ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು ಲೋಕಸಭೆ ಬಿಜೆಪಿ ಅಭ್ಯರ್ಥಿ: ಇನ್ನು ಗುಟ್ಟು ಬಿಟ್ಟುಕೊಡದ ಪಕ್ಷದ ಹೈಕಮಾಂಡ್!

Twitter
Facebook
LinkedIn
WhatsApp
ಮಂಗಳೂರು ಲೋಕಸಭೆ ಬಿಜೆಪಿ ಅಭ್ಯರ್ಥಿ: ಇನ್ನು ಗುಟ್ಟು ಬಿಟ್ಟುಕೊಡದ ಪಕ್ಷದ ಹೈಕಮಾಂಡ್!

ಮಂಗಳೂರು: ಮಂಗಳೂರು ಲೋಕಸಭೆಯ ಬಿಜೆಪಿ ಅಭ್ಯರ್ಥಿ ಯಾರಾಗಬಹುದೆಂಬ ಪ್ರಶ್ನೆಗೆ ಇನ್ನು ಉತ್ತರ ಸಿಕ್ಕಿಲ್ಲ.

ಬಿಜೆಪಿ ಹೈಕಮಾಂಡ್ ಇನ್ನೂ ಸಮರ್ಪಕವಾದಂತ ಕ್ಲೂ ಬಿಟ್ಟುಕೊಡದೆ ಸಸ್ಪೆನ್ಸ್ ಹಾಗೆ ಇಟ್ಟಿದೆ ಎನ್ನಲಾಗುತ್ತಿದೆ.

ನಳಿನ್ ಕುಮಾರ್ ಕಟೀಲ್, ಚೌಟ ನಡುವೆ ಸ್ಪರ್ಧೆ ಇದೆ ಎನ್ನಲಾಗುತ್ತಿದೆ. ಆದರೆ ಯಾರು ಅಭ್ಯರ್ಥಿಯಾಗಬಹುದು ಎಂಬ ಕುತೂಹಲ ಇನ್ನು ಮನೆ ಮಾಡಿದೆ

ನಳಿನ್ ಕುಮಾರ್ ಕಟೀಲ್ ಫಾರ್ ದಕ್ಷಿಣ ಕನ್ನಡ’ ಎಂಬ ಹ್ಯಾಷ್‌ಟ್ಯಾಗ್ ಟ್ವಿಟರ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದು, ಬಿಜೆಪಿ ಹಾಲಿ ಸಂಸದ ಕಟೀಲ್ ಅವರು ಮತ್ತೊಮ್ಮೆ ಸಂಸದರಾಗಬೇಕು ಎಂಬ ಕೂಗು ಕೇಳಿಬರುತ್ತಿದೆ.

ʻಉರಿಯೋರು ಭೂದಿಯಾಗ್ತಾರೆ, ಕುದಿಯೋರು ಆವಿಯಾಗ್ತಾರೆ. ಈ ಬಾರಿಯೂ ನಮ್ಮಣ್ಣ ನಳಿನ್‌ ಕುಮಾರ್‌ ಅವರೇ ಗೆಲ್ತಾರೆʼ, ʻಚಾಲ್ತಿಲಿ ಇಲ್ಲದ ನಾಣ್ಯ ಶಬ್ಧ ಜಾಸ್ತಿ. ಯಾರು ಎಷ್ಟೇ ಬೊಬ್ಬೆ ಹಾಕಿದ್ರೂ ನಮ್ಮಣ್ಣ ನಳಿನ್‌ ಅವರೇ 2024ಕ್ಕೆ MP. ಬರೆದಿಟ್ಕೊಳಿʼ ʻ ನಮ್ಗಂತೂ ಯಾವ ಫ್ರೀ ಸ್ಕೀಮೂ ಸಿಗ್ಲಿಲ್ಲ. ಆದ್ರೆ ಈ MP ಎಲೆಕ್ಷನ್ ಲ್ಲಿ ನಮ್ಮ ನಳಿನ್‌ ಅಣ್ಣನ ಗೆಲುವು ಸಂಭ್ರಮಿಸೋಕೆ ನಾವೇ ಫ್ರೀ ಪಟಾಕಿ ಹಂಚ್ತೀವಿʼ, ʻ ಕರಿ ʻMoney’ ಮಾಲೀಕ ನೀವಲ್ಲಾ, ಸಂಘಟನೆಯ ಸಿದ್ಧಾಂತ ಬಿಟ್ಟಿಲ್ಲ.. ನಿಮ್ಮನ್ನು ಗೆಲ್ಲಿಸದಿದ್ರೆ ಆ ದೇವ್ರು ಖಂಡಿತ ಮೆಚ್ಚಲ್ಲ ಅಣ್ಣʼ ಅಂತೆಲ್ಲಾ ಟ್ವೀಟಿಸಿ ಅಭಿಮಾನಿಗಳು ಸಂಸದ ನಳಿನ್‌ ಕುಮಾರ್‌ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ದಕ್ಷಿಣ ಕನ್ನಡ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲು ಅವರಗೆ ಬಿಜೆಪಿ ಮತ್ತೊಮ್ಮೆ ಟಿಕೆಟ್ ನೀಡುವುದು ನಿಶ್ಚಿತವಾಗಿದ್ದು, ಅವರು ಮೂರನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಲಿದ್ದಾರೆ ಎಂಬುದು ಅವರ ಅಭಿಮಾನಿಗಳ ನಿರೀಕ್ಷೆ ಮತ್ತು ಕಾತರವಾಗಿದೆ.
ಇತ್ತ ಬ್ರಿಜೆಷ್ ಚೌಟ ಗೂ ಟಿಕೆಟ್ ಸಿಗುವ ನಿರೀಕ್ಷೆ ಇದ್ದು ಬಿಜೆಪಿ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಲಿದೆ ಎಂದು ಕಾದು ನೋಡಬೇಕಾಗಿದೆ. ಒಟ್ಟಿನಲ್ಲಿ ರಾಜ್ಯದಲ್ಲಿ ಜಟಾಪಟಿ ಯಲ್ಲಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಖಾಡಕ್ಕೆ ಇಳಿಸುವುದೇ ಬಿಜೆಪಿಗೆ ದೊಡ್ಡ ತಲೆನೋವಾಗಿದೆ.

ಇನ್ನೊಂದು ಕಡೆ ಸತ್ಯಜಿತ್ ಸುರತ್ಕಲ್ ಅವರು ಕೂಡ ಅಕಾಂಕ್ಷಿಯಾಗಿದ್ದು ಇದನ್ನೆಲ್ಲ ಯಾವ ರೀತಿ ಬಿಜೆಪಿ ರಾಷ್ಟ್ರೀಯ ನಾಯಕರು ಹತೋಟಿಗೆ ತರಲಿದ್ದಾರೆ ಎಂಬುದು ಕುತೂಹಲಕಾರಿಯಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ