ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ : ಕೌಟುಂಬಿಕ ವಿಚಾರದಲ್ಲಿ ದ್ವೇಷ, ಅಳಿಯನಿಂದ ಸ್ಕೂಟರ್‌ ಢಿಕ್ಕಿ ಮಾವ ಸಾವು!

Twitter
Facebook
LinkedIn
WhatsApp
ಬೆಳ್ತಂಗಡಿ : ಕೌಟುಂಬಿಕ ವಿಚಾರದಲ್ಲಿ ದ್ವೇಷ, ಅಳಿಯನಿಂದ ಸ್ಕೂಟರ್‌ ಢಿಕ್ಕಿ ಮಾವ ಸಾವು!

ಬೆಳ್ತಂಗಡಿ: ಕೌಟುಂಬಿಕ ವಿಚಾರದಲ್ಲಿ ದ್ವೇಷದಿಂದ ಸ್ವತಃ ಅಳಿಯನೇ ತನ್ನ ಮಾವನಿಗೆ ಸ್ಕೂಟರ್‌ ಢಿಕ್ಕಿ ಮಾಡಿ ಗಂಭೀರ ಗಾಯಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿದ್ದ ಮಾವ ಮಂಗಳವಾರ ಸಾವನ್ನಪ್ಪಿದ ಘಟನೆ ನಡೆದಿದೆ.

ಮಿತ್ತಬಾಗಿಲು ಗ್ರಾಮದ ಕಂಬಳದಡ್ಡ ನಿವಾಸಿ ಕೆ.ಎಚ್‌. ಇಬ್ರಾಹಿಂ (60) ಸಾವನ್ನಪ್ಪಿದವರು. ಅವರ ಅಳಿಯ ಮುಹಮ್ಮದ್‌ ಶಾಫಿ ಈ ಕೃತ್ಯ ನಡೆಸಿದ್ದ. ಮೃತ ಇಬ್ರಾಹಿಂ ಅವರ ಮಗಳು ಮತ್ತು ಅಳಿಯನ ಮಧ್ಯೆ ಕೌಟುಂಬಿಕ ಸಮಸ್ಯೆ ಇದ್ದು, ಆತ ಆಕೆಗೆ ಖರ್ಚಿಗೆ ಹಣವೂ ನೀಡುತ್ತಿರಲಿಲ್ಲ. ಚಿತ್ರಹಿಂಸೆ ನೀಡುತ್ತಿದ್ದ. ಅನೇಕ ಬಾರಿ ರಾಜಿ ಪಂಚಾತಿಕೆ, ಮಹಿಳಾ ಸಾಂತ್ವನ ಕೇಂದ್ರಕ್ಕೆ ದೂರು, ಪೊಲೀಸ್‌ ಠಾಣೆಯಲ್ಲಿ ಮಾತುಕತೆ ಎಲ್ಲವೂ ನಡೆದಿತ್ತಾದರೂ ಪ್ರಯೋಜನಕ್ಕೆ ಬಂದಿರಲಿಲ್ಲ ಎನ್ನಲಾಗಿದೆ.

ಪತಿ ನೀಡುತ್ತಿದ್ದ ಹಿಂಸೆ ತಾಳಿಕೊಳ್ಳಲಾಗದೆ ಪತ್ನಿ ತವರು ಮನೆಗೆ ಬಂದಿದ್ದರು. ಮಗಳ ಸ್ಥಿತಿ ಕಂಡಿದ್ದ ತಂದೆ ಅಳಿಯನಿಂದ ಮಗಳಿಗೆ ಆಗುತ್ತಿರುವ ಹಿಂಸೆ ತಪ್ಪಿಸಲು ಮಗಳನ್ನು ಗಂಡನ ಮನೆಗೆ ಕಳಿಸಿರಲಿಲ್ಲ. ಬದಲಾಗಿ ಇನ್ನೊಬ್ಬಳು ಮಗಳ ಮನೆಗೆ ತಾತ್ಕಾಲಿಕ ನೆಲೆಯಲ್ಲಿ ಕಳಿಸಿಕೊಟ್ಟಿದ್ಧರು. ಇದೇ ವಿಚಾರವಾಗಿ ಅಳಿಯ ಮಾವನಬಳಿ ಮುನಿಸಿಕೊಂಡಿದ್ದ. ಇದೇ ದ್ವೇಷದಿಂದ ಅಳಿಯ ಶಾಫಿ ಮಾವ ಇಬ್ರಾಹಿಂ ಅವರನ್ನು ಕೊಲೆಗೈಯ್ಯುವ ಉದ್ದೇಶದಿಂದ ನ.2ರಂದು ದ್ವಿಚಕ್ರ ವಾಹನದಲ್ಲಿ ಢಿಕ್ಕಿ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದ್ದ. ಘಟನೆಯಿಂದ ತೀವ್ರ ರಕ್ತಸ್ರಾವಕ್ಕೊಳಗಾಗಿದ್ದ ಇಬ್ರಾಹಿಂ ವೆನ್ಲಾಕ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಪರಾಧ ಘಟನೆಯ ಬಗ್ಗೆ ಇಬ್ರಾಹಿಂ ಪುತ್ರ ಮುಹಮ್ಮದ್‌ ರಫೀಕ್‌ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿ ಮುಹಮ್ಮದ್‌ ಶಾಫಿಗೆ ಈ ಮೊದಲು ಮದುವೆಯಾಗಿದ್ದು ಮಕ್ಕಳಿದ್ದರು. ಮೊದಲ ಪತ್ನಿಗೂ ಹಿಂಸೆ ನೀಡುತ್ತಿದ್ದರಿಂದ ಆತನನ್ನು ಹೊರಹಾಕಿದ್ದರು, ಆಬಳಿಕ ಆತ ಇಬ್ರಾಹಿಂ ಅವರ ಪುತ್ರಿಯನ್ನು ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಘಟನೆಯಲ್ಲಿ ಬಂಧಿತನಾಗಿರುವ ಆರೋಪಿ ಶಾಫಿ ಪೊಲೀಸರ ಮುಂದೆಯೇ ಪತ್ನಿ ಮತ್ತು ದೂರುದಾರ ಭಾವ ರಫೀಕ್‌ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಎನ್ನಲಾಗಿದೆ.

Elephant: ಕಾಡಾನೆ ತುಳಿದು ಕಾರ್ಮಿಕ ಮಹಿಳೆ ಮೃತ್ಯು, ಇಲಾಖೆ ವಿರುದ್ಧ ಸ್ಥಳಿಯರ ಆಕ್ರೋಶ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟಕ್ಕೆ ಕಾರ್ಮಿಕ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ವೀಣಾ (45) ಎಂದು ಗುರುತಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಕಳೆದ ಎರಡು ತಿಂಗಳಲ್ಲಿ ನಡೆದ ಎರಡನೇ ಘಟನೆ ಇದಾಗಿದ್ದು, ಸ್ಥಳೀಯರು ಅರಣ್ಯ ಇಲಾಖೆಯ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಲ್ದೂರು ವಲಯದ ಅರಣ್ಯದಲ್ಲಿ 7 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಇಂದು ಬೆಳಿಗ್ಗೆ ವೀಣಾ ಅವರು ತೋಟಕ್ಕೆ ಕೆಲಸಕ್ಕೆ ಹೋಗುವಾಗ ದಾಳಿ ನಡೆಸಿದೆ ಪರಿಣಾಮ ಗಂಭೀರ ಗಾಯಗೊಂಡ ವೀಣಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು