ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡಬಿದಿರೆ: ಬಸ್ಸಿನಿಂದ ಬಿದ್ದು ಮಹಿಳೆ ಸಾವು!

Twitter
Facebook
LinkedIn
WhatsApp
ಮೂಡಬಿದಿರೆ: ಬಸ್ಸಿನಿಂದ ಬಿದ್ದು ಮಹಿಳೆ ಸಾವು!

ಮೂಡುಬಿದಿರೆ: ಆಸ್ಪತ್ರೆಗೆ ಹೋಗಲೆಗೆಂದು ಬಸ್‌ ಏರಿದ ಇಳಿವಯಸ್ಸಿನ ಮಹಿಳೆಯೋರ್ವರು ಚಾಲಕ ಮತ್ತು ನಿರ್ವಾಹಕರ ನಿರ್ಲಕ್ಷ್ಯದಿಂದಾಗಿ ಕೆಳಗೆ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲೇ ಮೃತಪಟ್ಟ ಘಟನೆ ಪುರಸಭೆ ವ್ಯಾಪ್ತಿಯ ಮಾರೂರಿನಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮಾರೂರು ಕುಂಟೋಡಿ ನಿವಾಸಿ ನೀಲಮ್ಮ (66) ಮೃತಪಟ್ಟವರು. ಅವರು ಆರೋಗ್ಯ ತಪಾಸಣೆಗೆಂದು ಮೊಮ್ಮಗನ ಜತೆ ಆಸ್ಪತ್ರೆಗೆ ಹೊರಟಿದ್ದರು. ಬಸ್‌ ಏರುವಷ್ಟರಲ್ಲಿ ನಿರ್ವಾಹಕ ರೈಟ್‌ ಕೊಟ್ಟಿದ್ದು ಚಾಲಕ ಬಸ್‌ ಚಲಾಯಿಸಿದ್ದರಿಂದ ನೀಲಮ್ಮ ಆಯತಪ್ಪಿ ಬಿದ್ದರು. 

ತಲೆಯ ಹಿಂಭಾಗಕ್ಕೆ ಗಂಭೀರ ಗಾಯಗೊಂಡಿದ್ದ ಅವರನ್ನು ತತ್‌ಕ್ಷಣ ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಅಸುನೀಗಿದರೆಂದೂ ತಿಳಿದುಬಂದಿದೆ. ನಿರ್ವಾಹಕ ಅಶೋಕ್‌ ಮತ್ತು ಚಾಲಕ ಪ್ರಸನ್ನ ಅವರನ್ನು ವಶಕ್ಕೆ ಪಡೆದುಕೊಂಡ ಮೂಡುಬಿದಿರೆ ಪೊಲೀಸ್‌ ನಿರೀಕ್ಷಕ ಸಂದೇಶ್‌ ಅವರು ಪ್ರಕರಣ ದಾಖಲಿಸಿಕೊಂಡು ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

ಬಂಟ್ವಾಳ: ಕಾರು-ಬೈಕ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಾಯ

ಬಂಟ್ವಾಳ, ಸೆ 12 : ಕಾರು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು ಮಧ್ಯಾಹ್ನ ವೇಳೆ ನಡೆದಿದೆ.

ತಮಿಳುನಾಡು ಮೂಲದ ವೈವೇಶಪುರಂ ನಿವಾಸಿ ಗೋಪಿನಾಥ್ ಬಿ(22) ಗಾಯಗೊಂಡ ವ್ಯಕ್ತಿ. ಗೋಪಿನಾಥ್ ಅವರ ಚಿಕ್ಕಪ್ಪ ನ‌ಜೊತೆ ಬೈಕ್ ನಲ್ಲಿ ಬಂಟ್ವಾಳ ದಿಂದ ಮಣಿಹಳ್ಳ ಕಡೆಗೆ ಹೋಗುತ್ತಿದ್ದ ವೇಳೆ ಜಕ್ರಿಬೆಟ್ಟು ಎಂಬಲ್ಲಿ ಘಟನೆ ನಡೆದಿದೆ. ಜಕ್ರಿಬೆಟ್ಟು ಎಂಬಲ್ಲಿ ಹಿಂಬದಿಯಿಂದ ಬರುತ್ತಿದ್ದ ಕಾರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಬೈಕ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಹೆದ್ದಾರಿಗೆ ಮಗುಚಿ ಬಿದ್ದಿದೆ ಅಲ್ಲದೆ ಬೈಕ್ ಸವಾರ ಗೋಪಿನಾಥ್ ಅವರಿಗೂ ಗಾಯವಾಗಿದೆ. ಕಾರು ಚಾಲಕ ಮ್ಯಾಥ್ಯೂ ಅವರ ಅಜಾಗರೂಕತೆಯ ಚಾಲನೆಯೇ ಈ ಘಟನೆ ಗೆ ಕಾರಣವೆನ್ನಲಾಗಿದೆ.

ಅಪಘಾತಕ್ಕೆ ಕಾರಣವಾದ ಕಾರಿನ ಚಾಲಕ ವಿರುದ್ದ ಪ್ರಕರಣ ದಾಖಲಾಗಿದ್ದು, ಸೂಕ್ತ ಕಾನೂನು ಕ್ರಮಕ್ಕೆ ದೂರಿನಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು