ಭಾನುವಾರ, ಮೇ 19, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

Mangaluru: ಕಲ್ಲಡ್ಕದ ಬಸ್‌ನಲ್ಲಿದ್ದ ಹಿಂದೂ-ಮುಸ್ಲಿಂ ಜೋಡಿ ತಡೆದ ಭಜರಂಗದಳ ಕಾರ್ಯಕರ್ತರು!

Twitter
Facebook
LinkedIn
WhatsApp
Mangaluru: ಕಲ್ಲಡ್ಕದ ಬಸ್‌ನಲ್ಲಿದ್ದ ಹಿಂದೂ-ಮುಸ್ಲಿಂ ಜೋಡಿ ತಡೆದ ಭಜರಂಗದಳ ಕಾರ್ಯಕರ್ತರು!

ಕಲ್ಲಡ್ಕ (ಡಿ.16): ಬಸ್‌ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಹಿಂದೂ-ಮುಸ್ಲಿಂ ಜೋಡಿಯನ್ನು ತಡೆದ ಭಜರಂಗದಳ ಕಾರ್ಯಕರ್ತರು ಯುವತಿ ಜೊತೆ ಮಾತಿನ ಚಕಮಕಿ ನಡೆಸಿದ ಘಟನೆ ದ‌‌.ಕ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ದಾಸಕೋಡಿ ಬಳಿ ನಿನ್ನೆ (ಗುರುವಾರ) ರಾತ್ರಿ ನಡೆದಿದೆ. ಮುಸ್ಲಿಂ ಹುಡುಗನೊಂದಿಗೆ ಹಿಂದೂ ಹುಡುಗಿ ಪ್ರಯಾಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಂಗಳೂರಿನ ಪಂಪ್ ವೆಲ್ ಬಳಿ ತಡೆಯಲು ಯತ್ನಿಸಿ ವಿಫಲವಾದ ಕಾರ್ಯಕರ್ತರು ಕಲ್ಲಡ್ಕದ ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ನೀಡಿದ್ದಾರೆ. ಅದರಂತೆ ಕಲ್ಕಡ್ಕದ ದಾಸಕೋಡಿ ಬಳಿ ರಾತ್ರಿ ವೇಳೆ ದುರ್ಗಾಂಬ ಬಸ್ ತಡೆದು ಜೋಡಿ ಇಳಿಸಿ ಮಾತಿನ ಚಕಮಕಿ ನಡೆಸಿದ್ದಾರೆ. 

ಯುವತಿಗೆ ಬೈದು ಅಡ್ಡಿಪಡಿಸಿದ ಭಜರಂಗದಳ ಕಾರ್ಯಕರ್ತರು ಜೊತೆಯಾಗಿ ಪ್ರಯಾಣ ಬೆಳೆಸುವುದನ್ನ ಪ್ರಶ್ನೆ ಮಾಡಿ ಗಲಾಟೆ ಮಾಡಿದ್ದಾರೆ. ಮಹಮ್ಮದ್ ರಾಯಿಫ್ ಮತ್ತು ನಿಧಿ ಶೆಟ್ಟಿ ಎಂಬ ಯುವತಿ ಜೊತೆಯಾಗಿ ಪ್ರಯಾಣ ಬೆಳೆಸುತ್ತಿದ್ದರು ಎನ್ನಲಾಗಿದೆ. ಮಾಹಿತಿ ತಿಳಿದು ಬಸ್ ತಡೆದು ಅಡ್ಡಿ ಪಡಿಸಿ ಗಲಾಟೆ ಮಾಡಿದ ಬಳಿಕ ಬಂಟ್ವಾಳ ಪೊಲೀಸರಿಗೆ ಕಾರ್ಯಕರ್ತರು ಮಾಹಿತಿ ನೀಡಿದ್ದಾರೆ. ‌ಬಳಿಕ ಪೊಲೀಸರು ಮಧ್ಯ ಪ್ರವೇಶಿಸಿ ಪ್ರಕರಣ ಠಾಣೆಯ ಮೆಟ್ಟಿಲೇರಿದ್ದು, ಯಾವುದೇ ಪ್ರಕರಣ ದಾಖಲಾದ ಮಾಹಿತಿ ಇಲ್ಲ. ಭಟ್ಕಳ ಮೂಲದ ಯುವಕ ಮತ್ತು ಮಂಗಳೂರಿನ ಯುವತಿ ಬಸ್‌ನಲ್ಲಿ ಇದ್ದರು ಎಂದು ತಿಳಿದು ಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ