ಸೋಮವಾರ, ಮೇ 20, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ವಿದ್ಯುತ್‌ ಸ್ಪರ್ಶಗೊಂಡು ಲೈನ್‌ಮೆನ್‌ ಸಾವು

Twitter
Facebook
LinkedIn
WhatsApp
ವಿದ್ಯುತ್‌ ಸ್ಪರ್ಶಗೊಂಡು ಲೈನ್‌ಮೆನ್‌ ಸಾವು

ಮಡಿಕೇರಿ: ವಿದ್ಯುತ್‌ ಲೈನ್‌ ದುರಸ್ತಿ ಪಡಿಸುತ್ತಿದ್ದ ಸಂದರ್ಭ ವಿದ್ಯುತ್‌ ಸ್ಪರ್ಶಗೊಂಡು ಲೈನ್‌ಮನ್‌ ಸಾವನ್ನಪ್ಪಿರುವ ಘಟನೆ ವಿರಾಜಪೇಟೆ ಆರ್ಜಿ ಗ್ರಾಮದಲ್ಲಿ ನಡೆದಿದೆ.

ಅನಿಲ್‌ ಮ್ಯಾನೇಜಸ್‌(45) ಅವರು ಮೃತರು. ಕಳೆದ 20 ವರ್ಷಗಳಿಂದ ಅನಿಲ್‌ ಅವರು ವಿರಾಜಪೇಟೆ ವಲಯದಲ್ಲಿ ಲೈನ್‌ಮನ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಹೆಗ್ಗಳ ವಿಭಾಗಕ್ಕೆ ಒಳಪಡುವ ಆರ್ಜಿ ಗ್ರಾಮದಲ್ಲಿ 11 ಕೆ.ವಿ. ವಿದ್ಯುತ್‌ ತಂತಿ ದುರಸ್ತಿಪಡಿಸುತ್ತಿದ್ದ ಸಂದರ್ಭ ಮತ್ತೂಂದು ಭಾಗದಲ್ಲಿ ತುಂಡಾಗಿ ಬಿದ್ದಿದ್ದ ತಂತಿಯಿಂದ ಭೂಮಿಗೆ ವಿದ್ಯುತ್‌ ಪ್ರವಹಿಸಿ ಅನಿಲ್‌ ಮ್ಯಾನೇಜಸ್‌ ಸ್ಥಳದಲ್ಲೇ ಮೃತಪಟ್ಟರು.

ಘಟನ ಸ್ಥಳಕ್ಕೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಸುರೇಶ್‌ ಪಿ.ಎಸ್‌., ಸಹಾಯಕ ಎಂಜಿನಿಯರ್‌ ಟೆಕ್ನಿಕಲ್‌ ವಿಭಾಗದ ಸೋಮೇಶ್‌, ಸಹಾಯಕ ಎಂಜಿನಿಯರ್‌ ಅಯ್ಯನ ಗೌಡ ಪಾಟೀಲ್‌ ಅವರು ಭೇಟಿ ನೀಡಿದರು. ದುರಂತದ ಬಗ್ಗೆ ಮಾಹಿತಿಯನ್ನು ಕಲೆ ಹಾಕಿದ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ವಿರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CM ನಿವಾಸ ಬಳಿ ಧರಣಿ ಯತ್ನ: ರೈತ ಮುಖಂಡರ ಬಂಧನ

ಮೈಸೂರು: ಕಬ್ಬಿಗೆ ಹೆಚ್ಚುವರಿ ದರ ನಿಗದಿ ಸಹಿತ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ಕಬ್ಬು ಬೆಳೆಗಾರರ ಸಂಘದಿಂದ ಗುರುವಾರ ಸಿಎಂ ಮನೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು.

ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಪೊಲೀಸರು ಶಾರದಾದೇವಿ ನಗರದ ಸಿದ್ದರಾಮಯ್ಯ ನಿವಾಸದ ರಸ್ತೆಯನ್ನು ಬ್ಯಾರಿಕೇಡ್‌ ಹಾಕಿ ಬಂದ್‌ ಮಾಡಿದ್ದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಸಿದ್ದರಾಮಯ್ಯ ನಿವಾಸದ ಬಳಿ ತೆರಳಲು ಮುಂದಾದ ನೂರಾರು ರೈತರನ್ನು ಪೊಲೀಸರು ತಡೆದರು. ಇದರಿಂದ ಕೆರಳಿದ ರೈತರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಲು ಮುಂದಾದರು. ಈ ವೇಳೆ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ ನಡೆಯಿತು. ಜಿಲ್ಲಾಡಳಿತ, ಪೊಲೀಸ್‌ ಆಯುಕ್ತರಿಗೆ ಒಂದು ವಾರ ಮೊದಲೇ ಧರಣಿ ನಡೆಸುವ ಮನವಿ ಸಲ್ಲಿಸಿದ್ದೆವು. ಆದರೂ ಪ್ರತಿಭಟನೆಗೆ ಅವಕಾಶ ನೀಡಿಲ್ಲ. ಯಾವ ಕಾರಣಕ್ಕೆ ನೀಡಿಲ್ಲ ಎಂದು ಸ್ಪಷ್ಟವಾಗಿ ಲಿಖೀತವಾಗಿ ತಿಳಿಸಬೇಕು ಎಂದು ರೈತರು ಪಟ್ಟು ಹಿಡಿದರು. ಆದರೆ ಪ್ರತಿಭಟನೆಗೂ ಅವಕಾಶ ಕೊಡದ ಪೊಲೀಸರು ಪ್ರತಿಭಟನಕಾರರನ್ನು ಬಂಧಿಸಿ ಕರೆದೊಯ್ದರು. ಬಳಿಕ ಸಿಎಆರ್‌ ಮೈದಾನದಲ್ಲಿ ಬಿಡುಗಡೆ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ