ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ: ನಂದಾವರದ ಮೂವರನ್ನು ಬಂಧಿಸಿ ಪಟ್ನಾಕ್ಕೆ ಕರೆದೊಯ್ದ ಎನ್‌ಐಎ ತಂಡ

Twitter
Facebook
LinkedIn
WhatsApp
index 4

ಬಂಟ್ವಾಳ :ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಗಲಭೆ ಸೃಷ್ಟಿಸಲು ಹಣಕಾಸಿ ನೆರವು ನೀಡಿದ್ದ ಆರೋಪದಡಿ ಬಂಟ್ವಾಳ ತಾಲೂಕಿನ ನಂದಾವರದ ಕೆಲವು ಮನೆಗಳಿಗೆ ದಾಳಿ ನಡೆಸಿದ್ದ ಎನ್‌ಐಎ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿದ್ದು, ಹೆಚ್ಚಿನ ಮಾಹಿತಿಗಾಗಿ ಬಿಹಾರದ ಪಟ್ನಾಕ್ಕೆ ಕರೆದುಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾ. 5ರಂದು ನಂದಾವರಕ್ಕೆ ದಾಳಿ ನಡೆಸಿದ ಎನ್‌ಐಎ ತಂಡ ಒಟ್ಟು ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿತ್ತು. ಬಳಿಕ ನಂದಾವರ ನಿವಾಸಿಗಳಾದ ಮಹಮ್ಮದ್‌ ಸಿನಾನ್‌, ಸರ್ಫರಾಜ್ ನವಾಜ್‌ ಹಾಗೂ ಇಕ್ಬಾಲ್‌ ಎಂಬವರನ್ನು ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನಾಲ್ವರ ಪೈಕಿ ಓರ್ವನನ್ನು ಬಂಧಿಸಿಲ್ಲ. ಇನ್ನು ಆರೋಪಿಗಳನ್ನು ಎನ್‌ಐಎ ತಂಡ ಕಸ್ಟಡಿಗೆ ಪಡೆದಿದ್ದು ಹೆಚ್ಚಿನ ವಿಚಾರಣೆಯ ದೃಷ್ಟಿಯಿಂದ ಪಟ್ನಾಕ್ಕೆ ಕರೆದೊಯ್ದಿರುವುದಾಗಿ ವರದಿಯಾಗಿದೆ.

ನಂದಾವರದ ದಾಳಿಯ ಪ್ರಕರಣದಲ್ಲಿ ಪ್ರಧಾನ ಆರೋಪಿ ಯಾರು ಎಂಬುವುದು ಇನ್ನು ತಿಳಿದುಬಂದಿಲ್ಲ. ಬಿಹಾರದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್‌ ಖಾತೆಯ ಹಣಕಾಸಿನ ವ್ಯವಹಾರದ ಕುರಿತು ಎನ್‌ಐಎ ತನಿಖೆ ನಡೆಸಿದ ಸಂದರ್ಭದಲ್ಲಿ ನಂದಾವರದ ವ್ಯಕ್ತಿಯಿಂದ ಹಣ ಜಮೆಯಾಗಿರುವ ವಿಚಾರ ಬೆಳಕಿಗೆ ಬಂದಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು