ಸೋಮವಾರ, ಮೇ 20, 2024
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!-ಸಿಎಂ ಸಿದ್ದರಾಮಯ್ಯಗೆ ಸೋಮಾರಿ ಸಿದ್ದು ಎಂದು ನಟ ಚೇತನ್ ಅಹಿಂಸಾ ವ್ಯಂಗ್ಯ..!-Gold Rate: ಇಂದಿನ ಚಿನ್ನಾಭರಣದ ಬೆಲೆ ಹೇಗಿದೆ; ಖರೀದಿಗೆ ಸೂಕ್ತವೇ.?-ಆರ್ಸಿಬಿ ಗೆ ಕಪ್ ಗೆಲ್ಲಲು ಮುಂದಿನ ಪಂದ್ಯ ಯಾವಾಗ; ಎದುರಾಳಿ ತಂಡ ಯಾವುದು.?-ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಹಾಗೂ ವಿದೇಶಾಂಗ ಸಚಿವರು ಹೆಲಿಕಾಪ್ಟರ್ ದುರಂತದಲ್ಲಿ ದುರ್ಮರಣ; ಇರಾನ್ ಮಾದ್ಯಮ ವರದಿ-ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ಮತ; ವೈರಲ್ ವಿಡಿಯೋ ಇಲ್ಲಿದೆ-ಅಭಿಷೇಕ್ ಶರ್ಮರಿಂದ ಕೊಹ್ಲಿ ದಾಖಲೆ ಉಡಿಸ್; ಹೈದರಾಬಾದಿಗೆ ಭರ್ಜರಿ ಗೆಲುವು..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಶೀಘ್ರದಲ್ಲೇ ಸಂಚರಿಸಿಲಿದೆ ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲು; ನಳೀನ್ ಕುಮಾರ್ ಕಟೀಲ್

Twitter
Facebook
LinkedIn
WhatsApp
ಶೀಘ್ರದಲ್ಲೇ ಸಂಚರಿಸಿಲಿದೆ ಮಂಗಳೂರು - ಬೆಂಗಳೂರು ವಂದೇ ಭಾರತ್ ರೈಲು; ನಳೀನ್ ಕುಮಾರ್ ಕಟೀಲ್

ರಾಜ್ಯ ರಾಜಧಾನಿ ಬೆಂಗಳೂರಿನಿಂದ -ಕರಾವಳಿಗೆ “ವಂದೇ ಭಾರತ್‌” ರೈಲು ಸೇವೆಯನ್ನು ವಿಸ್ತರಿಸಬೇಕೆಂಬುವುದು ಈ ಭಾಗದ ಜನರ ಬಹು ದಿನಗಳ ಬೇಡಿಕೆಯಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ ದೊರಕಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಬಗ್ಗೆ ನಳಿನ್ x ಮಾಡಿದ್ದು ” ಮಂಗಳೂರು – ಮಡಗಾಂ ವಂದೇ ಭಾರತ್ ರೈಲು ಓಡಾಟಕ್ಕೆ ಸರ್ವಸನ್ನದ್ಧವಾಗಿದ್ದು, ವೇಳಾಪಟ್ಟಿ ಯಾವುದೇ ಕ್ಷಣದಲ್ಲಿಯೂ ಬಿಡುಗಡೆಯಾಗಲಿದೆ. ಇನ್ನು ಮಂಗಳೂರು – ಬೆಂಗಳೂರು ವಂದೇ ಭಾರತ್ ರೈಲಿಗಾಗಿ ಮಾಡಿದ ಮನವಿ ಫಲಪ್ರದವಾಗಿದ್ದು, ಶೀಘ್ರದಲ್ಲಿ ಅದು ಕೂಡ ಈಡೇರಲಿದೆ. ಈ ಸಿಹಿಸುದ್ದಿಗಾಗಿ ಜಿಲ್ಲೆಯ ನಾಗರಿಕರ ಪರವಾಗಿ ಕೇಂದ್ರ ಸರಕಾರಕ್ಕೆ ಧನ್ಯವಾದಗಳು” ಎಂದು ಬರೆದುಕೊಂಡಿದ್ದಾರೆ.

ಕಾಸರಗೋಡು ತಿರುವನಂತಪುರಂ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಮಂಗಳೂರಿನ ತನಕ ವಿಸ್ತರಣೆ ಮಾಡಲು ಒತ್ತಾಯಕೇಳಿಬಂದಿತ್ತು. ಅಲ್ಲದೇ ರೈಲ್ವೆ ಇಲಾಖೆಯ ಮುಂದೆ ಮಂಗಳೂರು-ಮಡಗಾಂವ್, ಮಂಗಳೂರು-ಎರ್ನಾಕುಲಂ ನಡುವೆ ವಂದೇ ಭಾರತ್ ರೈಲು ಸಂಚಾರ ನಡೆಸುವ ಪ್ರಸ್ತಾವನೆ ಇತ್ತು. ಆದರೆ ಈಗ ಸಂಸದರು ಮಾಡಿರುವ ಟ್ವೀಟ್ ಅನ್ವಯ ಮಡಗಾಂವ್-ಮಂಗಳೂರು ನಡುವೆ ಹೊಸ ವಂದೇ ಭಾರತ್ ರೈಲು ಸಂಚಾರ ಶೀಘ್ರವೇ ಆರಂಭವಾಗಲಿದೆ. ಜೊತೆಗೆ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಓಡಿಸಬೇಕು ಎಂಬ ಕರಾವಳಿ ಭಾಗದ ಜನರು ಬೇಡಿಕೆಯೂ ಇಡೇರುವ ಲಕ್ಷಣ ಗೋಚರಿಸುತ್ತಿದೆ.

 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ