ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೋಷಕರ ವಿರೋಧದ ಹಿನ್ನೆಲೆ ಬಸ್ ನಲ್ಲಿಯೆ ವಿಷ ಸೇವಿಸಿದ ಪ್ರೇಮಿಗಳು; ಯುವತಿ ಸಾವು - ಯುವಕ ಪಾರು!

Twitter
Facebook
LinkedIn
WhatsApp
Lovers suicide in Haveri

ಹಾವೇರಿ: ವಿವಾಹಕ್ಕೆ ಪೋಷಕರ ವಿರೋಧ ಹಿನ್ನೆಲೆ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್​ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ (Suicide) ಯತ್ನಿಸಿದ್ದಾರೆ. ಹಾವೇರಿಯಲ್ಲಿ (Haveri) ನಡೆದ ಈ ಘಟನೆಯಲ್ಲಿ ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹೇಮಾ ರಾಮಕೃಷ್ಣಪ್ಪ (20) ಮೃತ ಯುವತಿ.

ಬಾಗಲಕೋಟೆ ಮೂಲದ ಅಖಿಲ್​​ ಮತ್ತು ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರೂ ಜೊತೆಗೆ ಬಾಳುವ ನಿರ್ಣಯ ಮಾಡಿಕೊಂಡು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ತಮ್ಮ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೊಂದ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ ಹತ್ತಿದ್ದಾರೆ. ನಂತರ ವಿಷ ಸೇವಿಸಿಕೊಂಡ ಅಖಿಲ್ ಮತ್ತು ಹೇಮಾ ನಿದ್ರಿಸಿದ್ದಾರೆ. ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್​ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.ಕೂಡಲೇ ಎಚ್ಚೆತ್ತ ಪ್ರಯಾಣಿಕರು ಸ್ಥಳೀಯರ ಸಹಾಯದಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರೂ ದುರಾದೃಷ್ಟವಶಾತ್ ಹೇಮಾ ಕೊನೆಯುಸಿರೆಳೆದಿದ್ದಾಳೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್​ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಚಳಗೇರಿ ಟೋಲ್ 5 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೂ ಮುನ್ನ ಹೇಮಾ ಪೋಷಕರಿಗೆ ದೂರವಾಣಿ ಕರೆ ಮಾಡಿದ್ದಾಳೆ. ನಮ್ಮ ಮದುವೆಗೆ ನೀವು ಒಪ್ಪಿಗೆ ಕೊಡಲ್ಲ ಅನ್ನೋದು ಗೊತ್ತಾಯ್ತು. ಹೀಗಾಗಿ ಬಾಂಬೆಗೆ ಹೋಗುತ್ತಾ ಇದ್ದೇವೆ ಪೋಷಕರಿಗೆ ತಿಳಿಸಿದ್ದಾಳೆ. ಇಷ್ಟು ಹೇಳಿ ಕಾಲ್ ಕಟ್ ಮಾಡಿದ್ದ ಹೇಮಾ ಮತ್ತು ಅಖಿಲ್ ಬಾಂಬೆಗೆ ಹೋಗದೆ ಬಸ್​ನಲ್ಲಿ ವಿಷ ಸೇವಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist