ಶನಿವಾರ, ಫೆಬ್ರವರಿ 1, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲ : ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು!

Twitter
Facebook
LinkedIn
WhatsApp
ಉಳ್ಳಾಲ : ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಮೃತ್ಯು!

ಮಂಗಳೂರು, ಆಗಸ್ಟ್ 28: ಸ್ನೇಹಿತರ ಜೊತೆ ಸ್ನಾನಕ್ಕೆಂದು ಕೊಳಕ್ಕೆ ಇಳಿದಿದ್ದ ಕೇರಳ ಮೂಲದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಉಳ್ಳಾಲ ಬಳಿಯ ತಲಪಾಡಿ ಪ್ರದೇಶದಲ್ಲಿ ನಡೆದಿದೆ. ಹರಿಪ್ರಸಾದ್ ಆಚಾರ್ಯ (36) ಮೃತ ವ್ಯಕ್ತಿ.

ಕೇರಳದ ಹೊಸಂಗಡಿ ದುರ್ಗಿಪಳ್ಳದ ನಿವಾಸಿಯಾಗಿರುವ ಹರಿಪ್ರಸಾದ್ ಆಚಾರ್ಯ ಸ್ನೇಹಿತರ ಜೊತೆ ಸೇರಿಕೊಂಡು ಸ್ನೇನ ಮಾಡಲೆಂದು ತಲಪಾಡಿಯ ಖಾಸಗಿ ಸ್ಥಳದಲ್ಲಿರುವ ಕೊಳಕ್ಕೆ ಇಳಿದಿದ್ದಾರೆ. ಈ ವೇಳೆ ಕೆಸರಿನಲ್ಲಿ ಸಿಲುಕಿದ ಹರಿಪ್ರಸಾದ್ ಮೇಲೆ ಬರಲಾಗದೆ ಸಾವನ್ನಪ್ಪಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರ್ಯಾಚರಣೆ ನಡೆಸಿ ಹರಿಪ್ರಸಾದ್ ಮೃತದೇಹ ಹೊರತೆಗೆದಿದ್ದಾರೆ. ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆಎಸ್ಆರ್ ಟಿಸಿ ಬಸ್ -ಕಾರು ಮುಖಾಮುಖಿ ಡಿಕ್ಕಿ ; ಕಾರಿನಲ್ಲಿದ್ದ 6 ಮಂದಿ ಸಾವು:

ರಾಮನಗರ, ಆಗಸ್ಟ್​ 28: ಕೆಎಸ್ಆರ್ ಟಿಸಿ ಬಸ್ ಹಾಗೂ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ 6 ಮಂದಿ ಸಾವನಪ್ಪಿದ ಘಟನೆ ಕನಕಪುರ ತಾಲೂಕಿನ‌ ಕೆಮ್ಮಾಳೆ ಗೇಟ್ ಬಳಿ ನಡೆದಿದೆ.

Untitled 30

ಮಹದೇಶ್ವರ ಬೆಟ್ಟದಿಂದ ವಾಪಸ್​ ಬರುತ್ತಿದ್ದಾಗ ಅಪಘಾತ ಆಗಿದ್ದು, ಕಾರಿನಲ್ಲಿದ್ದ 6 ಮಂದಿ ಅಸುನೀಗಿದ್ದಾರೆ. ಸ್ಥಳಕ್ಕೆ ಸಾತನೂರು ಪೊಲೀಸರು ಭೇಟಿ ನೀಡಿದ್ದು, ಕ್ರೇನ್‌ ಸಹಾಯದಿಂದ ಗಾಯಾಳುಗಳ ರಕ್ಷಣೆ ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು