ಶನಿವಾರ, ಮೇ 11, 2024
ಶತಕ ಸಿಡಿಸಿ ಐಪಿಎಲ್ ನಲ್ಲಿ ವೇಗವಾಗಿ 1000 ರನ್ ಪೂರೈಸಿದ ಭಾರತದ ಮೊದಲ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್..!-ಕಾಂಗ್ರೆಸ್ ಗೆ ಮತ ಹಾಕಿದರೆ ಪಾಕಿಸ್ತಾನಕ್ಕೆ ಮತ ಹಾಕಿದಂತೆ; ಬಿಜೆಪಿ ನಾಯಕಿ ನವನೀತ್ ರಾಣಾ ವಿರುದ್ಧ ಪ್ರಕರಣ ದಾಖಲು..!-ಜೈಲಿನಿಂದ ಬಿಡುಗಡೆಯಾದ ಬಳಿಕ ಅರವಿಂದ್ ಕೇಜ್ರಿವಾಲ್ ಗೆ ಕಾರ್ಯಕರ್ತರಿಂದ ಅದ್ದೂರಿ ಸ್ವಾಗತ; ಸುಪ್ರೀಂನಿಂದ ಷರತ್ತುಗಳೇನು.?-ಇದು ನಾಚಿಕೆಗೇಡಿನ ಸಂಗತಿ; ಕೆಎಲ್ ರಾಹುಲ್ ಗೆ ನಿಂದಿಸಿದ್ದ ಸಂಜೀವ್ ಗೋಯೆಂಕಾ ವಿರುದ್ಧ ಮೊಹಮ್ಮದ್ ಶಮಿ ವಾಗ್ದಾಳಿ..!-ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು-ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ವಕೀಲ ದೇವರಾಜೆಗೌಡ ಪೊಲೀಸ್ ವಶಕ್ಕೆ..!-ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೂಡುಬಿದಿರೆ : ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ

Twitter
Facebook
LinkedIn
WhatsApp
ಮೂಡುಬಿದಿರೆ : ಕ್ರಿಕೆಟ್ ಬೆಟ್ಟಿಂಗ್, ಮೂವರ ಬಂಧನ

ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿ ಅಕ್ಟೋಬರ್ 16 ರಂದು ಸಂಜೆ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು ಬೆಳುವಾಯಿ ಗ್ರಾಮದ ನವೀದ್ (30), ಪಡುಮಾರ್ನಾಡು ಗ್ರಾಮದ ಬಸವನಕಜೆಯ ಉಮೇಶ್ (40) ಮತ್ತು ಪದವು ದರ್ಕಾಸು ಮನೆ ನಿವಾಸಿ ಪ್ರಸಾದ್ ದೇವಾಡಿಗ (35) ಎನ್ನುವವರಾಗಿದ್ದಾರೆ.

ನವೀದ್ ಎಂಬಾತ ಪ್ರಸಾದ್ ಮತ್ತು ಉಮೇಶ್ ಎಂಬುವರಿಂದ ಹಣವನ್ನು ಪಡೆದು ಮೊಬೈಲ್ ವೆಬ್ ಸೈಟ್ ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಲಾಗಿದೆ.

ಶ್ರೀಲಂಕಾ ಮತ್ತು ಆಸ್ಪ್ರೇಲಿಯಾ ಪಂದ್ಯಕ್ಕೆ ಬೆಟ್ಟಿಂಗ್ ಮಾಡಲು ಹಣವನ್ನು ಗೂಗಲ್ ಪೇ ಅಥವಾ ಪೋನ್ ಪೇ ಮುಖೇನ ಪಡೆಯುತ್ತಿದ್ದ ಬಗ್ಗೆ ತಿಳಿದುಬಂದಿದೆ. ತಾವು ಬೆಟ್ಟಿಂಗ್ ನಲ್ಲಿ ತೊಡಗಿಸಿಕೊಳ್ಳುತ್ತಿದ್ದ Comfort Zone 247 ಎಂಬ ವೆಬ್ ಸೈಟ ನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್,ರವರ ಮಾರ್ಗದರ್ಶನದಂತೆ, DCP ಸಿದ್ದಾರ್ಥ ಗೊಯಲ್ , DCP (ಅ & ಸಂ)ದಿನೇಶ್ ಕುಮಾರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ACP ಮನೋಜ್ ಕುಮಾರ್ ನಾಯ್ಕ್ ರವರ ನಿರ್ದೇಶನದಲ್ಲಿ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ, ಸಿಬಂದಿಗಳಾದ ಚಂದ್ರಹಾಸ್ ರೈ, ಮೊಹಮ್ಮದ್ ಹುಸೇನ್, ಅಖೀಲ್ ಅಹ್ಮದ್ ಹಾಗೂ ತಂಡ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

ವಾಹನ ಕಳವು: 8 ಮಂದಿ ಬಂಧನ

ವಿಟ್ಲ: ಕುಡ್ತಮುಗೇರು ಎಂ.ಎಚ್‌. ಶಾಮಿಯಾನ ಮಾಲಕಕೊಬ್ಬರಿಗೆ ಸೇರಿದ ಪಿಕ್‌ಅಪ್‌ ವಾಹನ ಕಳವು ಪ್ರಕರಣದ 8 ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಂಷನ್‌ ಯಾನೆ ಸಾನು, ಜುನ್ಸಿಫ್, ನೌಫ‌ಲ್‌, ಹಂಸಕ್‌, ತಬ್ರಿಜ, ಮೊಹಮ್ಮದ್‌ ಉಸೈನ್‌, ಹ್ಯಾರಿಸ…, ಮೊಹಮ್ಮದ್‌ ಅಯೂಬ ಖಾನ್‌ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಸೆ. 23ರಂದು ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುಡ್ತಮುಗೇರು ಎಂಬಲ್ಲಿ ಶಾಮಿಯಾನ ಸಾಮಗ್ರಿಯ ಜತೆಗೆ ನಿಲ್ಲಿಸಿದ್ದ ವಾಹನವನ್ನು ಕಳವುಗಯ್ಯಲಾಗಿತ್ತು. ಗೋಣಿಕೊಪ್ಪದ ಗುಜರಿ ಅಂಗಡಿಯಿಂದ ಶಾಮಿಯಾನದ ಪಿಕಪ್‌ನಲ್ಲಿದ್ದ ಟಿನ್‌ ಶೀಟ್‌ ಹಾಗೂ ಕಬ್ಬಿಣದ ಪೈಪ್‌ಗ್ಳನ್ನು ಹಿಂದಿರುಗಿಸಿದ್ದಾರೆ. 2015 ಮಾಡೆಲ್‌ನ 8 ಲಕ್ಷ ಮೌಲ್ಯದ ಪಿಕಪ್‌ ವಾಹನ ಪತ್ತೆ ಹಚ್ಚಲಾಗಿಲ್ಲ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು