ಭಾನುವಾರ, ಮೇ 19, 2024
ಬಿಜೆಪಿಯ ಗಟ್ಟಿ ವಲಯಗಳಲ್ಲಿ ಒಮ್ಮಿಂದೊಮ್ಮೆಲೆ ನರೇಂದ್ರ ಮೋದಿ ಜನಪ್ರಿಯತೆ ಕುಸಿದು ಹೋಯಿತೇ?-ಮ್ಯಾಕ್ಸ್ ವೆಲ್ ಗ್ರೇಟ್ ಕಮ್ ಬ್ಯಾಕ್ ;ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು-Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

'Man of the Hole' 'ವಿಶ್ವದ ಏಕಾಂಗಿ ವ್ಯಕ್ತಿ' ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!

Twitter
Facebook
LinkedIn
WhatsApp
‘Man of the Hole’ ‘ವಿಶ್ವದ ಏಕಾಂಗಿ ವ್ಯಕ್ತಿ’ ಬ್ರೆಜಿಲ್ ನ ಅಮೇಜಾನ್ ಕಾಡಿನಲ್ಲಿ ನಿಧನ!

ಬ್ರೆಸಿಲಿಯಾ: ‘ವಿಶ್ವದ ಏಕಾಂಗಿ ವ್ಯಕ್ತಿ’ (‘Man of the Hole’) ಎಂದೇ ಕರೆಯಲಾಗುತ್ತಿದ್ದ ಜಗತ್ತಿನ ಅತ್ಯಂತ ದಟ್ಟು ಕಾಡು ಅಮೇಜಾನ್ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿದ್ದ ಬುಡಕಟ್ಟು ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬ್ರೆಜಿಲ್‌ನ ಅಮೆಜಾನ್ ಕಾಡುಗಳಲ್ಲಿ ಸಂಪೂರ್ಣವಾಗಿ ಏಕಾಂಗಿಯಾಗಿ ವಾಸಿಸುತ್ತಿದ್ದ ಕಾರಣ “ವಿಶ್ವದ ಏಕಾಂಗಿ ವ್ಯಕ್ತಿ” ಎಂದೇ ಕರೆಯಲ್ಪಡುತ್ತಿದ್ದ ಸ್ಥಳೀಯ ಬುಡಕಟ್ಟು ಸದಸ್ಯ ಶವವಾಗಿ ಪತ್ತೆಯಾಗಿದ್ದಾನೆ. ವಯೋಸಹಜ ಆರೋಗ್ಯ ಸಮಸ್ಯೆ ಮತ್ತು ನೈಸರ್ಗಿಕ ಸಮಸ್ಯೆಗಳಿಂದ ಈ ವ್ಯಕ್ತಿ ಸಾವನ್ನಪ್ಪಿರಬಹುದು ಎಂದು ತಜ್ಞರು ಶಂಕಿಸಿದ್ದಾರೆ. ಪ್ರಾಣಿಗಳನ್ನು ಬೇಟೆಯಾಡಲು ಮತ್ತು ಅಡಗಿಕೊಳ್ಳಲು ತನ್ನದೇ ವಿಶೇಷ ಶೈಲಿಯಲ್ಲಿ ಕಂದಕಗಳನ್ನು ಅಗೆದಿದ್ದ “ಇಂಡಿಯನ್ ಆಫ್ ದಿ ಹೋಲ್” ಖ್ಯಾತಿಯ ಅಜ್ಞಾತ ಬುಡಕಟ್ಟಿನ ಕೊನೆಯ ವ್ಯಕ್ತಿ ಇದೀಗ ನೈಸರ್ಗಿಕ ಕಾರಣಗಳಿಂದ ಸಾವನ್ನಪ್ಪಿದ್ದಾರೆ.

ಸರ್ಕಾರದ ಸ್ಥಳೀಯ ಸಂಸ್ಥೆಯಾದ ಫುನೈ ಪ್ರಕಾರ, ಅವರು ಆಗಸ್ಟ್ 24 ರಂದು ಅವರ ಗುಡಿಸಲಿನಲ್ಲಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಮೂಲತಃ ಬ್ರೆಜಿಲಿಯನ್ ಆಗಿರುವ ಈ ವ್ಯಕ್ತಿಯ ಹೆಸರು ಮತ್ತು ಅವರು ಮಾತನಾಡುವ ಭಾಷೆ ಎಂದಿಗೂ ಯಾರಿಗೂ ತಿಳಿದಿಲ್ಲ, ಫುನೈ ಮೇಲ್ವಿಚಾರಣೆಯ ಕಾಡಿನಲ್ಲಿ ಸ್ವಯಂಪ್ರೇರಿತವಾಗಿ ಪ್ರತ್ಯೇಕವಾಗಿ ಅವರು ವಾಸಿಸುತ್ತಿದ್ದರು.

ಈ ಬುಡಕಟ್ಟು ವ್ಯಕ್ತಿ ಸ್ವಂತವಾಗಿ ಅಮೇಜಾನ್ ಕಾಡಿನಲ್ಲಿ ಅಜ್ಞಾತವಾಗಿ ವಾಸಿಸುತ್ತಿದ್ದರು. ಕಾಡಿನ ತುಂಬೆಲ್ಲಾ ನಿರಂತರವಾಗಿ ಓಡುತ್ತಿದ್ದರು. ಈ ಸ್ಥಳೀಯ ವ್ಯಕ್ತಿ 26 ವರ್ಷಗಳ ಹಿಂದೆ ಬೊಲಿವಿಯಾದ ಗಡಿಯ ಸಮೀಪವಿರುವ ರೊಂಡೋನಿಯಾ ರಾಜ್ಯದ ಕಾಡಿನಲ್ಲಿ ನೆಲೆಸಿದ್ದ ಎಂದು ಲಾ ಪ್ರೆನ್ಸಾ ವರದಿ ಮಾಡಿದೆ. ಅಂತೆಯೇ ಈತನ ಗುಡಿಸಲಿನ ಬಳಿ ಇತರ ಜನರ ಉಪಸ್ಥಿತಿಯನ್ನು ಸೂಚಿಸುವ ಯಾವುದೇ ಕುರುಹುಗಳು ಕಂಡುಬಂದಿಲ್ಲ ಎಂದು ಸಂಸ್ಥೆ ಹೇಳಿದೆ. ಅವರು ಬಳಸಿದ ಪಾತ್ರೆಗಳು ತಮ್ಮ ಎಂದಿನ ಸ್ಥಳಗಳಲ್ಲಿದ್ದರಿಂದ ಯಾವುದೇ ಹಿಂಸಾಚಾರ ಅಥವಾ ಹೋರಾಟದ ಲಕ್ಷಣಗಳು ಕಂಡುಬಂದಿಲ್ಲ. ಹೀಗಾಗಿ ಅವರದ್ದು ಸಹಜ ಸಾವು ಎನ್ನಲಾಗಿದೆ. ಆದಾಗ್ಯೂ ವಿಧಿವಿಜ್ಞಾನ ತಜ್ಞರು ಅವರ ಸಾವಿನ ಕಾರಣವನ್ನು ಗುರುತಿಸಲು ಶವಪರೀಕ್ಷೆಗೆ ಮೃತದೇಹ ರವಾನಿಸಿದ್ದಾರೆ.

ಬ್ರೆಜಿಲಿಯನ್ ಕಾಡಿನಲ್ಲಿ, ನಾಡಿನ ನೇರ ಸಂಪರ್ಕವನ್ನು ತಪ್ಪಿಸುವ ಮೂಲಕ ಪ್ರತ್ಯೇಕವಾಗಿ ವಾಸಿಸುವ ಕನಿಷ್ಠ 114 ಸ್ಥಳೀಯ ಜನರನ್ನು ಗುರುತಿಸಲಾಗಿದೆ. ಸ್ಥಳೀಯ ಹಕ್ಕುಗಳ ಗುಂಪು ಸರ್ವೈವಲ್ ಇಂಟರ್‌ನ್ಯಾಶನಲ್ ವರದಿ ಮಾಡಿರುವಂತೆ 2009ರ ಕೊನೆಯಲ್ಲಿ ಈ ವ್ಯಕ್ತಿಯನ್ನು “ಬಂದೂಕುಧಾರಿಗಳಿಂದ ಕೆಟ್ಟದಾಗಿ ನಡೆಸಿಕೊಳ್ಳಲಾಗಿತ್ತು ಎನ್ನಲಾಗಿದೆ. ಅವನ ಬುಡಕಟ್ಟಿನ ಬಹುಪಾಲು ಜನರು 1970 ಮತ್ತು 80 ರ ದಶಕದಲ್ಲಿ ಹತ್ತಿರದ ರಸ್ತೆಯನ್ನು ನಿರ್ಮಿಸಿದ ನಂತರ ಕೊಲ್ಲಲ್ಪಟ್ಟರು ಎಂದು ನಂಬಲಾಗಿದೆ. ವ್ಯಾಪಾರ ಉದ್ದೇಶಗಳಿಂದಾಗಿ ಇಲ್ಲಿನ ಭೂಮಿಗೆ ಬೇಡಿಕೆ ಹೆಚ್ಚಾಯಿತು. ಬ್ರೆಜಿಲ್‌ನಲ್ಲಿರುವ ಅಮೆಜಾನ್ ಮಳೆಕಾಡು ಪ್ರಪಂಚದ ಎಲ್ಲಕ್ಕಿಂತ ಹೆಚ್ಚು ಸಂಪರ್ಕವಿಲ್ಲದ ಬುಡಕಟ್ಟು ಜನಾಂಗಗಳ ನೆಲೆಯಾಗಿದೆ ಎಂದು ಸರ್ವೈವಲ್ ಇಂಟರ್‌ನ್ಯಾಶನಲ್ ಹೇಳಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?

ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್? Twitter Facebook LinkedIn WhatsApp ಮಂಗಳೂರು: ಕೆಪಿಸಿಸಿಯ ಆಂತರಿಕ ಸರ್ವೆಯ ವರದಿ ಬಹಿರಂಗವಾಗಿದ್ದು,

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ