ಮಂಗಳವಾರ, ಮಾರ್ಚ್ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಲೋಕಸಭಾ ಎಲೆಕ್ಷನ್: ಏಪ್ರಿಲ್ 26 ಮತ್ತು ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ..!

Twitter
Facebook
LinkedIn
WhatsApp
ಲೋಕಸಭಾ ಎಲೆಕ್ಷನ್: ಏಪ್ರಿಲ್ 26 ಮತ್ತು ಮೇ 7 ರಂದು ಸಾರ್ವತ್ರಿಕ ರಜೆ ಘೋಷಣೆ..!

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7 ರಂದು ಎಲ್ಲಾ ಸರ್ಕಾರಿ ಮತ್ತು ಸರ್ಕಾರಿ ಸಂಬಂಧಿತ ಸಂಸ್ಥೆಗಳ ನೌಕರರಿಗೆ ಸಾರ್ವತ್ರಿಕ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ನಿಯಮಗಳು ಮತ್ತು ಕಾನೂನಿನ ಪ್ರಕಾರ ರಜೆಯನ್ನು ಘೋಷಿಸಲಾಗಿದೆ ಎಂದು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ(The New Indian Express) ತಿಳಿಸಿದ್ದಾರೆ. 1881ರ ನೆಗೋಶಿಯೇಬಲ್ ಇನ್‌ಸ್ಟ್ರುಮೆಂಟ್ಸ್ ಆಕ್ಟ್ ಅಡಿಯಲ್ಲಿ ರಜೆ ಘೋಷಿಸಲಾಗಿದೆ. ತಮ್ಮ ರಾಜ್ಯಗಳಲ್ಲಿ ಮತದಾನದ ದಿನದಂದು ನೌಕರರಿಗೆ ರಜೆ ನೀಡುವಂತೆ ತಮಿಳುನಾಡಿನಂತಹ ಇತರ ರಾಜ್ಯಗಳಿಂದ ವಿನಂತಿಗಳು ಬಂದಿದ್ದವು.

 

ಇದು ಪ್ರಜಾಪ್ರಭುತ್ವ, ರಜಾದಿನವನ್ನು ಘೋಷಿಸುವುದು ನಮಗೆ ನಿಯಮವಾಗಿದೆ. ನಾವು ಅದನ್ನು ಮಾಡಿದ್ದೇವೆ. ಅದರ ಸದುಪಯೋಗಪಡಿಸಿಕೊಳ್ಳುವುದು ಪ್ರಜೆಗಳಿಗೆ ಬಿಟ್ಟಿದ್ದು.ಮತದಾರರು ಮತದಾನದ ಪ್ರಜ್ಞಾಪೂರ್ವಕ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಹೇಳಿದರು.

ಕಳೆದ ವರ್ಷದ ಅಸೆಂಬ್ಲಿ ಚುನಾವಣೆಯ ಸಂದರ್ಭದಲ್ಲಿ, ಮತದಾನದ ದಿನವು ಮೇ 10, 2023, ಬುಧವಾರವಾಗಿತ್ತು. ಮತದಾನದ ಪ್ರಮಾಣ ಕಳಪೆಯಾಗಿತ್ತು. ಕಳೆದ ಬಾರಿಯೂ ರಜೆ ಘೋಷಿಸಲಾಗಿತ್ತು. ಪ್ರಯಾಣಿಸಬೇಡಿ ಅಥವಾ ಹೊರಗೆ ಹೋಗಬೇಡಿ ಎಂದು ನಾವು ಜನರಿಗೆ ಹೇಳಲು ಸಾಧ್ಯವಿಲ್ಲ, ಮತದಾನ ಹಕ್ಕಾಗಿದ್ದು ಅದನ್ನು ಕಳೆದುಕೊಳ್ಳಬಾರದು ಎಂದು ಜನರು ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಹೇಳಿದರು. ಈ ಬಾರಿ, ಏಪ್ರಿಲ್ 26 ಶುಕ್ರವಾರ, ಮತ್ತು ಮೇ 7 ಮಂಗಳವಾರ ಬರುತ್ತದೆ.

2023 ರ ಅಸೆಂಬ್ಲಿ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಶೇಕಡಾ 72.39 ರಷ್ಟು ಮತದಾನವಾಗಿತ್ತು. ಆದಾಗ್ಯೂ, ಈ ವರ್ಷ, ಲೋಕಸಭೆ ಚುನಾವಣೆಯಲ್ಲಿ ಮತದಾನದ ಶೇಕಡಾವಾರು ಹೆಚ್ಚಳಕ್ಕೆ ಸಹಾಯ ಮಾಡಲು, ಜನರು ರಜೆ ಎಂದು ಪ್ರವಾಸ ಹೋಗುವುದನ್ನು ತಪ್ಪಿಸಲು ಅನೇಕ ಖಾಸಗಿ ಪ್ರವಾಸ ನಿರ್ವಾಹಕರು ಮತ್ತು ಹೋಟೆಲ್‌ಗಳು ಏಪ್ರಿಲ್ 26 ಮತ್ತು ಮೇ 7 ರಂದು ಬುಕ್ಕಿಂಗ್ ನ್ನು ತೆಗೆದುಕೊಳ್ಳದಿರಲು ನಿರ್ಧರಿಸಿವೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಜಂಗಲ್ ಲಾಡ್ಜ್‌ಗಳು ಮತ್ತು ರೆಸಾರ್ಟ್‌ಗಳ ಅಧಿಕಾರಿಗಳು ಸಹ ತಮ್ಮ ಸಿಬ್ಬಂದಿಗಳು ಮತ ಹಾಕಬೇಕೆಂದು ಬಯಸುತ್ತಿರುವುದರಿಂದ ಅಂದು ರಜೆ ನೀಡಲು ಒಲವು ತೋರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist