ಮಂಗಳವಾರ, ಏಪ್ರಿಲ್ 30, 2024
ಮಂಗಳೂರು ಲೋಕಸಭಾ ಚುನಾವಣೆ 2024: ಹಳ್ಳಿ ಗಲ್ಲಿಗಳಲ್ಲಿ ಕಾಂಗ್ರೆಸ್- ಬಿಜೆಪಿ ಸಮೀಕ್ಷೆಯ ಬಗ್ಗೆ ಮಾತುಕತೆ. ಮೂಡಬಿದ್ರಿ-ಬೆಳ್ತಂಗಡಿಯ ಬಿಲ್ಲವ ಮತ, ನೋಟಾದ ಬಗ್ಗೆ ವ್ಯಾಪಕ ಚರ್ಚೆ ಬಗ್ಗೆ !!-ನಮ್ಮದು ಮತ್ತು ರೇವಣ್ಣಕುಟುಂಬವೇ ಬೇರೆ ಬೇರೆ; ಕುಮಾರಸ್ವಾಮಿ-ಹೆತ್ತ ತಂದೆಯನ್ನೇ ಹಿಗ್ಗಾಮುಗ್ಗಾ ಮುಖಕ್ಕೆ ಜಾಡಿಸಿ ಮಗನಿಂದ ಕ್ರೂರ ಕೃತ್ಯ ; ಇಲ್ಲಿದೆ ವಿಡಿಯೋ-Gold Rate: ಏರಿಳಿತದಲ್ಲಿರುವ ಚಿನ್ನದ ದರ ; ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿಯ ದರದ ವಿವರ-ಅಮಿತ್ ಶಾ ಹೇಳಿಕೆ ತಿರುಚಿದ ಆರೋಪ ; ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಸಮನ್ಸ್..!-ನಾಮಪತ್ರ ಹಿಂಪಡೆದ ಕಾಂಗ್ರೆಸ್ ಅಭ್ಯರ್ಥಿ; ಬಿಜೆಪಿ ಸೇರ್ಪಡೆ ಸಾಧ್ಯತೆ.!-ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಟ್ವಿಸ್ಟ್ ದೂರುದಾರೆಯ ಅತ್ತೆಯಿಂದ ಶಾಕಿಂಗ್ ಹೇಳಿಕೆ.!-ಸಂಸದ ಪ್ರಜ್ವಲ್​ ರೇವಣ್ಣ ಜೆಡಿಎಸ್​ನಿಂದ ಉಚ್ಚಾಟನೆ.!-ಗೃಹಲಕ್ಷ್ಮಿ ಯೋಜನೆ ಹಣದಿಂದ ಮೊಬೈಲ್ ಖರೀದಿಸಿದ ಮಹಿಳೆ; ಡಿಸ್ಪ್ಲೇ ಪಿಚ್ಚರ್ ವೈರಲ್!-ಮಾಜಿ ಸಿಎಂ ಎಸ್​ಎಂ ಕೃಷ್ಣ ಆಸ್ಪತ್ರೆಗೆ ದಾಖಲು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಾಯಿ ಸಂಸ್ಕಾರದಲ್ಲಿ ಮಗುವಿನ ಭವಿಷ್ಯ – ಮಾಣಿಲ‌ ಶ್ರೀ

Twitter
Facebook
LinkedIn
WhatsApp
Picsart 23 03 13 18 57 55 696

ವಿಟ್ಲ: ತಾಯಂದಿರ ಸಂಸ್ಕಾರದಲ್ಲಿ ಮಗುವಿನ ಭವಿಷ್ಯ ಹುದುಗಿದೆ. ಮಗುವು ಗರ್ಭದಲ್ಲಿರುವಾಗಲೇ ತಾಯಿ ಸತ್ಕರ್ಮ, ಸತ್‌ಚಿಂತನೆಯಲ್ಲಿ ಇರಬೇಕು. ನಮ್ಮ ಕ್ಷಾತ್ರತೇಜಸ್ಸು ಪ್ರಭಾವ ಪ್ರಕಾಶಮಾನವಾಗಬೇಕಾದರೆ ಭಾವನೆ, ಚಿಂತನೆ, ಧರ್ಮ ಒಂದಾಗಬೇಕು ಎಂದು ಮಾಣಿಲ ಶ್ರೀಧಾಮದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ನುಡಿದರು.ಅವರು ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

 

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ತಂತ್ರಿಗಳಾದ ಬ್ರಹ್ಮಶ್ರೀ ರವೀಶ ತಂತ್ರಿಗಳು ಕುಂಟಾರು ರವರು ಮಾತನಾಡಿ ದೇವರು ಮತ್ತು ಮನುಷ್ಯ ಮಧ್ಯೆ ಇರುವ ಸಂಬಂಧ ಬಿಂಬ ಮತ್ತು ಪ್ರತಿಬಿಂಬದಂತೆ. ದೇವ ಸಾನ್ನಿಧ್ಯ ಅಥವಾ ದೇವರ ಮೂರ್ತಿ ಚೈತನ್ಯದಲ್ಲಿದ್ದಾಗ ನಮಗೆಲ್ಲಾ ಅದರ ಪ್ರತಿಫಲ ಸಿಗುವುದಕ್ಕಾಗಿ ಕಲಿಯುಗದಲ್ಲಿ ಮೂರ್ತಿ ಆರಾಧನೆ ನಡೆಸಲಾಗುತ್ತಿದೆ. ಗೆದ್ದು ಜೀವಿಸಬೇಕೆಂಬ ಜೀವನಕ್ಕೆ ಧನಾತ್ಮಕ ಪ್ರೇರಣೆ ದೇವಾಲಯಗಳಿಂದ ದೊರೆಯುತ್ತದೆ ಎಂದು ತಿಳಿಸಿದರು.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾರವರು ಮಾತನಾಡಿ ವಿಶ್ವದಲ್ಲಿ ಪುಣಚ ಶಕ್ತಿಯಾಗಿದೆ. ‌ನರೇಂದ್ರ ಮೋದಿಯವರು ಹಿಂದು ಧರ್ಮದ ಶ್ರದ್ಧಾಕೇಂದ್ರಗಳ ಪುನರುತ್ಥಾನ ಮಾಡುತ್ತಿರುವುದರಿಂದ ಜಗತ್ತು ಭಾರತದತ್ತ ನೋಡುತ್ತಿದೆ ಎಂದರು. ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಮುಖ್ಯ ಅತಿಥಿಗಳಾಗಿ ಪುತ್ತೂರಿನ ವೈದ್ಯ ಡಾ. ಎಂ.ಕೆ.‌ ಪ್ರಸಾದ್, ಮುಂಬಯಿಯ ಹೇರಂಬ ಇಂಡಸ್ಟ್ರೀಸ್ ನ ಅಧ್ಯಕ್ಷ ಸದಾಶಿವ ಶೆಟ್ಟಿ ಕೂಳೂರು, ಮುಂಬೈ ಟೆಕ್ನೊ ಗ್ರೂಪ್ ಆಫ್ ಇಂಡಸ್ಟ್ರೀಸ್ ನ ವಿವೇಕ್ ಶೆಟ್ಟಿ ನಗ್ರಿಗುತ್ತು ಭಾಗವಹಿಸಿದ್ದರು.

ವೇದಿಕೆಯಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರವಿ ಶೆಟ್ಟಿ ಮೂಡಂಬೈಲು, ಆಡಳಿತ ಸಮಿತಿಯ ಉಪಾಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಉದಯ ಕುಮಾರ್ ದಂಬೆ ಉಪಸ್ಥಿತರಿದ್ದರು.

ಅನುಷಾ ದಂಬೆ ಪ್ರಾರ್ಥಿಸಿದರು. ಆಡಳಿತ ಮಂಡಳಿ ಸದಸ್ಯ ಜಯಶ್ಯಾಂ ನೀರ್ಕಜೆ ಸ್ವಾಗತಿಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ದೇವಿಪ್ರಸಾದ್ ಕಲ್ಲಾಜೆ ವಂದಿಸಿದರು. ರವೀಂದ್ರ ರೈ ಕಾರ್ಯಕ್ರಮ ನಿರೂಪಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಮಂಗಳೂರು