ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಡಿಕೇರಿ:ಮೂಲಭೂತ ಸೌಕರ್ಯವಿಲ್ಲದೇ ಕುಗ್ಗಿದ ಜನ- ಪಯಸ್ವಿನಿ ನದಿಗೆ ಬಿದಿರಿನ ಸೇತುವೆ ಸಂಕಷ್ಟ

Twitter
Facebook
LinkedIn
WhatsApp
3


ಮಡಿಕೇರಿ: ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಇವರಿಗೆ ಮಾತ್ರ ಇಂದಿಗೂ ಮೂಲಭೂತ ಸೌಕರ್ಯಗಳನ್ನು ನೀಡದೇ ಇರುವುದರಿಂದ ಸಂಕಷ್ಟದ ಬದುಕು ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ನೂರಾರು ವರ್ಷಗಳಿಂದ ಆ ಕಾಡಿನಲ್ಲೇ ವಾಸ ಇರುವ ಕಾರಣ ಜನರಿಗೆ ರಸ್ತೆ ವಿದ್ಯುತ್ ಇಲ್ಲದೇ ಪರಿತಪ್ಪಿಸುತ್ತಿದ್ದಾರೆ.

ಹೌದು. ಕೊಡಗು (Kodagu) ಜಿಲ್ಲೆಯ ಸಂಪಾಜೆ (Sampaje) ಗ್ರಾ.ಪಂ ವ್ಯಾಪ್ತಿಯ ಬಂಡಡ್ಕ ಗ್ರಾಮದಲ್ಲಿ (Bandadka) ಸುಮಾರು ನೂರಾರು ವರ್ಷಗಳಿಂದ ಐದು ಮನೆಯ ಕುಟುಂಬ ಸದಸ್ಯರು ಜೀವನ ನಡೆಸುತ್ತಿದ್ದಾರೆ. ಇವರಿಗೆ ಈವರೆಗೂ ರಸ್ತೆ ಆಗಲಿ, ವಿದ್ಯುತ್ ಸೌಕರ್ಯವಾಗಲಿ ಸಿಕ್ಕಿಲ್ಲ. ಅದರಲ್ಲೂ ಪ್ರತಿ ಮಳೆಗಾಲದ (Rain) ಸಂದರ್ಭದಲ್ಲಿ ಅನಾರೋಗ್ಯ ಸಮಸ್ಯೆ ಉಂಟಾದರೆ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಆಗದ ಪರಿಸ್ಥಿತಿ ನಿರ್ಮಾಣವಾಗುತ್ತೆ. ಇಲ್ಲಿನ ಮಕ್ಕಳು ಮಳೆಗಾಲ ಅರಂಭವಾಗಿ ಮಳೆ ಕಡಿಮೆ ಅಗುವವರೆಗೂ ಶಾಲಾ-ಕಾಲೇಜು, ಅಂಗನವಾಡಿಗಳಿಗೂ ತೆರಳದೇ ಮನೆಯಲ್ಲೇ ಇರುವ ಪರಿಸ್ಥಿತಿ ಇದೆ. ತುರ್ತು ಪರಿಸ್ಥಿತಿ ಎದುರಾದ್ರೆ ಇಲ್ಲಿನ ಜನ ಈ ಪಯಸ್ವಿನಿ ನದಿಗೆ (Payaswini River) ಅಡ್ಡಲಾಗಿ ಕಟ್ಟಿದ ಹಗ್ಗವನ್ನು ಹಿಡಿದು ಜೀವದ ಹಂಗು ತೊರೆದು ದಾಟುವ ಸ್ಥಿತಿ ಇದೆ.

ಈ ಬಂಡಡ್ಕ ಗ್ರಾಮದ ಜನರು ಅರಣ್ಯ ಪ್ರದೇಶದಲ್ಲಿ ವಾಸ ಇದ್ದಾರೆ ಅನ್ನೋ ಒಂದೇ ಒಂದು ಕಾರಣಕ್ಕೆ ಇಂದಿಗೂ ಇವರಿಗೆ ಸರ್ಕಾರದಿಂದ ಯಾವ ಸೌಲಭ್ಯಗಳು ಸಿಕ್ಕಿಲ್ಲ. ಕೇವಲ ಇವರ ಬಳಿ ಹಕ್ಕು ಪತ್ರ ಮಾತ್ರ ಇದೆಯೇ ಹೊರತು ಬೇರೆ ಯಾವ ಸೌಲಭ್ಯ ಪಡೆಯಲು ಆಗುತ್ತಿಲ್ಲ. ಮಳೆಗಾಲದ ಸಂದರ್ಭ ನ್ಯಾಯಬೆಲೆ ಅಂಗಡಿಗೆ ಹೋಗಿ ರೇಷನ್ ತರಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಪ್ರತಿ ಮಳೆಗಾಲದ ಸಂದರ್ಭದಲ್ಲಿ ಶಂಖಪಾಲ ಸೇತುವೆ ಮಾಡಿಕೊಳ್ಳಲು 20 ಸಾವಿರ ಹಣವನ್ನ ಗ್ರಾ.ಪಂ. ನೀಡುತ್ತೆ. ಆದರೆ ಜೋರು ಮಳೆ ಬರುವ ಸಂದರ್ಭದಲ್ಲಿ ಬಿದಿರಿನಿಂದ ಮಾಡಿರುವ ಸೇತುವೆ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತದೆ. ಹೀಗಾಗಿ ಮಳೆಗಾಲ ಕಳೆಯುವವರೆಗೂ ಇಲ್ಲಿನ ನಿವಾಸಿಗಳು ಹೊರ ಜಗತ್ತಿಗೆ ಬರೋದೆ ಇಲ್ಲ. ಒಟ್ಟಿನಲ್ಲಿ ಆಧುನಿಕ ಜಗತ್ತು ಬೆಳೆಯುತ್ತಿದ್ದರೂ ಇಲ್ಲಿಯ ಜನಗಳಿಗೆ ಮಾತ್ರ ಅಧುನಿಕತೆಯೊಂದಿಗೆ ಮೂಲಭೂತ ಸೌಕರ್ಯ ನೀಡದೇ ಇರುವುದು ಅಡಳಿತ ವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist