್ ಕೀಪರ್ ಆಗಿರುವ​​ ಅಭಿಷೇಕ್​ ಎಂಬಾತ ಹತ್ಯೆ ಮಾಡಿದ್ದು, ಸದ್ಯ ಆರೋಪಿಯನ್ನು​ ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಹೋಟೆಲ್ ಸೋಫಾ ಮೇಲೆ ಸುಭಾಷ್ ಮಲಗಿದ್ದ ವೇಳೆ ದೊಣ್ಣೆಯಿಂದ ಹೊಡೆದು ಹೌಸ್ ಕೀಪರ್ ಅಭಿಷೇಕ್​ ಬರ್ಬರವಾಗಿ ಹಲ್ಲೆ ಮಾಡಿದ್ದಾನೆ. ಕುಡಿದ ನಶೆಯಲ್ಲಿ ಕೊಂದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist