ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಜಿರೆಯಲ್ಲಿ ಬ್ಯಾಂಕ್ ಆಫ್ ಬರೋಡದ ನೂತನ ಮುಖ್ಯ ಶಾಖೆಯ ಉದ್ಘಾಟನೆ

Twitter
Facebook
LinkedIn
WhatsApp
WhatsApp Image 2023 03 16 at 10.35.28 AM

ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದ ಹೆಬ್ಬಾಗಿಲಿನಂತಿರುವ ಉಜಿರೆಯು ಸಸ್ಯಕಾಶಿಯಾಗಿಯೂ, ಜ್ಞಾನಕಾಶಿಯಾಗಿಯೂ ಬೆಳೆಯುತ್ತಿದ್ದು ಹಲವು ಸೃಜನಾತ್ಮಕ ಚಟುವಟಿಕೆಗಳ ಕೇಂದ್ರವಾಗಿದ್ದು ಸಾರ್ವಜನಿಕ ಸೇವೆಯಲ್ಲಿ ಆರೋಗ್ಯಕರ ಸ್ಪರ್ಧೆ ಇರಲಿ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾರೈಸಿದರು.ಅವರು ಬುಧವಾರ ಉಜಿರೆಯಲ್ಲಿ ಚಾರ್ಮಾಡಿ ರಸ್ತೆಯಲ್ಲಿರುವ “ಮಂಜೂಷಾ” ಕಟ್ಟಡದಲ್ಲಿ ಬ್ಯಾಂಕ್ ಅಫ್ ಬರೋಡ ನೂತನ ಮುಖ್ಯ ಶಾಖೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.

1966ರಲ್ಲಿ ತನ್ನ ತಂದೆ ಕೀರ್ತಿಶೇಷ ರತ್ನವರ್ಮ ಹೆಗ್ಗಡೆಯವರು ಉಜಿರೆಯಲ್ಲಿ ಪದವಿ ಕಾಲೇಜನ್ನು ಪ್ರಾರಂಭಿಸಿದ ಬಳಿಕ ಸಸ್ಯಕಾಶಿಯಾಗಿದ್ದ ಉಜಿರೆಯು ಹಲವು ಪ್ರಗತಿಪರ ಚಟುವಟಿಕೆಗಳ ಮೂಲಕ ದೇಶದ ಗಮನ ಸೆಳೆದಿದೆ. ಗ್ರಾಮಾಭಿವೃದ್ಧಿ ಯೋಜನೆ, ಕೆ.ಜಿ. ಯಿಂದ ಪಿ.ಜಿ. ವರೆಗಿನ ಶಿಕ್ಷಣ ಸಂಸ್ಥೆಗಳು ಉನ್ನತ ಸಾಧನೆ ಮಾಡಿವೆ. 1968ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಪಟ್ಟಾಭಿಷಿಕ್ತರಾದ ಬಳಿಕ ಅಂದಿನ ವಿಜಯಾಬ್ಯಾಂಕಿನ ಸ್ಥಾಪಕ ಅಧ್ಯಕ್ಷರಾಗಿದ್ದ ಸುಂದರರಾಮ ಶೆಟ್ಟಿ ಅವರು ತನ್ನನ್ನು ಬ್ಯಾಂಕಿನ ನಿರ್ದೇಶಕರಾಗಿ ಮಾಡಿ ಸೇವೆ ನೀಡುವ ಅವಕಾಶ ನೀಡಿರುವುದನ್ನು ಹೆಗ್ಗಡೆಯವರು ಸ್ಮರಿಸಿದರು. ಉಜಿರೆಯ ನಾಗರಿಕರು ಬ್ಯಾಂಕ್ ಆಫ್ ಬರೋಡದ ಸೇವೆಯ ಸದುಪಯೋಗ ಪಡೆದು ಉನ್ನತ ಪ್ರಗತಿ ಸಾಧಿಸುವಂತಾಗಲೆಂದು ಹೆಗ್ಗಡೆಯವರು ಹಾರೈಸಿದರು.ಬ್ಯಾಂಕ್ ಆಫ್ ಬರೋಡಾದ ಕಾರ್ಯನಿರ್ವಾಹಕ ನಿರ್ದೇಶಕ ಅಜಯ್ ಕೆ. ಖುರಾನಾ ಮಾತನಾಡಿ, ಅಧಿಕ ಲಾಭ ಮತ್ತು ಉತ್ತಮ ಸೇವೆಯೊಂದಿಗೆ ಪ್ರಗತಿ ಪಥದಲ್ಲಿ ಮುನ್ನಡೆಯುತ್ತಿರುವ ಬ್ಯಾಂಕ್ ಆಫ್ ಬರೋಡ ಉನ್ನತ ಸಾಧನೆಯಲ್ಲಿ ದೇಶದಲ್ಲಿ ಎರಡನೆ ಸ್ಥಾನದಲ್ಲಿದೆ ಎಂದರು. ಹೆಗ್ಗಡೆಯವರು ಸಾಹಿತ್ಯ, ಧರ್ಮ, ಕಲೆ, ಸಮಾಜಸೇವೆ, ಗ್ರಾಮಾಭಿವೃದ್ಧಿ ಮೊದಲಾದ ಕ್ಷೇತ್ರಗಳಲ್ಲಿ
ಸಲ್ಲಿಸಿದ ಅನುಪಮ ಸೇವೆಯನ್ನು ಅವರು ಶ್ಲಾಘಿಸಿ ಅಭಿನಂದಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು