ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು : ಕಾರು ಪಾರ್ಕಿಂಗ್ ಮಾಡುವ ವೇಳೆ ಕಾರಿನ ಮುಂದೆ ಓಡಿ ಬಂದ ಮಗು ; ಚಕ್ರದಡಿ ಸಿಲುಕಿ ಮೃತ್ಯು!

Twitter
Facebook
LinkedIn
WhatsApp
ಮಂಗಳೂರು : ಕಾರು ಪಾರ್ಕಿಂಗ್ ಮಾಡುವ ವೇಳೆ ಕಾರಿನ ಮುಂದೆ ಓಡಿ ಬಂದ ಮಗು ; ಚಕ್ರದಡಿ ಸಿಲುಕಿ ಮೃತ್ಯು!

ಮಂಗಳೂರು: ಕಾರೊಳಗಿದ್ದ ಚಿಕ್ಕಪ್ಪನನ್ನು ಕಂಡ ಕೂಡಲೇ ಹಿಂಬಾಲಿಸಲು ಹೋದ ಮಗುವೊಂದು ಕಾರಿನ ಚಕ್ರದಡಿ ಸಿಲುಕಿ (Accident Case) ಮೃತಪಟ್ಟಿದೆ. ಈ ದುರ್ಘಟನೆ ಮಂಗಳೂರು ಗಡಿಭಾಗದ ಕಾಸರಗೋಡಿನ ಉಪ್ಪಳದ ಸೋಂಕಾಲ್ ಬಳಿ (Accident Case) ನಡೆದಿದೆ.

ಸೋಂಕಾಲ್ ನಿವಾಸಿ ನಿಝಾರ್ ತಸ್ರೀಫಾ ಎಂಬುವವರ ಒಂದೂವರೆ ವರ್ಷದ ಪುತ್ರ ಮಸ್ತುಲ್ ಜಿಶಾನ್ ದುರ್ಮರಣ ಹೊಂದಿದ್ದಾನೆ. ಮನೆಯ ಪಾರ್ಕಿಂಗ್‌ ಜಾಗದಲ್ಲಿ ಜಿಶಾನ್‌ ತನ್ನ ಅಣ್ಣನೊಂದಿಗೆ ಆಟವಾಡುತ್ತಿದ್ದ. ಇದೇ ವೇಳೆ ಜಿಶಾನ್‌ನ ಚಿಕ್ಕಪ್ಪ ಹೊರಗಿದ್ದ ಕಾರನ್ನು ಮನೆಯೊಳಗೆ ತಂದು ಪಾರ್ಕಿಂಗ್‌ ಮಾಡಲು ಮುಂದಾಗಿದ್ದರು.

ಚಿಕ್ಕಪ್ಪ ಕಾರಲ್ಲಿ ಬರುವುದನ್ನು ಕಂಡ ಕೂಡಲೇ ಓಡೋಡಿ ಬಂದ ಜಿಶಾನ್‌ ಕಾರಿನ ಮುಂದೆ ಬಂದು ನಿಂತಿದ್ದ. ಆದರೆ ಇದ್ಯಾವುದರ ಅರಿವು ಇರದ ಅವರು ಕಾರನ್ನು ಹಿಂದೆ ತೆಗೆದು ಮುಂದೆ ಬಂದಿದ್ದಾರೆ. ಈ ವೇಳೆ ಕಾರಿನ ಮುಂಭಾಗದ ಚಕ್ರ ಮಗುವಿನ ಮೈಮೇಲೆ ಹರಿದಿದೆ. ಈ ದೃಶ್ಯವೆಲ್ಲ ಮನೆಗೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕೂಡಲೇ ಮಗುವಿನ ಚಿಕ್ಕಪ್ಪ ಮಗುವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇತ್ತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಅಪಘಾತ ತಪ್ಪಿಸಲು ಹೋಗಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ರೂಸರ್‌; ಮೂವರು ದಾರುಣ ಸಾವು

ಧಾರವಾಡ: ಅವರೆಲ್ಲೂ ಕೂಲಿ ಕಾರ್ಮಿಕರು. ಕೆಲಸ ಮುಗಿಸಿ ಮನೆಗೆ ಮರುಳುತ್ತಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಮನೆಗೆ ಹೋಗಬೇಕಾದವರು ದಾರಿ ಮಧ್ಯೆಯೇ ಜೀವ ಬಿಟ್ಟಿದ್ದಾರೆ. ಬೈಕ್ ಹಾಗೂ ಕ್ರೂಸರ್ ವಾಹನದ ನಡುವೆ ಅಪಘಾತ (road Accident) ಸಂಭವಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಧಾರವಾಡ ತಾಲೂಕಿನ ಶಿವಳ್ಳಿ ಬಳಿ ಭಾನುವಾರ ರಾತ್ರಿ ಈ ಅಪಘಾತ ನಡೆದಿದೆ.

ಕ್ರೂಸರ್‌ನಲ್ಲಿದ್ದ ಬಸವರಾಜ್ ಕುರಹಟ್ಟಿ (45), ಯಲ್ಲಪ್ಪ ಗಂಟಿ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇತ್ತ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಅರುಣ್ ಎಂಬಾತ ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಬೈಕ್ ಸವಾರನ ಜೀವ ಉಳಿಸಲು ಹೋಗಿ ಅಪಘಾತ ನಡೆದಿದೆ ಎನ್ನಲಾಗಿದೆ. ಕ್ರೂಸರ್‌ ವಾಹನವು ಮೊದಲಿಗೆ ಬೈಕ್‌ಗೆ ಡಿಕ್ಕಿ ಹೊಡೆದಿದ್ದು ಬಳಿಕ ಮರಕ್ಕೆ ಗುದ್ದಿದೆ. ಈ ವೇಳೆ ಕ್ರೂಸರ್‌ನಲ್ಲಿದ್ದ ಕೂಲಿ ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ನವಲಗುಂದ ತಾಲೂಕಿನ ಜಾವೂರು, ಹೆಬ್ಬಾಳ ಗ್ರಾಮದ ಕೂಲಿ ಕಾರ್ಮಿಕರು ಧಾರವಾಡಕ್ಕೆ ಬಂದಿದ್ದರು. ಕೆಲಸ ಮುಗಿಸಿ ಮರಳಿ ಊರಿಗೆ ಹೋಗುವಾಗ ಈ ಅಪಘಾತ ಸಂಭವಿಸಿದೆ.

ಸದ್ಯ ಗಾಯಾಳುಗಳನ್ನು ಧಾರವಾಡದ ಸಿವಿಲ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಿವಿಲ್ ಆಸ್ಪತ್ರೆಗೆ ಶಾಸಕ ಎನ್ ಎಚ್ ಕೋನರೆಡ್ಡಿ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ