ಗುರುವಾರ, ನವೆಂಬರ್ 30, 2023
ಭಾರತದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಮರು ಆಯ್ಕೆ; ಬಿಸಿಸಿಐ ಘೋಷಣೆ!-ಪ್ರಿನ್ಸಿಪಾಲ್‌ ಕಿರುಕುಳಕ ಆರೋಪ ; ಮನನೊಂದು ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ!-ಕುಂದಾಪುರ : ಅಜ್ಜನ ಅಂತ್ಯಕ್ರಿಯೆಗೆ ಬರುತ್ತಿದ್ದ ವೇಳೆ ಬೈಕ್ ಅಪಘಾತವಾಗಿ ಎರಡು ಗಂಟೆಯ ಅಂತರದಲ್ಲಿ ಮೊಮ್ಮಗ ಸಾವು!-ಬಂಟ್ವಾಳ : ಒಂದೇ ದಿನ ನಾಪತ್ತೆಯಾಗಿದ್ದ ಅಕ್ಕಪಕ್ಕ ಮನೆಯ ಯುವಕ - ಯುವತಿ ಕೇರಳದಲ್ಲಿ ಪತ್ತೆ...!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-WWE ಸೂಪರ್ ಸ್ಟಾರ್ ಗೆ 17 ವರ್ಷಗಳ ಕಾಲ ಜೈಲು ಶಿಕ್ಷೆ ; ಏನಿದು ಪ್ರಕರಣ..!-ಬೈಕ್ ನಲ್ಲಿ ಬಂದು ಗುಂಡು ಹಾರಿಸುತ್ತಿದ್ದವರನ್ನು ಪೊರಕೆ ಹಿಡಿದು ಹೋಡಿಸಿದ ಮಹಿಳೆ ; ಇಲ್ಲಿದೆ ವಿಡಿಯೋ-ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದರ್ಶನಕ್ಕೆಂದು ಬಂದಿದ್ದ ಮಹಿಳೆ ಹೃದಯಾಘಾತದಿಂದ ಸಾವು!-ಗುಲಾಬ್‌ ಜಾಮೂನ್‌ನಲ್ಲಿ ಬಿಳಿ ಹುಳ ; ವಿಡಿಯೋ ವೈರಲ್-ಚೀನಾದಲ್ಲಿ ಇನ್‌‌ಫ್ಲುಯೆನ್ಸಾ ವೈರಸ್ ಭೀತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು!

Twitter
Facebook
LinkedIn
WhatsApp
ಮಂಗಳೂರು: ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು!

ಮಂಗಳೂರು ಮಂಗಳಾದೇವಿ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ವಿಚಾರಕ್ಕೆ ಸಂಬಂಧಪಟ್ಟಂತೆ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ ವೆಲ್ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ. ಹೌದು, ಮುಸ್ಲಿಮರ ಜೊತೆ ವ್ಯಾಪಾರ ಮಾಡದಂತೆ ಕರೆ ಕೊಟ್ಟಿದ್ದು, ಜೊತೆಗೆ ಮಂಗಳಾದೇವಿಯ ಹಿಂದೂಗಳ ಸ್ಟಾಲ್​ಗಳಿಗೆ ಭಗವಾನ್​ಧ್ಬಜ ಕಟ್ಟಿ, ಭಗವಾನ್​ಧ್ಬಜ ಇದ್ದ ಸ್ಟಾಲ್​ಗಳಲ್ಲೇ ವ್ಯಾಪಾರ ನಡೆಸಬೇಕು ಎಂದು ಕರೆ ಕೊಟ್ಟಿದ್ದ ಹಿನ್ನಲೆ ಶರಣ್ ಪಂಪ್ ವೆಲ್ ವಿರುದ್ದ ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲು ಮಾಡಿದ್ದಾರೆ.

ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ

ಅ.16ರಂದು ಮಂಗಳಾದೇವಿಯ ರಥಬೀದಿಯ ಹಿಂದೂಗಳ ಸ್ಟಾಲ್​ಗಳಿಗೆ ವಿಶ್ವ ಹಿಂದೂ ಪರಿಷತ್ ಭಗವಾನ್​ಧ್ಬಜ ಕಟ್ಟಿದ್ದರು. ಶಾಂತಿಭಂಗ ಹಾಗೂ ಕೋಮು ಪ್ರಚೋದನೆ ಆರೋಪದಡಿ ಪ್ರಕರಣ ದಾಖಲು ಮಾಡಿಕೊಂಡು,​ ಐಪಿಸಿ 153A, 34 ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇಂದು ಜಾತ್ರಾ ವ್ಯಾಪಾರಸ್ಥರು, ಬೀದಿ ವ್ಯಾಪಾರಿಗಳು ಹಾಗೂ ಡಿವೈಎಫ್ಐ, ಎಡಪಂಥೀಯ ಸಂಘಟನೆಗಳ ನಿಯೋಗ, ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿದ್ದರು. ಸಚಿವ ದಿನೇಶ್ ಗುಂಡೂರಾವ್ ಎದುರು ಡಿವೈಎಫ್ಐ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದರು. 

ಶರಣ್ ಪಂಪ್ ವೆಲ್ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲು ಆಗ್ರಹಿಸಿದ್ದರು. ಆ ಬಳಿಕ‌ ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಕರೆದು ಕಾನೂನು ಕ್ರಮಕ್ಕೆ ಗುಂಡೂರಾವ್ ಸೂಚಿಸಿದ್ದರು. ಇದರ ಬೆನ್ನಲ್ಲೇ ಶರಣ್ ಪಂಪ್ ವೆಲ್ ಸೇರಿ ಇನ್ನಿತರ ಕೆಲ ಮುಖಂಡರ ವಿರುದ್ದ ಎಫ್ಐಆರ್ ದಾಖಲು ಮಾಡಲಾಗಿದೆ.

ಮಂಗಳಾದೇವಿ ದೇವಸ್ಥಾನದ ನವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧಿಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿತ್ತು. ಈ ಹಿನ್ನಲೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಮಧ್ಯೆ ಪ್ರವೇಶಿಸಿದ ಜಿಲ್ಲಾಡಳಿತ ಹಿಂದೂಯೇತರರಿಗೂ ಅಂಗಡಿ ಇಡಲು ಅನುಮತಿ ನೀಡಲಾಗಿತ್ತು. ಇದರ ಬೆನ್ನಲ್ಲೇ ಮಂಗಳಾದೇವಿ ದೇವಸ್ಥಾನದ ಎಲ್ಲಾ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮುಂದೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೇಸರಿ ಧ್ವಜ ಹಾಕಿದ್ದರು. ಬಳಿಕ ಮಾತನಾಡಿದ್ದ ವಿಹೆಚ್‌ಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹೆಚ್.ಕೆ.ಪುರುಷೋತ್ತಮ ದತ್ತನಗರ ‘ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ, ಹಬ್ಬ ಹರಿದಿನಗಳಲ್ಲಿ ಹಿಂದೂ ವ್ಯಾಪಾರಿಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಕಲ್ಪಿಸಬೇಕು. “ಹಬ್ಬದ ಸಂದರ್ಭದಲ್ಲಿ ಹಿಂದೂ ವ್ಯಾಪಾರಿಗಳಿಗೆ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಿದ ಮಂಗಳಾದೇವಿ ದೇವಸ್ಥಾನದ ಆಡಳಿತ ಮಂಡಳಿಗೆ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ. ಆದರೆ, ಜಿಲ್ಲಾಡಳಿತದ ವತಿಯಿಂದ ಮರು ಹರಾಜಿನಲ್ಲಿ ಹಿಂದೂಯೇತರಗೂ ಮಳಿಗೆಗಳನ್ನು ಹಾಕಲು ಅವಕಾಶ ನೀಡಿರುವುದು ಸರಿಯಲ್ಲ ಎಂದು ಹೇಳಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ