ಹೆಬ್ರಿ : ನೀರಿನ ಹೊಂಡಕ್ಕೆ ಬಿದ್ದು ಬಾಲಕಿ ಮೃತ್ಯು
Twitter
Facebook
LinkedIn
WhatsApp
ಹೆಬ್ರಿ ಆ 02 : ಹೆಬ್ರಿ ತಾಲೂಕಿನ ನಾಲ್ಕೂರು ಗ್ರಾಮದ ಕಕ್ಕೆ ಅರಮನೆ ಜೆಡ್ಡು ಸಮೀಪ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕೃತಿಕಾ(3) ಮೃತ ಬಾಲಕಿ. ಮಂಗಳವಾರ ರಾತ್ರಿ ಅಜ್ಜಿ ಮಂಜುಳಾ ಜೊತೆ ನಡೆದುಕೊಂಡು ಹೋಗುತ್ತಿದ್ದಾಗ ಕತ್ತಲಲ್ಲಿ ರಸ್ತೆ ಪಕ್ಕದಲ್ಲಿರುವ ಹೊಂಡಕ್ಕೆ ಬಾಲಕಿ ಬಿದ್ದು ಬಾಲಕಿ ಸಾವನ್ನಪ್ಪಿದ್ದಾಳೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ: ಉಪ್ಪುಂದ ಕರ್ಕಿಕಳಿ ದೋಣಿ ಮುಳುಗಡೆ – ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಪತ್ತೆ
ಕುಂದಾಪುರ, ಆ 02: ಸೋಮವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಬೈಂದೂರು ತಾಲೂಕಿನ ಉಪ್ಪುಂದದ ಕರ್ಕಿಕಳಿಯಲ್ಲಿ ನಡೆದ ನಾಡದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಸ್ಥಳೀಯ ನಿವಾಸಿ ಮೀನುಗಾರ ಸತೀಶ್ ಖಾರ್ವಿ ಶವ ಮಂಗಳವಾರ ರಾತ್ರಿ ಪತ್ತೆಯಾಗಿದೆ.
ಉಪ್ಪುಂದ ಸಮೀಪದ ಕೊಡೇರಿ ಬಂದರು ಸಿ ವಾಕ್ ಬಲಬದಿಯಲ್ಲಿ ಸತೀಶ್ ಖಾರ್ವಿ ಶವ ತೇಲಿ ಬಂದಿದ್ದು ಸ್ಥಳೀಯರು ಗುರುತಿಸಿ ಮಾಹಿತಿ ನೀಡಿದ್ದಾರೆ. ನಿನ್ಬೆಯಿಂದಲೂ ಸ್ಥಳೀಯರು ಹಾಗೂ ಪೊಲೀಸರು ಸತೀಶ್ ಖಾರ್ವಿಗಾಗಿ ಶೋಧ ಕಾರ್ಯ ನಡೆಸಿದ್ದರು.