ಶುಕ್ರವಾರ, ಮಾರ್ಚ್ 14, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು : ಕಡಲ ಅಲೆಗಳ ಹೊಡೆತಕ್ಕೆ ಮೂವರು ಯುವಕರು ಸಮುದ್ರಪಾಲು..!

Twitter
Facebook
LinkedIn
WhatsApp
ಮಂಗಳೂರು : ಕಡಲ ಅಲೆಗಳ ಹೊಡೆತಕ್ಕೆ ಮೂವರು ಯುವಕರು ಸಮುದ್ರಪಾಲು..!

ತೂಫಾನ್‌ ರೀತಿಯ ಬಲ ವಾದ ಗಾಳಿಯಿಂದ ಪ್ರಕ್ಷುಬ್ಧಗೊಂಡಿದ್ದ ಕಡಲ ಅಲೆಗಳ ಹೊಡೆತಕ್ಕೆ ಸಿಲುಕಿ ಪಿಯುಸಿ ವಿದ್ಯಾರ್ಥಿ ಸಹಿತ ಮೂವರು ಯುವಕರು ಸಮುದ್ರಪಾಲಾದ ಘಟನೆ ಪಣಂಬೂರಿನಲ್ಲಿ ರವಿವಾರ ಸಂಜೆ ಸಂಭವಿಸಿದೆ.

ಕೈಕಂಬ ರೋಸಾ ಮಿಸ್ತಿಕಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಲಿಖಿತ್‌ (18), ಖಾಸಗಿ ಸಂಸ್ಥೆಯೊಂದರಲ್ಲಿ ಡೆಲಿವರಿ ಕೆಲಸ ಮಾಡುತ್ತಿದ್ದ ಮಿಲನ್‌ (20) ಹಾಗೂ ಬೈಕಂಪಾಡಿ ಮುಂಗಾರು ಜಂಕ್ಷನ್‌ನಲ್ಲಿರುವ ಎಂಎಂಆರ್‌ ಕಂಪೆನಿಯಲ್ಲಿ ಮೇಲ್ವಿಚಾರಕರಾಗಿದ್ದ ನಾಗರಾಜ್‌ (24) ನೀರುಪಾಲಾದವರು.

ಸ್ನೇಹಿತರಾಗಿದ್ದ ಯುವಕರು ರಜಾ ದಿನವಾದ ಕಾರಣ ರವಿವಾರ ವಿಹಾರಕ್ಕೆಂದು ಪಣಂಬೂರು ಬೀಚ್‌ಗೆ ಬಂದಿದ್ದರು. ಸಂಜೆ ನೀರಿನಲ್ಲಿ ಆಟವಾಡುತ್ತಿದ್ದಾಗ ಬೃಹತ್‌ ಗಾತ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ಸಮುದ್ರ ತೀರದಲ್ಲಿ ತೂಫಾನ್‌ ರೀತಿಯಲ್ಲಿ ಭಾರೀ ಗಾಳಿ ಬೀಸುತ್ತಿದ್ದು, ಬೃಹತ್‌ ಗಾತ್ರದ ಅಲೆಗಳು ಏಳುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ರವಿವಾರ ಭಾರೀ ಸಂಖ್ಯೆಯಲ್ಲಿ ಪ್ರವಾಸಿಗರು ಕೂಡ ಸಮುದ್ರ ತೀರಕ್ಕೆ ಆಗಮಿಸಿದ್ದು, ರಕ್ಷಣ ಸಿಬಂದಿ ಕಡಿಮೆ ಸಂಖ್ಯೆಯಲ್ಲಿದ್ದರು. ಬೀಚ್‌ನಲ್ಲಿ ಮೂರು ದಿನದಿಂದ ಕಡಲೋತ್ಸವ ಆಯೋಜನೆ ಗೊಂಡಿದ್ದು, ಈ ಹಿನ್ನೆಲೆಯಲ್ಲಿಯೂ ಜನಸಂದಣಿ ಹೆಚ್ಚಿತ್ತು

ಪ್ರವಾಸಿಗರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿ ಸೈರನ್‌ ಮೊಳಗಿಸಲಾಗಿತ್ತು. ಆದರೆ ಈ ಯುವಕರು ರಕ್ಷಕ ಸಿಬಂದಿಯ ಕಣ್ಣು ತಪ್ಪಿಸಿ ಸಮುದ್ರಕ್ಕೆ ಈಜಾಡಲು ಹಾರಿದ್ದು, ಈ ವೇಳೆ ಅಲೆಗಳ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದರು ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಪಣಂಬೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಮುದ್ರಪಾಲಾಗಿರುವ ಮೂವರು ಸೇರಿದಂತೆ ಒಟ್ಟು ಐದು ಮಂದಿ ಜತೆಯಾಗಿ ಪಣಂಬೂರು ಬೀಚ್‌ಗೆ ತೆರಳಿದ್ದರು ಎನ್ನಲಾಗಿದೆ. ಇವರೆಲ್ಲರೂ ಅಂಬೇಡ್ಕರ್‌ ಕಾಲನಿ ನಿವಾಸಿಗಳಾಗಿದ್ದಾರೆ. ಸಮುದ್ರ ಪಾಲಾಗಿರುವ ಲಿಖೀತ್‌ ಪ್ರತಿಭಾವಂತ ವಿದ್ಯಾರ್ಥಿ. ಮೂಲತಃ ತಮಿಳುನಾಡಿನವರಾಗಿದ್ದು, ಕಳೆದ ಸುಮಾರು ಎರಡು ದಶಕಗಳಿಂದ ಈತನ ತಂದೆ -ತಾಯಿ ಪೊರ್ಕೊಡಿಯ ಅಂಬೇಡ್ಕರ್‌ ನಗರ ಕಾಲೊನಿಯಲ್ಲಿ ವಾಸಿಸುತ್ತಿದ್ದಾರೆ. ತಂದೆ ಮಣಿಕಂಠ ಟೈಲ್ಸ್‌ ಕೆಲಸ ಮಾಡುತ್ತಾರೆ. ತಾಯಿ ಗೃಹಿಣಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist