ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ : ಹೃದಯಾಘಾತಕ್ಕೆ ಯುವಕ ಬಲಿ..!

Twitter
Facebook
LinkedIn
WhatsApp
ಸುಳ್ಯ : ಹೃದಯಾಘಾತಕ್ಕೆ ಯುವಕ ಬಲಿ..!

ಸುಳ್ಯ : ಅನಾರೋಗ್ಯ ನಿಮಿತ್ತ ಔಷಧ ತರಲು ಆಟೋದಲ್ಲಿ ತೆರಳಿದ್ದ ಯುವಕ ದಾರಿ ಮಧ್ಯೆ ಹೃದಯಾಘಾತ ಕ್ಕೆ ಬಲಿಯಾದ ಘಟನೆ ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ನಿಂತಿಕಲ್ಲು ಎಂಬಲ್ಲಿ ನಡೆದಿದೆ.

ಚಂದ್ರಶೇಖರ್ (35) ಹೃದಯಾಘಾತಕ್ಕೆ ಬಲಿಯಾದ ಯುವಕನಾಗಿದ್ದಾರೆ.

ಮಡಿಕೇರಿಯ ಚೆಂಬು ಗ್ರಾಮದ ಆನ್ಯಾಳ ನಿವಾಸಿಯಾಗಿರುವ ಚಂದ್ರಶೇಖರ್ ಅನಾರೋಗ್ಯ ನಿಮಿತ್ತ ಔಷಧ ಪಡೆಯಲು ಸುಳ್ಯದ ನಿಂತಿಕಲ್ಲಿಗೆ ಹೋಗಿದ್ದರು.

ಅಲ್ಲಿಂದ ಔಷಧಿ ಪಡೆದು ಆಟೋದಲ್ಲಿ ವಾಪಸ್ ಬರುವಾಗ ದಾರಿ ಮಧ್ಯೆ ಅಸ್ಪಸ್ಥಗೊಂಡಿದ್ದಾರೆ ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಲು ಯತ್ನಿಸಿದರೂ ಅದಾಗಲೇ ಅವರು ಮೃತಪಟ್ಟರು ಎಂದು ತಿಳಿದು ಬಂದಿದೆ.

ಮನನೊಂದು ಯುವತಿ ಆತ್ಮಹತ್ಯೆ

ಕೋಲಾರ: ಪೋಷಕರು ಡಾನ್ಸ್‌ ಕ್ಲಾಸ್‌ಗೆ (Dance Class) ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು (Young Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಇತ್ತೀಚೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಡಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ‌ ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದು ಹೇಳಿದ ಪೋಷಕರ ಮಾತಿನಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು