ಶನಿವಾರ, ಮೇ 18, 2024
Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

Twitter
Facebook
LinkedIn
WhatsApp
Love You SO Much – ಪಾಕ್ ವಿರುದ್ಧ ಗೆಲುವಿನ ಬಳಿಕ ಅನುಷ್ಕಾಗೆ ಕೃತಜ್ಞತೆ ಸಲ್ಲಿಸಿದ ಕೊಹ್ಲಿ

ಮೆಲ್ಬರ್ನ್: ಟಿ20 ಕ್ರಿಕೆಟ್ ವಿಶ್ವಕಪ್ (T20 WorldCup) ಟೂರ್ನಿಯ ಸೂಪರ್ 12ರ ಹಂತದ ಮೊದಲ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ (Virat Kohli), ಪಾಕಿಸ್ತಾನ (Pakistan) ವಿರುದ್ಧ ಭಾರತಕ್ಕೆ 4 ವಿಕೆಟ್ ಅಂತರದ ರೋಚಕ ಗೆಲುವು ತಂದುಕೊಟ್ಟರು.

ಈ ಇನಿಂಗ್ಸ್ ಬಗ್ಗೆ ಕೊಹ್ಲಿ ಅವರ ಪತ್ನಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ (Anushka Sharma) ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಂದ್ಯದ ಬಳಿಕ ಕೊಹ್ಲಿಯ ಚಿತ್ರವನ್ನು ಹಂಚಿಕೊಂಡಿರುವ ಅನುಷ್ಕಾ, ನೀನು ಈ ರಾತ್ರಿ ಜನರಲ್ಲಿ ಸಾಕಷ್ಟು ಸಂತಸವನ್ನು ತಂದಿರುವೆ. ಅದೂ ದೀಪಾವಳಿ ಮುನ್ನಾದಿನ ಎಂದು ಬರೆದುಕೊಂಡಿದ್ದಾರೆ. 

`ನೀನು ನನ್ನ ಅದ್ಭುತ. ನಿನ್ನ ಸ್ಥೈರ್ಯ, ತ್ಯಾಗ ಮತ್ತು ವಿಶ್ವಾಸ ಎಂತಹವರನ್ನೂ ಚಕಿತಗೊಳಿಸುತ್ತದೆ. ನಾನು ನನ್ನ ಜೀವನದಲ್ಲೇ ಅತ್ಯುತ್ತಮ ಪಂದ್ಯವನ್ನು ನೋಡಿದೆ ಎಂದು ಹೇಳಬಲ್ಲೆ. ತನ್ನ ತಾಯಿ ಏಕೆ ರೂಮಿನಲ್ಲಿ ಕುಣಿದಾಡುತ್ತಿದ್ದಾಳೆ ಎಂಬುದನ್ನು ಅರ್ಥ ಮಾಡಿಕೊಳ್ಳಲು ನಮ್ಮ ಮಗಳು ಇನ್ನೂ ಚಿಕ್ಕವಳು. ಆದರೆ ಆ ರಾತ್ರಿ ಅವಳ ಅಪ್ಪ ಅತ್ಯಂತ ಕಠಿಣ ಸಂದರ್ಭದಲ್ಲಿ, ತನ್ನ ಮೇಲೆ ಅಪಾರ ಹೊರೆ ಇದ್ದಾಗಲೂ ಇಂದೆಂದಿಗಿಂತ ಹೆಚ್ಚು ಪ್ರಬಲವಾಗಿ ಮತ್ತು ಪ್ರಬುದ್ಧವಾಗಿ ಸವಾಲನ್ನು ಮೀರಿ ಹೊರ ಬಂದಿದ್ದರು. ವೃತ್ತಿ ಜೀವನದ ಅತ್ಯುತ್ತಮ ಇನಿಂಗ್ಸ್ ಆಡಿದ್ದರು ಎಂಬುದನ್ನು ಮುಂದೊಂದು ದಿನ ಅರ್ಥ ಮಾಡಿಕೊಳ್ಳುತ್ತಾಳೆ. ನಾನು ತುಂಬಾ ಹೆಮ್ಮೆ ಪಡುತ್ತಿದ್ದೇನೆ’ ಎಂದು ಭಾವುಕರಾಗಿ ಹೇಳಿಕೊಂಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಕೊಹ್ಲಿ, ಪ್ರತಿಯೊಂದು ಕ್ಷಣದಲ್ಲೂ ನನ್ನ ಜೊತೆಗೆ ಇದ್ದುದ್ದಕ್ಕಾಗಿ ನನ್ನ ಪ್ರೀತಿಗೆ ಧನ್ಯವಾದಗಳು. ನಾನು ತುಂಬಾ ಕೃತಜ್ಞನಾಗಿದ್ದೇನೆ. ನಿನ್ನನ್ನು ತುಂಬಾ ಪ್ರೀತಿಸುತ್ತೇನೆ ಎಂದು ಕಾಮೆಂಟ್ ಮಾಡಿದ್ದಾರೆ. 

ಮೆಲ್ಬರ್ನ್ ಮೈದಾನದಲ್ಲಿ ನಡೆದ ಟಿ20 ವಿಶ್ವಕಪ್ ಇಂಡೋ ಪಾಕ್ ಕದನದಲ್ಲಿ 20 ಓವರ್‌ಗಳಲ್ಲಿ ಪಾಕಿಸ್ತಾನ 8 ವಿಕೆಟ್‌ ನಷ್ಟಕ್ಕೆ 159 ರನ್ ಗಳಿಸಿ, ಭಾರತಕ್ಕೆ 160 ರನ್‌ಗಳ ಗುರಿ ನೀಡಿತ್ತು. ಈ ಗುರಿ ಬೆನ್ನತ್ತಿದ ಭಾರತ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿ ಗೆಲುವು ಸಾಧಿಸಿತು.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ
ಅಂಗಾಂಗ ದಾನ ಮಾಡಿ 9 ಜೀವಗಳನ್ನು ಉಳಿಸಿದ ಮದನ್‌ ಕುಮಾರ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ