ಭಾನುವಾರ, ಫೆಬ್ರವರಿ 23, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Madagascar stadium: ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ: 12 ಜನರ ಸಾವು, 80 ಜನರಿಗೆ ಗಾಯ

Twitter
Facebook
LinkedIn
WhatsApp
Madagascar stadium

Madagascar stadium: ಕಾಲ್ತುಳಿತವೊಂದರಲ್ಲಿ ಕನಿಷ್ಠ 12 ಜನರು ಮೃತಪಟ್ಟು, 80 ಜನರು ಗಾಯಗೊಂಡಿರುವ ಘಟನೆ ಮಡಗಾಸ್ಕರ್​ದ ಅಂಟಾನಾನರಿವೊ ಎಂಬಲ್ಲಿ ನಡೆದಿದೆ.

ಹಿಂದೂ ಮಹಾಸಾಗರ ದ್ವೀಪ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕಾಗಿ ಸುಮಾರು 50,000 ಜನರು ಕ್ರೀಡಾಂಗಣಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಇಂಡಿಯನ್ ಓಷನ್ ಐಲ್ಯಾಂಡ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭಕ್ಕಾಗಿ ಕ್ರೀಡಾಭಿಮಾನಿಗಳು ರಾಷ್ಟ್ರೀಯ ಕ್ರೀಡಾಂಗಣಕ್ಕೆ (Madagascar stadium) ಪ್ರವೇಶಿಸಲು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದ್ದು, ಗಾಯಗೊಂಡವರಲ್ಲಿ 11 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಮಡಗಾಸ್ಕರ್​​ದ ಪ್ರಧಾನಿ ಕ್ರಿಶ್ಚಿಯನ್ ಎನ್ಟ್ಸೆ ಹೇಳಿದ್ದಾರೆ.

ವಿದೇಶಿ ಮಾಧ್ಯಮ ಅಲ್ ಜಜೀರಾ, ಬರಿಯಾ ಸ್ಟೇಡಿಯಂನ ನಡೆದ ಹಿಂದೂ ಮಹಾಸಾಗರ ದ್ವೀಪದ ಕ್ರೀಡಾಕೂಟದ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಪಾರ ಜನರು ಸೇರಿದ್ದರು. ಈ ವೇಳೆ ಪ್ರವೇಶದ್ವಾರದ ಬಳಿ ದೊಡ್ಡ ಕಾಲ್ತುಳಿತ ನಡೆದಿದೆ ಎನ್ನಲಾಗಿದ್ದು, ಆದರ ಇದಕ್ಕೆ ನಿಖರ ಕಾರಣ ಸ್ಪಷ್ಟವಾಗಿಲ್ಲ ಎಂದು ವರದಿ ಮಾಡಿದೆ.

ಈ ಮಾರಣಾಂತಿಕ ಘಟನೆಯಲ್ಲಿ ಜನರರು ಜನರು ತಮ್ಮ ಬೂಟುಗಳನ್ನು ಮತ್ತು ಕಳೆದುಹೋದ ವಸ್ತುಗಳನ್ನು ಹುಡುಕಲು ಪ್ರಯತ್ನಿಸುತ್ತಿರುವ ದೃಶ್ಯ ಕಂಡುಬಂದಿದ್ದು, ಕ್ರೀಡಾಂಗಣದ ಒಳಗಿನ ಇತರ ಚಿತ್ರಗಳನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಳ್ಳಲಾಗಿದ್ದು, ಈ ಹಿಂದೆ 2019ರಲ್ಲಿ ಮಹಾಮಸಿನಾ ಕ್ರೀಡಾಂಗಣದಲ್ಲಿ ನಡೆದ ಇದೇ ರೀತಿಯ ಘಟನೆಯಲ್ಲಿ ಕನಿಷ್ಠ 15 ಜನರು ಮೃತಪಟ್ಟಿದ್ದರು.

ಮಡಗಾಸ್ಕರ್ ಪ್ರಧಾನಿ ಕ್ರಿಶ್ಚಿಯನ್ ಎನ್ಟ್ಸೆ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಕಾಲ್ತುಳಿತದಲ್ಲಿ ಗಾಯಗೊಂಡವರಲ್ಲಿ 11 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಡಗಾಸ್ಕರ್ ಅಧ್ಯಕ್ಷ ಆಂಡ್ರಿ ರಾಜೋಲಿನಾ ಅಪಘಾತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಘಟನೆ ದುರದೃಷ್ಟಕರ ಎಂದು ಬಣ್ಣಿಸಿದ ಅವರು, ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ಮೌನವಾಗಿರುವಂತೆ ಕ್ರೀಡಾಂಗಣದಲ್ಲಿ ನೆರೆದಿದ್ದ ಜನರಲ್ಲಿ ಮನವಿ ಮಾಡಿದರು. ಇದಾದ ಬಳಿಕ ಕ್ರೀಡಾಂಗಣದಲ್ಲಿ ನಡೆಯಲಿರುವ ಕಾರ್ಯಕ್ರಮ ಮುಂದುವರಿಯಿತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist