ಗುರುವಾರ, ಮಾರ್ಚ್ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಲಗಿದ್ದಲ್ಲೆ ಕೊನೆಯುಸಿರೆಳೆದ 22ರ ಯುವಕ.

Twitter
Facebook
LinkedIn
WhatsApp
ಮಲಗಿದ್ದಲ್ಲೆ ಕೊನೆಯುಸಿರೆಳೆದ 22ರ ಯುವಕ.

ಬೈಂದೂರು: ಊಟ ಮಾಡಿ ಮನೆಯಲ್ಲಿ ಮಲಗಿದ್ದಾಗ ದೇಹದಲ್ಲಿ ಆಯಾಸಗೊಂಡು ಯುವಕನೊಬ್ಬ ಹಠಾತ್‌ ಮೃತಪಟ್ಟ ಘಟನೆ ಬೈಂದೂರು ಸಮೀಪದ ಮದ್ದೋಡಿ ರಸ್ತೆಯ ದರ್ಖಾಸ್‌ ಕಾಲನಿಯಲ್ಲಿ ನಡೆದಿದೆ.

ಬೈಂದೂರು ಮದ್ದೋಡಿ ರಸ್ತೆಯ ದರ್ಖಾಸ್‌ ಕಾಲನಿ ನಿವಾಸಿಯಾಗಿರುವ ಸಂದೇಶ್‌ (22) ಮೃತಪಟ್ಟ ಯುವಕ.

ಈತ ಕೂಲಿ ಕೆಲಸ ಮಾಡಿಕೊಂಡಿದ್ದು ಆರೋಗ್ಯವಂತನಾಗಿದ್ದ.ರಾತ್ರಿ ಊಟ ಮಾಡಿ ಮಲಗಿದ್ದಾಗ ಮೈಯೆಲ್ಲಾ ಬೆವತು ಮನೆಯವರನ್ನು ಕೂಗಿ ಕರೆದಿದ್ದ. ಮನೆಯವರು ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಿದರೂ, ದಾರಿ ಮಧ್ಯೆ ಮೃತಪಟ್ಟಿದ್ದಾನೆ. ಬೈಂದೂರು ಆರಕ್ಷಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚೆಗೆ ಪುಂಜಾಲಕಟ್ಟೆಯಲ್ಲೂ ಇದೇ ರೀತಿಯ ಘಟನೆ ನಡೆದಿತ್ತು. ಯುವತಿಯೋರ್ವಳು ಊಟ ಮಾಡಿ ಮಲಗಿದಲ್ಲಿಯೇ ಅಸ್ವಸ್ಥಗೊಂಡು ಸಾವಿಗೀಡಾಗಿದ್ದರು. ಹೃದಯಾಘಾತದಿಂದ ಸಾವು ಸಮಭವಿಸಿತ್ತೆಂದು ಅನಂತರ ಪರೀಕ್ಷಿಸಿದ ವೈದ್ಯರು ತಿಳಿಸಿದ್ದರು.

ಬಂಟ್ವಾಳ: ರಿಕ್ಷಾ-ಕಾರಿನ ನಡುವೆ ಅಪಘಾತ: ನಾಲ್ವರಿಗೆ ಗಾಯ

ಬಂಟ್ವಾಳ, ಸೆ 04 :  ರಿಕ್ಷಾ ಮತ್ತು ಕಾರಿನ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿ ರಿಕ್ಷಾದಲ್ಲಿದ್ದ ಬಾಲಕಿ ಸಹಿತ ನಾಲ್ವರು ಗಾಯಗೊಂಡ ಘಟನೆ ವಗ್ಗ ಎಂಬಲ್ಲಿ ನಡೆದಿದೆ.

ಎಂಟು ವರ್ಷದ ಬಾಲಕಿ ಶ್ರೀನಿತ , ಪದ್ಮಲತಾ, ಅಪ್ಪಿಪೂಜಾರಿ ಮತ್ತು ಚಾಲಕ ಸಂಜೀವ ಪೂಜಾರಿ ಗಾಯಗೊಂಡವರು. ಕಾರು ಚಾಲಕ ಮಹಮ್ಮದ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ವಗ್ಗ ಸಮೀಪದ ಕಾಡಬೆಟ್ಟು ಕ್ರಾಸ್ ಎಂಬಲ್ಲಿ ಈ ಘಟನೆ ನಡೆದಿದೆ. ಕಾಡಬೆಟ್ಟು ಕ್ರಾಸ್ ನಿಂದ ಹೆದ್ದಾರಿಗೆ ರಿಕ್ಷಾ ಪ್ರವೇಶ ಮಾಡುವ ಸಂದರ್ಭದಲ್ಲಿ ಡಿಕ್ಕಿಹೊಡೆದಿದೆ. ಮಂಗಳೂರಿನಿಂದ ಬೆಳ್ತಂಗಡಿ ಮಾರ್ಗವಾಗಿ ಬೆಂಗಳೂರು‌ಕಡೆಗೆ ಹೋಗುತ್ತಿದ್ದ ಕಾರಿಗೆ ಕಾಡಬೆಟ್ಟು ಕ್ರಾಸ್ ನಲ್ಲಿ ಏಕಾಏಕಿ ರಿಕ್ಷಾ ಹೆದ್ದಾರಿಗೆ ನುಗ್ಗಿಸಿದ ಪರಿಣಾಮ ವಾಗಿ ಅಪಘಾತ ನಡೆದಿದೆ ಎಂದು ಹೇಳಲಾಗಿದ್ದು,ಕಾರು ಚಾಲಕ ಮಹಮ್ಮದ್ ರಿಕ್ಷಾ ಚಾಲಕನ ಮೇಲೆ ದೂರು ನೀಡಿದ್ದಾರೆ.

ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು