ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Mangaluru: ಹರೇಕಳ-ಅಡ್ಯಾರ್‌ ಕಿಂಡಿ ಅಣೆಕಟ್ಟು ಕಾಮಗಾರಿಗೆ ಹೈಕೋರ್ಟ್‌ ತಡೆ

Twitter
Facebook
LinkedIn
WhatsApp
Mangaluru: ಹರೇಕಳ-ಅಡ್ಯಾರ್‌ ಕಿಂಡಿ ಅಣೆಕಟ್ಟು ಕಾಮಗಾರಿಗೆ ಹೈಕೋರ್ಟ್‌ ತಡೆ

ಉಳ್ಳಾಲ (ಡಿ.14): ಭೂಸ್ವಾಧೀನ ಪ್ರಕ್ರಿಯೆ ನಡೆಸದೆ ಹಾಗೂ ಭೂಮಾಲೀಕರಿಗೆ ಪರಿಹಾರ ಧನವನ್ನು ನೀಡದೆ ನಡೆಸುತ್ತಿರುವ ಹರೇಕಳ- ಅಡ್ಯಾರ್‌ ಸಂಪರ್ಕ ಸೇತುವೆ ಹಾಗೂ ಅಣೆಕಟ್ಟು ನಿರ್ಮಾಣದ ಕಾಮಗಾರಿಯನ್ನು ತಕ್ಷಣಕ್ಕೆ ಸ್ಥಗಿತಗೊಳಿಸಿ, ಮುಂದಿನ ಆದೇಶದವರೆಗೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಉಚ್ಚ ನ್ಯಾಯಾಲಯ ಆದೇಶ ನೀಡಿದೆ.

ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯಡಿ ಅಡ್ಯಾರ್‌ -ಹರೇಕಳ ಸಂಪರ್ಕಿಸುವಲ್ಲಿ ನೇತ್ರಾವತಿ ನದಿಗೆ ಪಶ್ಚಿಮವಾಹಿನಿ ಯೋಜನೆಯಲ್ಲಿ ಸೇತುವೆ ಸಹಿತ ಉಪ್ಪು ನೀರು ತಡೆ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ 215.62 ಕೋಟಿ ರು. ಅನುದಾನದಲ್ಲಿ 2021ಕ್ಕೆ ಟೆಂಡರ್‌ ಆಗಿ 2020ರಲ್ಲಿ ಕಾಮಗಾರಿ ಆರಂಭಿಸಲಾಗಿತ್ತು. ಸೇತುವೆ ಕಾಮಗಾರಿ ಸಂಪೂರ್ಣ ಮುಗಿದಿದ್ದರೂ, ಎರಡು ಕಡೆಗಳಲ್ಲಿ ಸಂಪರ್ಕಿಸುವ ರಸ್ತೆಗೆ ಜಾಗದ ತಕರಾರು ಇರುವುದರಿಂದ ಉದ್ಘಾಟನೆಯಾಗಿರಲಿಲ್ಲ.

ಈ ನಡುವೆ ಸೇತುವೆ ಬದಿಯ ಭೂಮಾಲಕರಾಗಿರುವ ಕಡೆಂಜ ಮೋಹನದಾಸ್‌ ರೈ ಸೇರಿದಂತೆ ಐದು ಮಂದಿ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದರು. 2020ರಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆಯ ಸಹಾಯಕ ಅಭಿಯಂತರರು ಪತ್ರಿಕೆಯೊಂದರಲ್ಲಿ ನೀಡಿರುವ ಜಾಹೀರಾತಿನಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಗೊಳ್ಳಲಿರುವ ಪ್ರದೇಶದ ಸುತ್ತಲಿನ 110 ಎಕರೆ ಭೂಮಿ ನೀರಿನಿಂದ ಮುಳುಗುವ ಸಂಭವ ಇದೆ. ಈ ಭಾಗದ ಭೂಒತ್ತುವರಿ ಪ್ರಕ್ರಿಯೆ ತಕ್ಷಣದಿಂದ ಆರಂಭವಾಗಲಿದೆ. ಸ್ಥಳೀಯರು ಸಹಕರಿಸುವಂತೆ ಕೋರಿ ಪ್ರಕಟಣೆ ನೀಡಲಾಗಿತ್ತು.

ಆದರೆ ಸೇತುವೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದರೂ ಮುಳುಗಡೆಯಾಗಲಿರುವ ಪ್ರದೇಶದ ಭೂಒತ್ತುವರಿಯಾಗಲಿ, ಭೂಮಾಲಕರಿಗೆ ನೋಟಿಸ್‌ ನೀಡುವುದಾಗಲಿ, ಮಾಹಿತಿಯನ್ನು ನೀಡದೆ ಕಾಮಗಾರಿಯನ್ನು ಮುಂದುವರಿಸಲಾಗುತ್ತಿದೆ. ಈ ಬಗ್ಗೆ ಎರಡು ವರ್ಷಗಳ ಹಿಂದೆಯೇ ಹರೀಶ್‌ ಶೆಟ್ಟಿಎಂಬವರು ಮಾಹಿತಿ ಹಕ್ಕು ಕಾಯಿದೆಯಡಿ ಮಾಹಿತಿಯನ್ನು ಕೇಳಿದ್ದರೂ ಈವರೆಗೆ ಮಾಹಿತಿಗಳನ್ನು ನೀಡಲಾಗಿಲ್ಲ. ಮೂರು ತಿಂಗಳ ಹಿಂದೆ ಕಡೆಂಜ ಮೋಹನದಾಸ್‌ ರೈ ಅವರು ಮಾಹಿತಿಯನ್ನು ಕೇಳಿದ್ದರೂ ಈವರೆಗೂ ಮಾಹಿತಿಗಳು ದೊರಕಿಲ್ಲ. ಇವೆಲ್ಲದರ ನಡುವೆ ಏಕಾಏಕಿ ಸರ್ವೆ ಕಲ್ಲುಗಳನ್ನು ಹಾಕುವ ಕೆಲಸವಾಗಿದೆ ಎಂದು ಆರೋಪಿಸಲಾಗಿದೆ.

ಈ ಕುರಿತು ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ದಾವೆ ಹೂಡಲಾಗಿತ್ತು. ಈ ದಾವೆಗೆ ಆದೇಶ ಹೊರಡಿಸಿರುವ ಹೈಕೋರ್ಟ್‌ ನ್ಯಾಯಾಧೀಶರು, ಡಿ.16ರಂದು ಮುಂದಿನ ವಿಚಾರಣೆ ನಡೆಯಲಿದ್ದು, ಅಲ್ಲಿಯವರೆಗೆ ಯಾವುದೇ ಕಾಮಗಾರಿಗಳನ್ನು ನಡೆಸದೆ ಯಥಾಸ್ಥಿತಿಯನ್ನು ಕಾಪಾಡುವಂತೆ ಆದೇಶ ಹೊರಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ