ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಐತಿಹಾಸಿಕ 34 ನೇ ವರ್ಷದ 'ಮಂಗಳೂರು ದಸರಾ' ಅಕ್ಟೋಬರ್ 15ರಿಂದ ಪ್ರಾರಂಭ!

Twitter
Facebook
LinkedIn
WhatsApp
ಐತಿಹಾಸಿಕ 34 ನೇ ವರ್ಷದ 'ಮಂಗಳೂರು ದಸರಾ' ಅಕ್ಟೋಬರ್ 15ರಿಂದ ಪ್ರಾರಂಭ!

ಮಂಗಳೂರು: ಐತಿಹಾಸಿಕ 34 ನೇ ವರ್ಷದ ಮಂಗಳೂರು ದಸರಾ ಅಕ್ಟೋಬರ್ 15ರಿಂದ ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ಪ್ರಾರಂಭವಾಗುತ್ತಿದ್ದು ಸಿದ್ದತೆಗಳು ಭರದಿಂದ ಸಾಗಿವೆ. ಈ ಬಾರಿಯ ದಸರಾ ಸಿದ್ದತೆಗಳ ಬಗ್ಗೆ ದೇವಳದ ಅಧ್ಯಕ್ಷ ಹೆಚ್.ಎಸ್. ಸಾಯಿರಾಂ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ನವರಾತ್ರಿ ಮಹೋತ್ಸವ ಕಳೆದ 33 ವರ್ಷಗಳಿಂದ ವರ್ಷಂಪ್ರತಿ ಕ್ಷೇತ್ರದಲ್ಲಿ ನಡೆಯುತ್ತಿದ್ದು ಈ ಬಾರಿಯೂ ವಿಶ್ವವಿಖ್ಯಾತ “ಮಂಗಳೂರು ದಸರಾ” ಶ್ರೀ ಕ್ಷೇತ್ರದ ನವೀಕರಣದ ರುವಾರಿ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಇದೇ ತಿಂಗಳ ಅ.15ರಂದು ಶ್ರೀ ಗಣೇಶ, ನವದುರ್ಗೆ ಮತ್ತು ಶ್ರೀ ಶಾರದಾ ಮಾತೆಯ
ಮೂರ್ತಿ ಪ್ರತಿಷ್ಠಾಪನೆಗೊಳಿಸಿ ಪ್ರಾರಂಭವಾಗಲಿದೆ” ಎಂದರು.

ಬಳಿಕ ಮಾತಾಡಿದ ಕೋಶಾಧಿಕಾರಿ ಪದ್ಮರಾಜ್ ಆರ್. ಅವರು, “ದಸರಾ ಮಹೋತ್ಸವವು ಅ.25ರವರೆಗೆ ನಾನಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ನಡೆಯಲಿದ್ದು, ಅ. 24ರಂದು 4 ಗಂಟೆಗೆ ಸರಿಯಾಗಿ “ಮಂಗಳೂರು ದಸರಾ” ಮೆರವಣಿಗೆ ಮಾಜಿ ಸಚಿವ ಬಿ. ಜನಾರ್ಧನ ಪೂಜಾರಿಯವರ ಮಾರ್ಗದರ್ಶನದಲ್ಲಿ ಮಂಗಳೂರು ನಗರದ ರಾಜರಸ್ತೆಯಲ್ಲಿ ಸಾಗಿ ಶ್ರೀ ಕ್ಷೇತ್ರದ ಪುಷ್ಕರಿಣಿಯಲ್ಲಿ ಮೂರ್ತಿ ವಿಸರ್ಜನೆ ನಡೆಯಲಿದೆ.

ಅ.15ರಿಂದ ಅಕ್ಟೋಬರ 23ರವರೆಗೆ ದಿನಂಪ್ರತಿ ಸಂಜೆ 6.00 ರಿಂದ ರಾತ್ರಿ 9.00 ಗಂಟೆಯವರೆಗೆ ಪ್ರಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ನಡೆಯಲಿದೆ.

ಮಂಗಳೂರು ದಸರಾ ಮೆರವಣಿಗೆಯಲ್ಲಿ ಜಿಲ್ಲೆ ಹಾಗೂ ರಾಜ್ಯದ ಹಲವಾರು ಕಡೆಗಳಿಂದ ಬರುವ ಭಾರತೀಯ ಸನಾತನ ಧರ್ಮದ, ಇತಿಹಾಸ ಭಾವದ ನೆನಪುಗಳನ್ನು ಸ್ಮರಿಸುವ ವಿಶೇಷ ಟ್ಯಾಬ್‌ ಗಳು ಭಾಗವಹಿಸಲಿದ್ದು ಈ ಸುಂದರ ಮೆರವಣಿಗೆ ವಿಶೇಷ ಮೆರುಗು ನೀಡಲಿದೆ.

ಸಾಂಸ್ಕೃತಿಕ ಮೆರವಣಿಗೆ ಸಾಗುವ ರಸ್ತೆಯ ಎರಡೂ ಬದಿಗಳಲ್ಲಿರುವ ಎಲ್ಲಾ ಕಟ್ಟಡದ ಮಾಲಕರು ತಮ್ಮ ತಮ್ಮ ಕಟ್ಟಡಗಳನ್ನು ವಿದ್ದುದ್ದೀಪದಿಂದ ಅಲಂಕರಿಸಿ “ಮಂಗಳೂರು ದಸರಾ” ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಹರಿಕೃಷ್ಣ ಬಂಟ್ವಾಳ್, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ್ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನುಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಮಂಗಳೂರು ದಸರಾ ಹಬ್ಬಕ್ಕೆ ಪದವಿ ವಿದ್ಯಾರ್ಥಿಗಳಿಗೂ ರಜೆ ನೀಡಿ: ಶಾಸಕ ಕಾಮತ್ ಆಗ್ರಹ

ಮಂಗಳೂರು ಅಕ್ಟೋಬರ್ 05: ಮಂಗಳೂರು ಇನ್ನು ಕೆಲವೇ ದಿನಗಳಲ್ಲಿ ದಸರಾ ಹಬ್ಬದ ಸಂಭ್ರಮದಲ್ಲಿ ತೇಲಲಿದ್ದು ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ರಜೆ ನೀಡಿದ್ದು ಸ್ವಾಗತಾರ್ಹ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಇನ್ನೂ ಸಹ ರಜೆ ಘೋಷಿಸದಿರುವುದು ಹಬ್ಬದ ಸಂಭ್ರಮ ಸವಿಯಲು ಅಡ್ಡಿಯಾಗಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ತಿಳಿಸಿದರು.

ಈಗಾಗಲೇ ಮಂಗಳೂರು ದಸರಾ ಹಬ್ಬಕ್ಕೆ ಪೂರಕವಾಗುವಂತೆ ಪದವಿ ವಿದ್ಯಾರ್ಥಿಗಳಿಗೆ ರಜೆ ನೀಡುವ ಬಗ್ಗೆ ಸಂಬಂಧಪಟ್ಟವರಿಗೆ ಒತ್ತಾಯಿಸಲು ಹಲವಾರು ಪೋಷಕರು ನನ್ನ ಬಳಿ ಮನವಿ ಮಾಡಿದ್ದು ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾಡಳಿತ, ಹಾಗೂ ಸರ್ಕಾರಕ್ಕೆ ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ ಎಂದು ತಿಳಿಸಿದರು.

ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ದಸರಾ ಹಬ್ಬದ ರಜೆಯಲ್ಲಿ ಉಂಟಾಗಿದ್ದ ವ್ಯತ್ಯಾಸವನ್ನು ಸರ್ಕಾರದ ಮಟ್ಟದಲ್ಲಿಯೇ ಮಾರ್ಪಾಡುಗೊಳಿಸುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು ಹಿಂದೂ ಧಾರ್ಮಿಕ ಶ್ರದ್ದಾ ಭಾವನೆಗಳಿಗೆ ಎಷ್ಟು ಬೆಲೆ ಕೊಡುತ್ತಾರೆ ಎಂಬುದನ್ನು ಗಮನಿಸಿದರೆ ಬೇಸರವಾಗುತ್ತದೆ.

ದಸರಾ ನಾಡಿನ ಅತ್ಯಂತ ಪ್ರಮುಖ ಹಬ್ಬವಾಗಿದ್ದು ಮಂಗಳೂರು ದಸರಾವು ಮೈಸೂರು ನಂತರ ಅತ್ಯಂತ ಜನಾಕರ್ಷಣೆ ಗಳಿಸಿರುವ ಹಬ್ಬವಾಗಿದೆ. ಹೀಗಾಗಿ ನವರಾತ್ರಿಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು, ಸೇರಿದಂತೆ ಎಲ್ಲರೂ ಸಂಭ್ರಮದಿಂದ ಆಚರಿಸುವಂತಾಗಲು ರಜೆ ನೀಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist