ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಂಟ್ವಾಳ : ರೈಲು ನಿಲ್ದಾಣದ ಹಳಿ ಮೇಲೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸರ್ ; ತಪ್ಪಿದ ಅನಾಹುತ!

Twitter
Facebook
LinkedIn
WhatsApp
ಬಂಟ್ವಾಳ : ರೈಲು ನಿಲ್ದಾಣದ ಹಳಿ ಮೇಲೆ ಉರುಳಿ ಬಿದ್ದ ಕಾಂಕ್ರೀಟ್ ಮಿಕ್ಸರ್ ; ತಪ್ಪಿದ ಅನಾಹುತ!

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೈಲ್ವೇ ನಿಲ್ದಾಣದಲ್ಲಿ ಕಾಮಗಾರಿ ನಿರ್ವಹಿಸುತ್ತಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವೊಂದು ಚಾಲಕನ ನಿಯಂತ್ರಣ ತಪ್ಪಿ ಪ್ಲಾಟ್ ಪಾರ್ಮ್ ನಿಂದ ಕೆಳಗೆ ರೈಲ್ವೇ ಹಳಿಗೆ ಉರುಳಿ ಬಿದ್ದ ಘಟನೆ ನಡೆದಿದೆ.

ಘಟನೆಯಿಂದ ಸದ್ಯ ಯಾವುದೇ ಪ್ರಾಣಾಪಾಯ ಅಗಿಲ್ಲ. ಅದೃಷ್ಟವಶಾತ್ ರೈಲು ಅ ಸಮಯದಲ್ಲಿ ಬರದೆ ಇದ್ದುದರಿಂದ ಯಾವುದೇ ಅವಘಡಗಳು ಸಂಭವಿಸಿಲ್ಲ.

ರೈಲು ಆಗಮಿಸುವ ಮೊದಲು ಯಂತ್ರವನ್ನು ತೆರವು ಗೊಳಿಸಬೇಕಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಗಜಲಕ್ಷ್ಮೀ ಕ್ರೇನ್ ನವರು ಕಾರ್ಯ ಪ್ರವೃತರಾಗಿ‌ ತೆರವು ಕಾರ್ಯ ನಿರ್ವಹಿಸಿದರು.

ಕೋಟ್ಯಾಂತರ ರೂ ವೆಚ್ಚದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ ಕಾರ್ಯಗಳಿಗಾಗಿ ಇತ್ತೀಚೆಗೆ ಶಿಲಾನ್ಯಾಸ ನಡೆದಿದ್ದು, ಇದೀಗ ಕಾಮಗಾರಿ ಆರಂಭವಾಗಿದೆ.

ರೈಲ್ವೆ ಪ್ಲಾಟ್ ಪಾರ್ಮ್ ನ ಸನಿಹದಲ್ಲಿ ಅಭಿವೃದ್ಧಿ ಕಾಮಗಾರಿಯನ್ನು ನಡೆಸುವ ಕಂಪೆನಿಯ ಕಾಂಕ್ರೀಟ್ ಮಿಕ್ಸರ್ ವಾಹನ ಚಾಲಕನ ನಿಯಂತ್ರಣ ಕಳೆದುಕೊಂಡ ಹಳಿಗೆ ಉರುಳಿ ಬಿದ್ದಿರುವುದು ಸಾರ್ವಜನಿಕ ವಲಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬಹಳಷ್ಟು ಎಚ್ಚರಿಕೆಯಿಂದ ಇಂತಹ ಕಾಮಗಾರಿ ನಡೆಯಬೇಕಾಗಿದೆ‌. ಯಾಕೆಂದರೆ ಇಂತಹ ಸೂಕ್ಷ್ಮ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ನುರಿತ ಹಾಗೂ ವಿಶೇಷ ಅನುಭವದ ಕಾರ್ಮಿಕರು ಕೆಲಸ ನಿರ್ವಹಿಸಬೇಕಾಗಿದೆ.

ಅಜಾಗರೂಕತೆಯಿಂದ ಕಾಮಗಾರಿ ನಡೆಸಿದ ಸಂದರ್ಭದಲ್ಲಿ ರೈಲು ಅಪಘಾತಕ್ಕೆ ಕಾರಣವಾಗಬಹುದು,ಮತ್ತು ಬಹು ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು ಎಂದು ಸ್ಥಳೀಯರು ಎಚ್ಚರಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು