ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'Man of the Hole' 'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!

Twitter
Facebook
LinkedIn
WhatsApp
‘Man of the Hole’ ‘ವಿಶ್ವದ ಏಕಾಂಗಿ ವ್ಯಕ್ತಿ’ ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!

ಬ್ರೆಸಿಲಿಯಾ: ‘ವಿಶ್ವದ ಏಕಾಂಗಿ ವ್ಯಕ್ತಿ’ (‘Man of the Hole’) ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟು ಕಾಡು ಅಮೇಜಾನ್ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬುಡಕಟ್ಟು ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್‌ನ ಅಮೆಜಾನ್ ಕಾಡುಗಳಲ್ಲಿ ಸಂಪೂರ್ಣವಾಗಿ ಏಕಾಂಗಿಯಾಗಿ ವಾಸಿಸುತ್ತಿದ್ದ ಕಾರಣ “ವಿಶ್ವದ ಏಕಾಂಗಿ ವ್ಯಕ್ತಿ” ಎಂದೇ ಕರೆಯಲ್ಪಡುತ್ತಿದ್ದ ಸ್ಥಳೀಯ ಬುಡಕಟ್ಟು ಸದಸ್ಯ ಶವವಾಗಿ ಪತ್ತೆಯಾಗಿದ್ದಾನೆ. ವಯೋಸಹಜ ಆರೋಗ್ಯ ಸಮಸ್ಯೆ ಮತ್ತು ನೈಸರ್ಗಿಕ ಸಮಸ್ಯೆಗಳಿಂದ ಈ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ತಜ್ಞರು ಶಂಕಿಸಿದ್ದಾರೆ. ಪ್ರಾಣಿಗಳನ್ನು ಬೇಟೆಯಾಡಲು ಮತ್ತು ಅಡಗಿಕೊಳ್ಳಲು ತನ್ನದೇ ವಿಶೇಷ ಶೈಲಿಯಲ್ಲಿ ಕಂದಕಗಳನ್ನು ಅಗೆದಿದ್ದ “ಇಂಡಿಯನ್ ಆಫ್ ದಿ ಹೋಲ್” ಖ್ಯಾತಿಯ ಅಜ್ಞಾತ ಬುಡಕಟ್ಟಿನ ಕೊನೆಯ ವ್ಯಕ್ತಿ ಇದೀಗ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ.

ಸರ್ಕಾರದ ಸ್ಥಳೀಯ ಸಂಸ್ಥೆಯಾದ ಫುನೈ ಪ್ರಕಾರ, ಅವರು ಆಗಸ್ಟ್ 24 ರಂದು ಅವರ ಗುಡಿಸಲಿನಲ್ಲಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಮೂಲತಃ ಬ್ರೆಜಿಲಿಯನ್ ಆಗಿರುವ ಈ ವ್ಯಕ್ತಿಯ ಹೆಸರು ಮತ್ತು ಅವರು ಮಾತನಾಡುವ ಭಾಷೆ ಎಂದಿಗೂ ಯಾರಿಗೂ ತಿಳಿದಿಲ್ಲ, ಫುನೈ ಮೇಲ್ವಿಚಾರಣೆಯ ಕಾಡಿನಲ್ಲಿ ಸ್ವಯಂಪ್ರೇರಿತವಾಗಿ ಪ್ರತ್ಯೇಕವಾಗಿ ಅವರು ವಾಸಿಸುತ್ತಿದ್ದರು.

ಈ ಬುಡಕಟ್ಟು ವ್ಯಕ್ತಿ ಸ್ವಂತವಾಗಿ ಅಮೇಜಾನ್ ಕಾಡಿನಲ್ಲಿ ಅಜ್ಞಾತವಾಗಿ ವಾಸಿಸುತ್ತಿದ್ದರು. ಕಾಡಿನ ತುಂಬೆಲ್ಲಾ ನಿರಂತರವಾಗಿ ಓಡುತ್ತಿದ್ದರು. ಈ ಸ್ಥಳೀಯ ವ್ಯಕ್ತಿ 26 ವರ್ಷಗಳ ಹಿಂದೆ ಬೊಲಿವಿಯಾದ ಗಡಿಯ ಸಮೀಪವಿರುವ ರೊಂಡೋನಿಯಾ ರಾಜ್ಯದ ಕಾಡಿನಲ್ಲಿ ನೆಲೆಸಿದ್ದ ಎಂದು ಲಾ ಪ್ರೆನ್ಸಾ ವರದಿ ಮಾಡಿದೆ. ಅಂತೆಯೇ ಈತನ ಗುಡಿಸಲಿನ ಬಳಿ ಇತರ ಜನರ ಉಪಸ್ಥಿತಿಯನ್ನು ಸೂಚಿಸುವ ಯಾವುದೇ ಕುರುಹುಗಳು ಕಂಡುಬಂದಿಲ್ಲ ಎಂದು ಸಂಸ್ಥೆ ಹೇಳಿದೆ. ಅವರು ಬಳಸಿದ ಪಾತ್ರೆಗಳು ತಮ್ಮ ಎಂದಿನ ಸ್ಥಳಗಳಲ್ಲಿದ್ದರಿಂದ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಅವರದ್ದು ಸಹಜ ಸಾವು ಎನ್ನಲಾಗಿದೆ. ಆದಾಗ್ಯೂ ವಿಧಿವಿಜ್ಞಾನ ತಜ್ಞರು ಅವರ ಸಾವಿನ ಕಾರಣವನ್ನು ಗುರುತಿಸಲು ಶವಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ.

ಬ್ರೆಜಿಲಿಯನ್ ಕಾಡಿನಲ್ಲಿ, ನಾಡಿನ ನೇರ ಸಂಪರ್ಕವನ್ನು ತಪ್ಪಿಸುವ ಮೂಲಕ ಪ್ರತ್ಯೇಕವಾಗಿ ವಾಸಿಸುವ ಕನಿಷ್ಠ 114 ಸ್ಥಳೀಯ ಜನರನ್ನು ಗುರುತಿಸಲಾಗಿದೆ. ಸ್ಥಳೀಯ ಹಕ್ಕುಗಳ ಗುಂಪು ಸರ್ವೈವಲ್ ಇಂಟರ್‌ನ್ಯಾಶನಲ್ ವರದಿ ಮಾಡಿರುವಂತೆ 2009ರ ಕೊನೆಯಲ್ಲಿ ಈ ವ್ಯಕ್ತಿಯನ್ನು “ಬಂದೂಕುಧಾರಿಗಳಿಂದ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಅವನ ಬುಡಕಟ್ಟಿನ ಬಹುಪಾಲು ಜನರು 1970 ಮತ್ತು 80 ರ ದಶಕದಲ್ಲಿ ಹತ್ತಿರದ ರಸ್ತೆಯನ್ನು ನಿರ್ಮಿಸಿದ ನಂತರ ಕೊಲ್ಲಲ್ಪಟ್ಟರು ಎಂದು ನಂಬಲಾಗಿದೆ. ವ್ಯಾಪಾರ ಉದ್ದೇಶಗಳಿಂದಾಗಿ ಇಲ್ಲಿನ ಭೂಮಿಗೆ ಬೇಡಿಕೆ ಹೆಚ್ಚಾಯಿತು. ಬ್ರೆಜಿಲ್‌ನಲ್ಲಿರುವ ಅಮೆಜಾನ್ ಮಳೆಕಾಡು ಪ್ರಪಂಚದ ಎಲ್ಲಕ್ಕಿಂತ ಹೆಚ್ಚು ಸಂಪರ್ಕವಿಲ್ಲದ ಬುಡಕಟ್ಟು ಜನಾಂಗಗಳ ನೆಲೆಯಾಗಿದೆ ಎಂದು ಸರ್ವೈವಲ್ ಇಂಟರ್‌ನ್ಯಾಶನಲ್ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist