ಭಾನುವಾರ, ಏಪ್ರಿಲ್ 28, 2024
ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಸುಳ್ಯ: ಕನಕಮಜಲು, ಜಾಲ್ಸೂರು ಪರಿಸರದಲ್ಲಿ ಮನೆ, ಅಂಗಡಿಗಳಿಗೆ ನುಗ್ಗಿ ಚಿನ್ನ, ನಗದು, ಸಾಮಗ್ರಿ ಕಳವು

Twitter
Facebook
LinkedIn
WhatsApp
49

ಸುಳ್ಯ: ಸುಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯ ಕನಕಮಜಲು, ಜಾಲ್ಸೂರು ಪರಿಸರದಲ್ಲಿ ರವಾರ ರಾತ್ರಿ ಸರಣಿ ಕಳ್ಳತನ ನಡೆದಿದೆ. ಕನಕಮಜಲಿನ ಮನೆಯಿಂದ, ಜಾಲ್ಸೂರು ಹಾಗೂ ನೋಬನಗರದಲ್ಲಿ ಅಂಗಡಿಗಳಿಂದ ಕಳ್ಳತನ ಕೃತ್ಯ ನಡೆದಿದೆ.

ಪ್ರಕರಣ 1: ಕನಕಮಜಲು
ಕನಕಮಜಲು ಗ್ರಾಮದ ಸಣ್ಣ ಮೂಲೆ ಬುಡ್ಲೆಗುತ್ತು ಯುರೇಶ್‌ ಅವರ ಮನೆಯಿಂದ ಕಳ್ಳತನ ನಡೆದಿದೆ. ಯುರೇಶ್‌ ಅವರ ಮನೆ ಸಮೀಪದ ಸಂಬಂಧಿಯೊಬ್ಬರು ನಿಧನ ಹೊಂದಿದ ಹಿನ್ನಲೆಯಲ್ಲಿ ರಾತ್ರಿ ಮನೆಗೆ ಬಾಗಿಲು ಹಾಕಿ ಅಂತ್ಯಕ್ರಿಯೆಗೆ ತೆರಳಿದ್ದರು. ಈ ವೇಳೆ ಮನೆಯ ಹಿಂಬಾಗಿಲು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು 30 ಪವನ್‌ಗೂ ಅಧಿಕ ಚಿನ್ನಾಭರಣ ಕಳವುಗೈದಿದ್ದಾರೆ. ಎದುರಿನ ಬಾಗಿಲು ತೆರೆಯಲು ಯತ್ನಿಸಿ ಸಾಧ್ಯವಾಗದೇ ಇದ್ದಾಗ ಹಿಂಬಾಗಿಲನ್ನು ಒಡೆದು ಒಳನುಗ್ಗಿರುವುದು ಕಂಡುಬಂದಿದೆ.

ಪ್ರಕರಣ 2: ಜಾಲ್ಸೂರಿನಲ್ಲಿ
ಜಾಲ್ಸೂರಿನ ಸಿಂಡಿಕೇಟ್‌ ಬ್ಯಾಂಕ್‌ ಸಮೀಪದ ಜೋಗಿ ಅವರ ಅಂಗಡಿಯ ಬೀಗ ಮುರಿದು ಕಳ್ಳರು ಡ್ರಾವರ್‌ನಲ್ಲಿದ್ದ ಚಿಲ್ಲರೆ ಹಣ ಸೇರಿದಂತೆ 2 ಸಾವಿರ ನಗದು, ಅಂಗಡಿ ಸಾಮಗ್ರಿಗಳನ್ನು ಕಳವುಗೈದಿದ್ದಾರೆ.

ಪ್ರಕರಣ 3: ಕೋನಡ್ಕಪದವಿನಲ್ಲಿ
ಜಾಲ್ಸೂರು ಗ್ರಾಮದ ವಿನೋಬ ನಗರದಲ್ಲಿರುವ ಕೋನಡ್ಕ ಪದವಿನ ಸುಂದರ್‌ ನಾಯಕ್‌ ಅವರ ಗೂಡಂಗಡಿಯ ಬೀಗ ಮುರಿದು ಮಾರಾಟದ ಕೊಡೆ, ಮತ್ತಿತರ ಸಾಮಗ್ರಿಗಳನ್ನು ಕಳವುಗೈದಿದ್ದಾರೆ.

ಬೆರಳಚ್ಚು ತಜ್ಞರಿಂದ ಪರಿಶೀಲನೆ
ಕಳವು ಕೃತ್ಯ ನಡೆದ ಸ್ಥಳಗಳಿಗೆ ಮಂಗಳೂರಿನಿಂದ ಶ್ವಾನದಳ ಹಾಗೂ ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಎಡಿಶನಲ್‌ ಎಸ್ಪಿ ಧರ್ಮಪ್ಪ, ಪುತ್ತೂರು ಡಿವೈಎಸ್ಪಿ ಡಾ| ಗಾನಾ ಪಿ. ಕುಮಾರ್‌, ವೃತ್ತನಿರೀಕ್ಷಕ ನವೀನ್‌ಚಂದ್ರ ಜೋಗಿ ಸೇರಿದಂತೆ ಪೊಲೀಸ್‌ ಅಧಿಕಾರಿಗಳು, ಸಿಬಂದಿ ಘಟನ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಒಂದೂವರೆ ತಿಂಗಳಿನಲ್ಲಿ
ನಿರಂತರ ಕಳ್ಳತನ
ಜಾಲ್ಸೂರು, ಕನಕಮಜಲು ವ್ಯಾಪ್ತಿ ಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ನಿರಂತರ ಕಳ್ಳತನ ಪ್ರಕರಣ ನಡೆಯುತ್ತಿದೆ. ಕೆಲವು ದಿನಗಳ ಹಿಂದೆ ಗ್ರಾ.ಪಂ.ನಲ್ಲೂ ಕಳ್ಳತನಕ್ಕೆ ಯತ್ನ ನಡೆದಿತ್ತು. ಪೊಲೀಸ್‌ ಇಲಾಖೆ ಬೀಟ್‌ ವ್ಯವಸ್ಥೆ, ಗಸ್ತು ವ್ಯವಸ್ಥೆ ಬಿಗಿ ಗೊಳಿಸಿ ಕಳ್ಳತನ ಪ್ರಕರಣ ನಡೆಯದಂತೆ ಮುಂಜಾಗ್ರತೆ ವಸಬೇಕು ಎನ್ನುವ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ

ಸೂಕ್ತ ಗಸ್ತು, ಬೀಟ್‌ ವ್ಯವಸ್ಥೆಗೆ ಕ್ರಮ: ಎಸ್ಪಿ
ಸುಳ್ಯದ ಕಜನಕಮಜಲು, ಜಾಲ್ಸೂರು ಭಾಗದಲ್ಲಿ ನಡೆದಿರುವ ಕಳ್ಳತನ ಕೃತ್ಯದ ಸ್ಥಳಗಳಿಗೆ ಪೊಲೀಸರು, ತಜ್ಞರು, ಶ್ವಾನದಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರಿದಿದೆ. ನಿರಂತರ ಕಳ್ಳತನ ಆಗುತ್ತಿರುವ ಹಿನ್ನಲೆಯಲ್ಲಿ ಸೂಕ್ತ ಗಸ್ತು, ಬೀಟ್‌ ವ್ಯವಸ್ಥೆಗೆ ಸೂಚಿಸಲಾಗುವುದು ಎಂದು ದ.ಕ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಾಂತ್‌ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು